AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ

ಕೊರೊನಾ ಸೋಂಕು ದಾಂಗುಡಿ ಇಟ್ಟ ಮೇಲೆ ಜನರು ಕೈಕುಲಕಲು, ಪರಸ್ಪರ ಅಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಗತ್ತಿನಾದ್ಯಂತ ಒಂದು ದಿನಕ್ಕೆ ಸಾವಿರ ಜನರು ಕೊವಿಡ್​ನಿಂದ ಸಾಯುತ್ತಿದ್ದಾರೆ ಎಂದು ಫಾರೂಕ್​ ಅಬ್ದುಲ್ಲಾ ಆತಂಕ ವ್ಯಕ್ತಪಡಿಸಿದರು.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ
ಫಾರೂಕ್​ ಅಬ್ದುಲ್ಲಾ
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 18, 2021 | 4:21 PM

Share

ದೆಹಲಿ: ಇಂದು ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ನ್ಯಾಷನಲ್​ ಕಾನ್ಫರೆನ್ಸ್​ ಪಕ್ಷದ ಅಧ್ಯಕ್ಷ, ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಬಗ್ಗೆ ತುಂಬ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಹೇಳಿದ್ದನ್ನು ಕೇಳಿ ಪ್ರೇಕ್ಷಕರು ನಗೆಗಡಲಲ್ಲಿ ತೇಲಿದ್ದಾರೆ.

ಸುಮಾರು 35 ನಿಮಿಷಗಳ ಭಾಷಣದಲ್ಲಿ ಕೊರೊನಾ ಬಗ್ಗೆ ಬೇಸರ ವ್ಯಕ್ತಪಡಿಸಿದ 83 ವರ್ಷದ  ಫಾರೂಕ್​, ಕೊರೊನಾ ಸೋಂಕಿನಿಂದ ನನ್ನ ಜೀವನಕ್ಕೆ ಅಡ್ಡಿಯಾಗಿದ್ದಂತೂ ಸತ್ಯ. ಕೊರೊನಾ ಬಂದಾಗಿನಿಂದ ನನಗೆ ನನ್ನ ಪತ್ನಿಗೆ ಚುಂಬಿಸಲು ಸಾಧ್ಯವಾಗಿಲ್ಲ. ಇನ್ನು ತಬ್ಬಿಕೊಳ್ಳುವ ಪ್ರಶ್ನೆಯೇ ಇಲ್ಲ ಬಿಡಿ. ಇದೆಲ್ಲ ಯಾರಿಗೆ ಗೊತ್ತು? ನನ್ನ ಹೃದಯ ಇದೆನ್ನಲ್ಲ ಬಯಸುತ್ತದೆ. ಆದರೆ ಏನೂ ಮಾಡಲು ಸಾಧ್ಯವಾಗಿಲ್ಲ. ಈ ಮಾತುಗಳನ್ನು ಸುಮ್ಮನೆ ಹೇಳುತ್ತಿಲ್ಲ. ನನಗಾದ ಸಮಸ್ಯೆಯನ್ನು ಪ್ರಾಮಾಣಿಕವಾಗಿ ಹೇಳಿಕೊಳ್ಳುತ್ತಿದ್ದೇನೆ ಎಂದಿದ್ದೇನೆ.

ಕೊರೊನಾ ಸೋಂಕು ದಾಂಗುಡಿ ಇಟ್ಟ ಮೇಲೆ ಜನರು ಕೈಕುಲಕಲು, ಪರಸ್ಪರ ಅಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಗತ್ತಿನಾದ್ಯಂತ ಒಂದು ದಿನಕ್ಕೆ ಸಾವಿರ ಜನರು ಕೊವಿಡ್​ನಿಂದ ಸಾಯುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಆದಷ್ಟು ಬೇಗ, ಇಡೀ ಜಗತ್ತು ಕೊರೊನಾದಿಂದ ಮುಕ್ತವಾಗಿ, ಸಹಜಸ್ಥಿತಿಗೆ ಬರಲೆಂದು ಪ್ರಾರ್ಥಿಸುತ್ತೇನೆ ಎಂದೂ ಹೇಳಿದರು.

2021ರ ಮೊದಲ ದಿನ | ಕ್ಯಾಮೆರಾ ಕಣ್ಣಿಗೆ ಕಂಡ ಬಗೆಬಗೆಯ ನೋಟಗಳು

ಲಹರಿ | ಲಾಕ್​ಡೌನ್ ಏಕಾಂತದಲ್ಲಿ ಮನೆಮುಂದೆ ಗಿಡ ಬೆಳೆಸಿದೆ, ಹೂ ಅರಳಿತು

Published On - 4:13 pm, Mon, 18 January 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!