AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; ವಿಭಿನ್ನ ರೀತಿಯಲ್ಲಿ ನಾಮಪತ್ರ ಸಲ್ಲಿಸಿ ಗಮನ ಸೆಳೆದ ಅಭ್ಯರ್ಥಿ

ನಾನು ಮೊದಲು 1994ರಲ್ಲಿ ನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿದೆ. 1995ರಲ್ಲಿ ನಂತರ ಚೇರ್​ಮನ್​ ಪೋಸ್ಟ್​ಗಾಗಿ ಹೋರಾಟ ಮಾಡಿದೆ.  ಆಗ ನನ್ನ ಕೈಯಲ್ಲಿ ದುಡ್ಡು ಇರಲಿಲ್ಲ ಎಂದು ವೈಧರಾಜ್ ಕಿಶನ್ ತಿಳಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; ವಿಭಿನ್ನ ರೀತಿಯಲ್ಲಿ ನಾಮಪತ್ರ ಸಲ್ಲಿಸಿ ಗಮನ ಸೆಳೆದ ಅಭ್ಯರ್ಥಿ
ಪಿಪಿಇ ಕಿಟ್​ ಧರಿಸಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ
TV9 Web
| Edited By: |

Updated on: Jan 25, 2022 | 9:48 PM

Share

ಶಹಜಾನ್​ಪುರ: ಉತ್ತರಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Assembly Elction) ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಹಾಗೇ, ಉತ್ತರಪ್ರದೇಶದ ಶಹಜಾನ್​ಪುರ ವಿಧಾನಸಭಾ ಕ್ಷೇತ್ರದ, ಸಂಯುಕ್ತ ವಿಕಾಸ್​ ಪಾರ್ಟಿ ಅಭ್ಯರ್ಥಿ ವೈಧರಾಜ್ ಕಿಶನ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಅವರು ನಾಮಪತ್ರ ಸಲ್ಲಿಸಿದ್ದು ಸಖತ್​ ಸುದ್ದಿಯಾಗಿದೆ. ವೈಧರಾಜ್​ ಕಿಶನ್​ ಅವರು ಪಿಪಿಇ ಕಿಟ್​ ಧರಿಸಿ, ಕೈಯಲ್ಲಿ ಸ್ಯಾನಿಟೈಸರ್​ ಮತ್ತು ಥರ್ಮಲ್​ ಸ್ಕ್ಯಾನರ್​ ಹಿಡಿದು ನಾಮಪತ್ರ ಸಲ್ಲಿಸಿದ್ದೇ ಹೀಗೆ ಸುದ್ದಿಯಾಗಲು ಕಾರಣ.   ಇದುವರೆಗೆ 18 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಇವರೀಗ 19ನೇ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ವೈಧರಾಜ್ ಕೇವಲ ಶಹಜಾನ್​ಪುರದಿಂದ ಮಾತ್ರವಲ್ಲ, ಯೋಗಿ ಆದಿತ್ಯನಾಥ್​ ಸ್ಪರ್ಧಿಸುತ್ತಿರುವ ಗೋರಖ್​ಪುರ ವಿಧಾನಸಭಾ ಕ್ಷೇತ್ರದಿಂದಲೂ ಕಣಕ್ಕಿಳಿಯಲಿದ್ದಾರೆ. ಅಲ್ಲಿ ಕೂಡ ಶೀಘ್ರದಲ್ಲೇ ನಾಮಪತ್ರ ಸಲ್ಲಿಸಲಿದ್ದಾರೆ.  

ನೀವ್ಯಾಕೆ ಪಿಪಿಇ ಕಿಟ್​ ಧರಿಸಿ ನಾಮಪತ್ರ ಸಲ್ಲಿಸಲು ಬಂದಿದ್ದೀರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಎದುರು ಮೊದಲು ಯಾರು ಬರುತ್ತಾರೋ ಮೊದಲು ಅವರ ದೇಹದ ತಾಪಮಾನ ಚೆಕ್​ ಮಾಡುತ್ತೇನೆ. ಅದಕ್ಕಾಗಿಯೇ ಥರ್ಮಲ್​ ಸ್ಕ್ಯಾನರ್​ ಹಿಡಿದಿದ್ದೇನೆ. ಇನ್ನು ನನ್ನನ್ನು ನಾನು ಕೊರೊನಾದಿಂದ ರಕ್ಷಿಸಿಕೊಳ್ಳುವ ಸಲುವಾಗಿ ಪಿಪಿಇ ಕಿಟ್ ಧರಿಸಿದ್ದೇನೆ. ಸ್ಯಾನಿಟೈಸರ್​ ಕೈ ಸ್ವಚ್ಛಗೊಳಿಸಿಕೊಳ್ಳಲು ಬೇಕಾಗುತ್ತದೆ ಎಂದು ಹೇಳಿದರು.

ನಂತರ ತಮ್ಮ ಚುನಾವಣೆ ದಾರಿಯ ಬಗ್ಗೆ ವಿವರಿಸಿದ ಅವರು, ನಾನು ಮೊದಲು 1994ರಲ್ಲಿ ನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿದೆ. 1995ರಲ್ಲಿ ನಂತರ ಚೇರ್​ಮನ್​ ಪೋಸ್ಟ್​ಗಾಗಿ ಹೋರಾಟ ಮಾಡಿದೆ.  ಆಗ ನನ್ನ ಕೈಯಲ್ಲಿ ದುಡ್ಡು ಇರಲಿಲ್ಲ. ಹೀಗಾಗಿ ಮತ ಕೇಳುವ ಜತೆ, ಹಣವನ್ನೂ ಕೇಳುತ್ತಿದ್ದೆ.  ನಂತರ ಚುನಾವಣೆಯಲ್ಲಿ 8 ಸಾವಿರ ಮತಗಳು ಬಂದವು. 1.5 ಲಕ್ಷ ರೂಪಾಯಿ ನಗದು ಸಂಗ್ರಹವಾಯಿತು. ಇದು ನನ್ನ 19ನೇ ಚುನಾವಣೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೇಡವೆಂದರೂ ತಲೆಗೆ ಸುತ್ತಿದ ರುಮಾಲನ್ನು ಕಿತ್ತು ಬಿಸಾಡಿದ ಸಿದ್ದರಾಮಯ್ಯ ಆಮೇಲೆ ತಮ್ಮ ಕ್ರಾಪು ಸರಿಮಾಡಿಕೊಂಡರು!!

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ