Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ

ಕೊರೊನಾ ಸೋಂಕು ದಾಂಗುಡಿ ಇಟ್ಟ ಮೇಲೆ ಜನರು ಕೈಕುಲಕಲು, ಪರಸ್ಪರ ಅಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಗತ್ತಿನಾದ್ಯಂತ ಒಂದು ದಿನಕ್ಕೆ ಸಾವಿರ ಜನರು ಕೊವಿಡ್​ನಿಂದ ಸಾಯುತ್ತಿದ್ದಾರೆ ಎಂದು ಫಾರೂಕ್​ ಅಬ್ದುಲ್ಲಾ ಆತಂಕ ವ್ಯಕ್ತಪಡಿಸಿದರು.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ
ಫಾರೂಕ್​ ಅಬ್ದುಲ್ಲಾ
Follow us
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 18, 2021 | 4:21 PM

ದೆಹಲಿ: ಇಂದು ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ನ್ಯಾಷನಲ್​ ಕಾನ್ಫರೆನ್ಸ್​ ಪಕ್ಷದ ಅಧ್ಯಕ್ಷ, ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಬಗ್ಗೆ ತುಂಬ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಹೇಳಿದ್ದನ್ನು ಕೇಳಿ ಪ್ರೇಕ್ಷಕರು ನಗೆಗಡಲಲ್ಲಿ ತೇಲಿದ್ದಾರೆ.

ಸುಮಾರು 35 ನಿಮಿಷಗಳ ಭಾಷಣದಲ್ಲಿ ಕೊರೊನಾ ಬಗ್ಗೆ ಬೇಸರ ವ್ಯಕ್ತಪಡಿಸಿದ 83 ವರ್ಷದ  ಫಾರೂಕ್​, ಕೊರೊನಾ ಸೋಂಕಿನಿಂದ ನನ್ನ ಜೀವನಕ್ಕೆ ಅಡ್ಡಿಯಾಗಿದ್ದಂತೂ ಸತ್ಯ. ಕೊರೊನಾ ಬಂದಾಗಿನಿಂದ ನನಗೆ ನನ್ನ ಪತ್ನಿಗೆ ಚುಂಬಿಸಲು ಸಾಧ್ಯವಾಗಿಲ್ಲ. ಇನ್ನು ತಬ್ಬಿಕೊಳ್ಳುವ ಪ್ರಶ್ನೆಯೇ ಇಲ್ಲ ಬಿಡಿ. ಇದೆಲ್ಲ ಯಾರಿಗೆ ಗೊತ್ತು? ನನ್ನ ಹೃದಯ ಇದೆನ್ನಲ್ಲ ಬಯಸುತ್ತದೆ. ಆದರೆ ಏನೂ ಮಾಡಲು ಸಾಧ್ಯವಾಗಿಲ್ಲ. ಈ ಮಾತುಗಳನ್ನು ಸುಮ್ಮನೆ ಹೇಳುತ್ತಿಲ್ಲ. ನನಗಾದ ಸಮಸ್ಯೆಯನ್ನು ಪ್ರಾಮಾಣಿಕವಾಗಿ ಹೇಳಿಕೊಳ್ಳುತ್ತಿದ್ದೇನೆ ಎಂದಿದ್ದೇನೆ.

ಕೊರೊನಾ ಸೋಂಕು ದಾಂಗುಡಿ ಇಟ್ಟ ಮೇಲೆ ಜನರು ಕೈಕುಲಕಲು, ಪರಸ್ಪರ ಅಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಗತ್ತಿನಾದ್ಯಂತ ಒಂದು ದಿನಕ್ಕೆ ಸಾವಿರ ಜನರು ಕೊವಿಡ್​ನಿಂದ ಸಾಯುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಆದಷ್ಟು ಬೇಗ, ಇಡೀ ಜಗತ್ತು ಕೊರೊನಾದಿಂದ ಮುಕ್ತವಾಗಿ, ಸಹಜಸ್ಥಿತಿಗೆ ಬರಲೆಂದು ಪ್ರಾರ್ಥಿಸುತ್ತೇನೆ ಎಂದೂ ಹೇಳಿದರು.

2021ರ ಮೊದಲ ದಿನ | ಕ್ಯಾಮೆರಾ ಕಣ್ಣಿಗೆ ಕಂಡ ಬಗೆಬಗೆಯ ನೋಟಗಳು

ಲಹರಿ | ಲಾಕ್​ಡೌನ್ ಏಕಾಂತದಲ್ಲಿ ಮನೆಮುಂದೆ ಗಿಡ ಬೆಳೆಸಿದೆ, ಹೂ ಅರಳಿತು

Published On - 4:13 pm, Mon, 18 January 21

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್