AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಮರು ಆರಂಭ ಸರ್ಕಾರಗಳಿಗೆ ಬಿಟ್ಟ ವಿಷಯ, ನಾವು ಏನೂ ನಿರ್ದೇಶನ ಕೊಡೋದಿಲ್ಲ: ಸುಪ್ರೀಂಕೋರ್ಟ್​

ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಮಕ್ಕಳ ಶಿಕ್ಷಣದ ಬಗ್ಗೆ ಖಂಡಿತ ಸರ್ಕಾರಗಳಿಗೆ ಸಾಕಷ್ಟು ಅರಿವಿದೆ ಎಂದು ಹೇಳಿದ್ದಾರೆ.

ಶಾಲೆ ಮರು ಆರಂಭ ಸರ್ಕಾರಗಳಿಗೆ ಬಿಟ್ಟ ವಿಷಯ, ನಾವು ಏನೂ ನಿರ್ದೇಶನ ಕೊಡೋದಿಲ್ಲ: ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​
TV9 Web
| Edited By: |

Updated on: Sep 20, 2021 | 3:07 PM

Share

ದೇಶದಲ್ಲೀಗ ಕೊರೊನಾ ವೈರಸ್​ ಪ್ರಮಾಣ ತುಸು ಇಳಿಮುಖವಾಗುತ್ತಿದ್ದಂತೆ ಶಾಲೆಗಳನ್ನು ತೆರೆಯಬೇಕು ಎಂಬ ಬೇಡಿಕೆಯೂ ಹೆಚ್ಚುತ್ತಿದೆ. ಹಾಗೇ, 12 ವರ್ಷದ ದೆಹಲಿಯ ವಿದ್ಯಾರ್ಥಿಯೊಬ್ಬರು ಸುಪ್ರೀಂಕೋರ್ಟ್ (Supreme Court)​ಗೆ ಅರ್ಜಿ ಸಲ್ಲಿಸಿ, ಶಾಲೆಗಳನ್ನು ತೆರೆಯುವಂತೆ ಸರ್ಕಾರಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿದ್ದರು. ಆದರೆ ಸರ್ವೋಚ್ಛ ನ್ಯಾಯಾಲಯ ಅರ್ಜಿಯನ್ನು ವಜಾ ಮಾಡಿದೆ. ಶಾಲೆ ತೆರೆಯಿರಿ ಎಂದು ಕೇಂದ್ರ ಅಥವಾ ರಾಜ್ಯ ಸರ್ಕಾರಗಳಿಗೆ ಯಾವುದೇ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.   

ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಮಕ್ಕಳ ಶಿಕ್ಷಣದ ಬಗ್ಗೆ ಖಂಡಿತ ಸರ್ಕಾರಗಳಿಗೆ ಸಾಕಷ್ಟು ಅರಿವಿದೆ. ಕೊರೊನಾ ತಡೆಗೆ ಲಸಿಕಾ ಅಭಿಯಾನ ನಡೆಯುತ್ತಿದೆ. ಈ ಹೊತ್ತಲ್ಲಿ ಮಕ್ಕಳನ್ನು ಶಾಲೆಗೆ ಕಳಿಸಿ ಎಂದು ನಾವು ನ್ಯಾಯಾಂಗ ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಅರ್ಜಿ ಸಲ್ಲಿಸಿದ್ದು ಪ್ರಚಾರದ ಗಿಮಿಕ್​ ಎಂದು ನಾವು ಹೇಳುವುದಿಲ್ಲ. ಆದರೆ ಮಕ್ಕಳು ಇಂಥ ವಿಚಾರದಲ್ಲಿ ಭಾಗವಹಿಸಬಾರದು. ಪಾಲಕರು ತಮ್ಮ ಮಕ್ಕಳು ಅಧ್ಯಯನ ಮಾಡುವಂತೆ ಪ್ರೇರೇಪಿಸಬೇಕು ಹೊರತು, ಸಾಂವಿಧಾನಿಕ ಹೆಜ್ಜೆ ಇಡುವಂತೆ ಮಾಡಬಾರದು ಎಂದು ಹೇಳಿದ್ದಾರೆ.

ಶಾಲೆ ಮರು ಆರಂಭ ಒಂದು ಬಹುದೊಡ್ಡ ಸಮಸ್ಯೆ ಅಲ್ಲ. ಅದರಲ್ಲೂ ಸರ್ಕಾರಗಳಿಗೆ ಸುಪ್ರೀಂಕೋರ್ಟ್​ ನಿರ್ದೇಶನ ನೀಡುವಂಥ ಸಮಸ್ಯೆ ಖಂಡಿತ ಅಲ್ಲ. ಇದನ್ನು ಸರ್ಕಾರಗಳಿಗೆ, ಸ್ಥಳೀಯ ಆಡಳಿತಗಳಿಗೆ ಬಿಡಬೇಕು. ಕೊರೊನಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲನೆ ಮಾಡಿ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು  ಸುಪ್ರೀಂಕೋರ್ಟ್​ ಹೇಳಿದೆ.

ಇದನ್ನೂ ಒದಿ: ‘ನಂದ ಲವ್ಸ್​ ನಂದಿತ’ ಖ್ಯಾತಿಯ ನಟಿ ಶ್ವೇತಾ ತಂದೆ ನಿಧನ; ಅಭಿಮಾನಿಗಳ ಸಂತಾಪ

Ind vs Aus: ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ತಂಡದ ಸ್ಫೋಟಕ ಆಟಗಾರ್ತಿ ಮೊದಲ ಪಂದ್ಯಕ್ಕೆ ಅಲಭ್ಯ!

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!