AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಮರು ಆರಂಭ ಸರ್ಕಾರಗಳಿಗೆ ಬಿಟ್ಟ ವಿಷಯ, ನಾವು ಏನೂ ನಿರ್ದೇಶನ ಕೊಡೋದಿಲ್ಲ: ಸುಪ್ರೀಂಕೋರ್ಟ್​

ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಮಕ್ಕಳ ಶಿಕ್ಷಣದ ಬಗ್ಗೆ ಖಂಡಿತ ಸರ್ಕಾರಗಳಿಗೆ ಸಾಕಷ್ಟು ಅರಿವಿದೆ ಎಂದು ಹೇಳಿದ್ದಾರೆ.

ಶಾಲೆ ಮರು ಆರಂಭ ಸರ್ಕಾರಗಳಿಗೆ ಬಿಟ್ಟ ವಿಷಯ, ನಾವು ಏನೂ ನಿರ್ದೇಶನ ಕೊಡೋದಿಲ್ಲ: ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​
Follow us
TV9 Web
| Updated By: Lakshmi Hegde

Updated on: Sep 20, 2021 | 3:07 PM

ದೇಶದಲ್ಲೀಗ ಕೊರೊನಾ ವೈರಸ್​ ಪ್ರಮಾಣ ತುಸು ಇಳಿಮುಖವಾಗುತ್ತಿದ್ದಂತೆ ಶಾಲೆಗಳನ್ನು ತೆರೆಯಬೇಕು ಎಂಬ ಬೇಡಿಕೆಯೂ ಹೆಚ್ಚುತ್ತಿದೆ. ಹಾಗೇ, 12 ವರ್ಷದ ದೆಹಲಿಯ ವಿದ್ಯಾರ್ಥಿಯೊಬ್ಬರು ಸುಪ್ರೀಂಕೋರ್ಟ್ (Supreme Court)​ಗೆ ಅರ್ಜಿ ಸಲ್ಲಿಸಿ, ಶಾಲೆಗಳನ್ನು ತೆರೆಯುವಂತೆ ಸರ್ಕಾರಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿದ್ದರು. ಆದರೆ ಸರ್ವೋಚ್ಛ ನ್ಯಾಯಾಲಯ ಅರ್ಜಿಯನ್ನು ವಜಾ ಮಾಡಿದೆ. ಶಾಲೆ ತೆರೆಯಿರಿ ಎಂದು ಕೇಂದ್ರ ಅಥವಾ ರಾಜ್ಯ ಸರ್ಕಾರಗಳಿಗೆ ಯಾವುದೇ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.   

ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಮಕ್ಕಳ ಶಿಕ್ಷಣದ ಬಗ್ಗೆ ಖಂಡಿತ ಸರ್ಕಾರಗಳಿಗೆ ಸಾಕಷ್ಟು ಅರಿವಿದೆ. ಕೊರೊನಾ ತಡೆಗೆ ಲಸಿಕಾ ಅಭಿಯಾನ ನಡೆಯುತ್ತಿದೆ. ಈ ಹೊತ್ತಲ್ಲಿ ಮಕ್ಕಳನ್ನು ಶಾಲೆಗೆ ಕಳಿಸಿ ಎಂದು ನಾವು ನ್ಯಾಯಾಂಗ ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಅರ್ಜಿ ಸಲ್ಲಿಸಿದ್ದು ಪ್ರಚಾರದ ಗಿಮಿಕ್​ ಎಂದು ನಾವು ಹೇಳುವುದಿಲ್ಲ. ಆದರೆ ಮಕ್ಕಳು ಇಂಥ ವಿಚಾರದಲ್ಲಿ ಭಾಗವಹಿಸಬಾರದು. ಪಾಲಕರು ತಮ್ಮ ಮಕ್ಕಳು ಅಧ್ಯಯನ ಮಾಡುವಂತೆ ಪ್ರೇರೇಪಿಸಬೇಕು ಹೊರತು, ಸಾಂವಿಧಾನಿಕ ಹೆಜ್ಜೆ ಇಡುವಂತೆ ಮಾಡಬಾರದು ಎಂದು ಹೇಳಿದ್ದಾರೆ.

ಶಾಲೆ ಮರು ಆರಂಭ ಒಂದು ಬಹುದೊಡ್ಡ ಸಮಸ್ಯೆ ಅಲ್ಲ. ಅದರಲ್ಲೂ ಸರ್ಕಾರಗಳಿಗೆ ಸುಪ್ರೀಂಕೋರ್ಟ್​ ನಿರ್ದೇಶನ ನೀಡುವಂಥ ಸಮಸ್ಯೆ ಖಂಡಿತ ಅಲ್ಲ. ಇದನ್ನು ಸರ್ಕಾರಗಳಿಗೆ, ಸ್ಥಳೀಯ ಆಡಳಿತಗಳಿಗೆ ಬಿಡಬೇಕು. ಕೊರೊನಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲನೆ ಮಾಡಿ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು  ಸುಪ್ರೀಂಕೋರ್ಟ್​ ಹೇಳಿದೆ.

ಇದನ್ನೂ ಒದಿ: ‘ನಂದ ಲವ್ಸ್​ ನಂದಿತ’ ಖ್ಯಾತಿಯ ನಟಿ ಶ್ವೇತಾ ತಂದೆ ನಿಧನ; ಅಭಿಮಾನಿಗಳ ಸಂತಾಪ

Ind vs Aus: ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ತಂಡದ ಸ್ಫೋಟಕ ಆಟಗಾರ್ತಿ ಮೊದಲ ಪಂದ್ಯಕ್ಕೆ ಅಲಭ್ಯ!

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್