AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ

ಕೊರೊನಾ ಸೋಂಕು ದಾಂಗುಡಿ ಇಟ್ಟ ಮೇಲೆ ಜನರು ಕೈಕುಲಕಲು, ಪರಸ್ಪರ ಅಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಗತ್ತಿನಾದ್ಯಂತ ಒಂದು ದಿನಕ್ಕೆ ಸಾವಿರ ಜನರು ಕೊವಿಡ್​ನಿಂದ ಸಾಯುತ್ತಿದ್ದಾರೆ ಎಂದು ಫಾರೂಕ್​ ಅಬ್ದುಲ್ಲಾ ಆತಂಕ ವ್ಯಕ್ತಪಡಿಸಿದರು.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ
ಫಾರೂಕ್​ ಅಬ್ದುಲ್ಲಾ
Lakshmi Hegde
| Edited By: |

Updated on:Jan 18, 2021 | 4:21 PM

Share

ದೆಹಲಿ: ಇಂದು ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ನ್ಯಾಷನಲ್​ ಕಾನ್ಫರೆನ್ಸ್​ ಪಕ್ಷದ ಅಧ್ಯಕ್ಷ, ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಬಗ್ಗೆ ತುಂಬ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಹೇಳಿದ್ದನ್ನು ಕೇಳಿ ಪ್ರೇಕ್ಷಕರು ನಗೆಗಡಲಲ್ಲಿ ತೇಲಿದ್ದಾರೆ.

ಸುಮಾರು 35 ನಿಮಿಷಗಳ ಭಾಷಣದಲ್ಲಿ ಕೊರೊನಾ ಬಗ್ಗೆ ಬೇಸರ ವ್ಯಕ್ತಪಡಿಸಿದ 83 ವರ್ಷದ  ಫಾರೂಕ್​, ಕೊರೊನಾ ಸೋಂಕಿನಿಂದ ನನ್ನ ಜೀವನಕ್ಕೆ ಅಡ್ಡಿಯಾಗಿದ್ದಂತೂ ಸತ್ಯ. ಕೊರೊನಾ ಬಂದಾಗಿನಿಂದ ನನಗೆ ನನ್ನ ಪತ್ನಿಗೆ ಚುಂಬಿಸಲು ಸಾಧ್ಯವಾಗಿಲ್ಲ. ಇನ್ನು ತಬ್ಬಿಕೊಳ್ಳುವ ಪ್ರಶ್ನೆಯೇ ಇಲ್ಲ ಬಿಡಿ. ಇದೆಲ್ಲ ಯಾರಿಗೆ ಗೊತ್ತು? ನನ್ನ ಹೃದಯ ಇದೆನ್ನಲ್ಲ ಬಯಸುತ್ತದೆ. ಆದರೆ ಏನೂ ಮಾಡಲು ಸಾಧ್ಯವಾಗಿಲ್ಲ. ಈ ಮಾತುಗಳನ್ನು ಸುಮ್ಮನೆ ಹೇಳುತ್ತಿಲ್ಲ. ನನಗಾದ ಸಮಸ್ಯೆಯನ್ನು ಪ್ರಾಮಾಣಿಕವಾಗಿ ಹೇಳಿಕೊಳ್ಳುತ್ತಿದ್ದೇನೆ ಎಂದಿದ್ದೇನೆ.

ಕೊರೊನಾ ಸೋಂಕು ದಾಂಗುಡಿ ಇಟ್ಟ ಮೇಲೆ ಜನರು ಕೈಕುಲಕಲು, ಪರಸ್ಪರ ಅಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಗತ್ತಿನಾದ್ಯಂತ ಒಂದು ದಿನಕ್ಕೆ ಸಾವಿರ ಜನರು ಕೊವಿಡ್​ನಿಂದ ಸಾಯುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಆದಷ್ಟು ಬೇಗ, ಇಡೀ ಜಗತ್ತು ಕೊರೊನಾದಿಂದ ಮುಕ್ತವಾಗಿ, ಸಹಜಸ್ಥಿತಿಗೆ ಬರಲೆಂದು ಪ್ರಾರ್ಥಿಸುತ್ತೇನೆ ಎಂದೂ ಹೇಳಿದರು.

2021ರ ಮೊದಲ ದಿನ | ಕ್ಯಾಮೆರಾ ಕಣ್ಣಿಗೆ ಕಂಡ ಬಗೆಬಗೆಯ ನೋಟಗಳು

ಲಹರಿ | ಲಾಕ್​ಡೌನ್ ಏಕಾಂತದಲ್ಲಿ ಮನೆಮುಂದೆ ಗಿಡ ಬೆಳೆಸಿದೆ, ಹೂ ಅರಳಿತು

Published On - 4:13 pm, Mon, 18 January 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ