AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; ವಿಭಿನ್ನ ರೀತಿಯಲ್ಲಿ ನಾಮಪತ್ರ ಸಲ್ಲಿಸಿ ಗಮನ ಸೆಳೆದ ಅಭ್ಯರ್ಥಿ

ನಾನು ಮೊದಲು 1994ರಲ್ಲಿ ನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿದೆ. 1995ರಲ್ಲಿ ನಂತರ ಚೇರ್​ಮನ್​ ಪೋಸ್ಟ್​ಗಾಗಿ ಹೋರಾಟ ಮಾಡಿದೆ.  ಆಗ ನನ್ನ ಕೈಯಲ್ಲಿ ದುಡ್ಡು ಇರಲಿಲ್ಲ ಎಂದು ವೈಧರಾಜ್ ಕಿಶನ್ ತಿಳಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; ವಿಭಿನ್ನ ರೀತಿಯಲ್ಲಿ ನಾಮಪತ್ರ ಸಲ್ಲಿಸಿ ಗಮನ ಸೆಳೆದ ಅಭ್ಯರ್ಥಿ
ಪಿಪಿಇ ಕಿಟ್​ ಧರಿಸಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ
TV9 Web
| Edited By: |

Updated on: Jan 25, 2022 | 9:48 PM

Share

ಶಹಜಾನ್​ಪುರ: ಉತ್ತರಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Assembly Elction) ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಹಾಗೇ, ಉತ್ತರಪ್ರದೇಶದ ಶಹಜಾನ್​ಪುರ ವಿಧಾನಸಭಾ ಕ್ಷೇತ್ರದ, ಸಂಯುಕ್ತ ವಿಕಾಸ್​ ಪಾರ್ಟಿ ಅಭ್ಯರ್ಥಿ ವೈಧರಾಜ್ ಕಿಶನ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಅವರು ನಾಮಪತ್ರ ಸಲ್ಲಿಸಿದ್ದು ಸಖತ್​ ಸುದ್ದಿಯಾಗಿದೆ. ವೈಧರಾಜ್​ ಕಿಶನ್​ ಅವರು ಪಿಪಿಇ ಕಿಟ್​ ಧರಿಸಿ, ಕೈಯಲ್ಲಿ ಸ್ಯಾನಿಟೈಸರ್​ ಮತ್ತು ಥರ್ಮಲ್​ ಸ್ಕ್ಯಾನರ್​ ಹಿಡಿದು ನಾಮಪತ್ರ ಸಲ್ಲಿಸಿದ್ದೇ ಹೀಗೆ ಸುದ್ದಿಯಾಗಲು ಕಾರಣ.   ಇದುವರೆಗೆ 18 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಇವರೀಗ 19ನೇ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ವೈಧರಾಜ್ ಕೇವಲ ಶಹಜಾನ್​ಪುರದಿಂದ ಮಾತ್ರವಲ್ಲ, ಯೋಗಿ ಆದಿತ್ಯನಾಥ್​ ಸ್ಪರ್ಧಿಸುತ್ತಿರುವ ಗೋರಖ್​ಪುರ ವಿಧಾನಸಭಾ ಕ್ಷೇತ್ರದಿಂದಲೂ ಕಣಕ್ಕಿಳಿಯಲಿದ್ದಾರೆ. ಅಲ್ಲಿ ಕೂಡ ಶೀಘ್ರದಲ್ಲೇ ನಾಮಪತ್ರ ಸಲ್ಲಿಸಲಿದ್ದಾರೆ.  

ನೀವ್ಯಾಕೆ ಪಿಪಿಇ ಕಿಟ್​ ಧರಿಸಿ ನಾಮಪತ್ರ ಸಲ್ಲಿಸಲು ಬಂದಿದ್ದೀರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಎದುರು ಮೊದಲು ಯಾರು ಬರುತ್ತಾರೋ ಮೊದಲು ಅವರ ದೇಹದ ತಾಪಮಾನ ಚೆಕ್​ ಮಾಡುತ್ತೇನೆ. ಅದಕ್ಕಾಗಿಯೇ ಥರ್ಮಲ್​ ಸ್ಕ್ಯಾನರ್​ ಹಿಡಿದಿದ್ದೇನೆ. ಇನ್ನು ನನ್ನನ್ನು ನಾನು ಕೊರೊನಾದಿಂದ ರಕ್ಷಿಸಿಕೊಳ್ಳುವ ಸಲುವಾಗಿ ಪಿಪಿಇ ಕಿಟ್ ಧರಿಸಿದ್ದೇನೆ. ಸ್ಯಾನಿಟೈಸರ್​ ಕೈ ಸ್ವಚ್ಛಗೊಳಿಸಿಕೊಳ್ಳಲು ಬೇಕಾಗುತ್ತದೆ ಎಂದು ಹೇಳಿದರು.

ನಂತರ ತಮ್ಮ ಚುನಾವಣೆ ದಾರಿಯ ಬಗ್ಗೆ ವಿವರಿಸಿದ ಅವರು, ನಾನು ಮೊದಲು 1994ರಲ್ಲಿ ನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿದೆ. 1995ರಲ್ಲಿ ನಂತರ ಚೇರ್​ಮನ್​ ಪೋಸ್ಟ್​ಗಾಗಿ ಹೋರಾಟ ಮಾಡಿದೆ.  ಆಗ ನನ್ನ ಕೈಯಲ್ಲಿ ದುಡ್ಡು ಇರಲಿಲ್ಲ. ಹೀಗಾಗಿ ಮತ ಕೇಳುವ ಜತೆ, ಹಣವನ್ನೂ ಕೇಳುತ್ತಿದ್ದೆ.  ನಂತರ ಚುನಾವಣೆಯಲ್ಲಿ 8 ಸಾವಿರ ಮತಗಳು ಬಂದವು. 1.5 ಲಕ್ಷ ರೂಪಾಯಿ ನಗದು ಸಂಗ್ರಹವಾಯಿತು. ಇದು ನನ್ನ 19ನೇ ಚುನಾವಣೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೇಡವೆಂದರೂ ತಲೆಗೆ ಸುತ್ತಿದ ರುಮಾಲನ್ನು ಕಿತ್ತು ಬಿಸಾಡಿದ ಸಿದ್ದರಾಮಯ್ಯ ಆಮೇಲೆ ತಮ್ಮ ಕ್ರಾಪು ಸರಿಮಾಡಿಕೊಂಡರು!!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ