AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಮರು ಆರಂಭ ಸರ್ಕಾರಗಳಿಗೆ ಬಿಟ್ಟ ವಿಷಯ, ನಾವು ಏನೂ ನಿರ್ದೇಶನ ಕೊಡೋದಿಲ್ಲ: ಸುಪ್ರೀಂಕೋರ್ಟ್​

ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಮಕ್ಕಳ ಶಿಕ್ಷಣದ ಬಗ್ಗೆ ಖಂಡಿತ ಸರ್ಕಾರಗಳಿಗೆ ಸಾಕಷ್ಟು ಅರಿವಿದೆ ಎಂದು ಹೇಳಿದ್ದಾರೆ.

ಶಾಲೆ ಮರು ಆರಂಭ ಸರ್ಕಾರಗಳಿಗೆ ಬಿಟ್ಟ ವಿಷಯ, ನಾವು ಏನೂ ನಿರ್ದೇಶನ ಕೊಡೋದಿಲ್ಲ: ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​
TV9 Web
| Edited By: |

Updated on: Sep 20, 2021 | 3:07 PM

Share

ದೇಶದಲ್ಲೀಗ ಕೊರೊನಾ ವೈರಸ್​ ಪ್ರಮಾಣ ತುಸು ಇಳಿಮುಖವಾಗುತ್ತಿದ್ದಂತೆ ಶಾಲೆಗಳನ್ನು ತೆರೆಯಬೇಕು ಎಂಬ ಬೇಡಿಕೆಯೂ ಹೆಚ್ಚುತ್ತಿದೆ. ಹಾಗೇ, 12 ವರ್ಷದ ದೆಹಲಿಯ ವಿದ್ಯಾರ್ಥಿಯೊಬ್ಬರು ಸುಪ್ರೀಂಕೋರ್ಟ್ (Supreme Court)​ಗೆ ಅರ್ಜಿ ಸಲ್ಲಿಸಿ, ಶಾಲೆಗಳನ್ನು ತೆರೆಯುವಂತೆ ಸರ್ಕಾರಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿದ್ದರು. ಆದರೆ ಸರ್ವೋಚ್ಛ ನ್ಯಾಯಾಲಯ ಅರ್ಜಿಯನ್ನು ವಜಾ ಮಾಡಿದೆ. ಶಾಲೆ ತೆರೆಯಿರಿ ಎಂದು ಕೇಂದ್ರ ಅಥವಾ ರಾಜ್ಯ ಸರ್ಕಾರಗಳಿಗೆ ಯಾವುದೇ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.   

ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಮಕ್ಕಳ ಶಿಕ್ಷಣದ ಬಗ್ಗೆ ಖಂಡಿತ ಸರ್ಕಾರಗಳಿಗೆ ಸಾಕಷ್ಟು ಅರಿವಿದೆ. ಕೊರೊನಾ ತಡೆಗೆ ಲಸಿಕಾ ಅಭಿಯಾನ ನಡೆಯುತ್ತಿದೆ. ಈ ಹೊತ್ತಲ್ಲಿ ಮಕ್ಕಳನ್ನು ಶಾಲೆಗೆ ಕಳಿಸಿ ಎಂದು ನಾವು ನ್ಯಾಯಾಂಗ ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಅರ್ಜಿ ಸಲ್ಲಿಸಿದ್ದು ಪ್ರಚಾರದ ಗಿಮಿಕ್​ ಎಂದು ನಾವು ಹೇಳುವುದಿಲ್ಲ. ಆದರೆ ಮಕ್ಕಳು ಇಂಥ ವಿಚಾರದಲ್ಲಿ ಭಾಗವಹಿಸಬಾರದು. ಪಾಲಕರು ತಮ್ಮ ಮಕ್ಕಳು ಅಧ್ಯಯನ ಮಾಡುವಂತೆ ಪ್ರೇರೇಪಿಸಬೇಕು ಹೊರತು, ಸಾಂವಿಧಾನಿಕ ಹೆಜ್ಜೆ ಇಡುವಂತೆ ಮಾಡಬಾರದು ಎಂದು ಹೇಳಿದ್ದಾರೆ.

ಶಾಲೆ ಮರು ಆರಂಭ ಒಂದು ಬಹುದೊಡ್ಡ ಸಮಸ್ಯೆ ಅಲ್ಲ. ಅದರಲ್ಲೂ ಸರ್ಕಾರಗಳಿಗೆ ಸುಪ್ರೀಂಕೋರ್ಟ್​ ನಿರ್ದೇಶನ ನೀಡುವಂಥ ಸಮಸ್ಯೆ ಖಂಡಿತ ಅಲ್ಲ. ಇದನ್ನು ಸರ್ಕಾರಗಳಿಗೆ, ಸ್ಥಳೀಯ ಆಡಳಿತಗಳಿಗೆ ಬಿಡಬೇಕು. ಕೊರೊನಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲನೆ ಮಾಡಿ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು  ಸುಪ್ರೀಂಕೋರ್ಟ್​ ಹೇಳಿದೆ.

ಇದನ್ನೂ ಒದಿ: ‘ನಂದ ಲವ್ಸ್​ ನಂದಿತ’ ಖ್ಯಾತಿಯ ನಟಿ ಶ್ವೇತಾ ತಂದೆ ನಿಧನ; ಅಭಿಮಾನಿಗಳ ಸಂತಾಪ

Ind vs Aus: ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ತಂಡದ ಸ್ಫೋಟಕ ಆಟಗಾರ್ತಿ ಮೊದಲ ಪಂದ್ಯಕ್ಕೆ ಅಲಭ್ಯ!

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ