AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಸಂತ್ರಸ್ತೆ ರಾತ್ರೋ ರಾತ್ರಿ ಪೊಲೀಸ್​ ಠಾಣೆಗೆ ಬಂದು ದೂರು ನೀಡಬೇಕೆಂದು ಅಪೇಕ್ಷಿಸುವುದು ತಪ್ಪು: ಕೋರ್ಟ್​

ಅತ್ಯಾಚಾರವಾದ ತಕ್ಷಣವೇ ಸಂತ್ರಸ್ತೆ ಪೊಲೀಸ್​ ಠಾಣೆಗೆ ಬಂದು ದೂರು ನೀಡಬೇಕೆಂದು ಅಪೇಕ್ಷಿಸುವುದು ತಪ್ಪು ಎಂದು ಬಾಂಬೆ ಹೈಕೋರ್ಟ್​ನ ಪೀಠ ಅಭಿಪ್ರಾಯಪಟ್ಟಿದೆ. 35 ವರ್ಷ ವಯಸ್ಸಿನ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಅಮರಾವತಿ ಸೆಷನ್ಸ್​ ನ್ಯಾಯಾಲಯದ ತೀರ್ಪನ್ನು ಬಾಂಬೆ ಹೈಕೋರ್ಟ್​ ಎತ್ತಿಹಿಡಿದಿದೆ. ಆರೋಪಿಯನ್ನು ಅಪರಾಧಿ ಎಂದು ತೀರ್ಪು ನೀಡಿದೆ. 10 ವರ್ಷಗಳ ಶಿಕ್ಷೆಯನ್ನು ಎತ್ತಿ ಹಿಡಿದಿದೆ.

ಅತ್ಯಾಚಾರ ಸಂತ್ರಸ್ತೆ ರಾತ್ರೋ ರಾತ್ರಿ ಪೊಲೀಸ್​ ಠಾಣೆಗೆ ಬಂದು ದೂರು ನೀಡಬೇಕೆಂದು ಅಪೇಕ್ಷಿಸುವುದು ತಪ್ಪು: ಕೋರ್ಟ್​
ನ್ಯಾಯಾಲಯImage Credit source: The Amikus Qriae
ನಯನಾ ರಾಜೀವ್
|

Updated on: Feb 07, 2025 | 8:12 AM

Share

ಅತ್ಯಾಚಾರ ಸಂತ್ರಸ್ತೆ ರಾತ್ರೋ ರಾತ್ರಿ ಪೊಲೀಸ್​ ಠಾಣೆಗೆ ಬಂದು ದೂರು ನೀಡಬೇಕೆಂದು ಅಪೇಕ್ಷಿಸುವುದು ತಪ್ಪು ಎಂದು ಬಾಂಬೆ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. 35 ವರ್ಷ ವಯಸ್ಸಿನ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಅಮರಾವತಿ ಸೆಷನ್ಸ್​ ನ್ಯಾಯಾಲಯದ ತೀರ್ಪನ್ನು ಬಾಂಬೆ ಹೈಕೋರ್ಟ್​ ಎತ್ತಿಹಿಡಿದಿದೆ. ಆರೋಪಿಯನ್ನು ಅಪರಾಧಿ ಎಂದು ತೀರ್ಪು ನೀಡಿದೆ. 10 ವರ್ಷಗಳ ಶಿಕ್ಷೆಯನ್ನು ಎತ್ತಿ ಹಿಡಿದಿದೆ.

ಅಮರಾವತಿ ಸೆಷನ್ಸ್​ ನ್ಯಾಯಾಲಯದ ತೀರ್ಪಿನ ವಿರುದ್ಧ ಆರೋಪಿ ರಾಹುಲ್ ಲೋಖಂಡೆ ಮೇಲ್ಮನವಿ ಸಲ್ಲಿಸಿದ್ದ, ಆದರೆ ನ್ಯಾಯಾಲಯವು ಸಂತ್ರಸ್ತೆಯ ಸಾಕ್ಷ್ಯವು ದೃಢ ಮತ್ತು ವಿಶ್ವಾಸಾರ್ಹವಾಗಿದೆ ಎಂದು ಹೇಳಿದೆ. ಈ ಆರೋಪಿ ಆಕೆ ವಾಸಿಸುತ್ತಿದ್ದ ಮನೆಯ ಮಾಲೀಕನ ಕೈಕೆಳಗೆ ಕೆಲಸ ಮಾಡುತ್ತಿರುವ ಉದ್ಯೋಗಿಯಾಗಿದ್ದು, ಆಕೆ ಈಗಾಗಲೇ ಮನೆ ಮಾಲೀಕನೊಂದಿಗೆ ವಿವಾದ ಹೊಂದಿದ್ದರಿಂದ ಸುಳ್ಳು ದೂರು ನೀಡಿದ್ದಾಳೆ ಎಂದು ವಕೀಲರು ವಾದಿಸಿದ್ದರು.

ಹಾಗೆಯೇ ಎಫ್​ಐಆರ್​ ದಾಖಲಿಸುವಲ್ಲಿ ವಿಳಂಬವಾಗಿದ್ದೇಕೆ ಎಂದು ಪ್ರಶ್ನಿಸಿದ್ದರು. ಆದರೆ ನ್ಯಾಯಾಲಯವು ಅತ್ಯಾಚಾರ ಸಂತ್ರಸ್ತೆ ರಾತ್ರಿ 15 ಕಿ.ಮೀ ದೂರ ಪೊಲೀಸ್​ ಠಾಣೆಗೆ ಬಂದು ದೂರು ಕೊಡಬೇಕು ಎಂದು ಅಪೇಕ್ಷಿಸುವುದು ತಪ್ಪೆಂದು ಅಭಿಪ್ರಾಯಪಟ್ಟಿದೆ.

ಮತ್ತಷ್ಟು ಓದಿ: ಬಾಲಕಿಯ ಮೇಲೆ ಅತ್ಯಾಚಾರ, ಬರ್ಬರ ಕೊಲೆ, ಮರಣೋತ್ತರ ಪರೀಕ್ಷೆ ವೇಳೆ ಕಣ್ಣೀರಿಟ್ಟ ವೈದ್ಯರು

ಆಕೆ ಒಬ್ಬಂಟಿ ಹೆಂಗಸು ಅಂದು ಆಕೆ ಅನುಭವಿಸಿದ ನೋವು, ಸಂಕಟವನ್ನು ಅರ್ಥ ಮಾಡಿಕೊಳ್ಳಬೇಕು, ಅಂದು ಮಾರ್ಚ್​ 25, 2017ರ ರಾತ್ರಿ, ಆತನ ಪರಿಚಯವಿತ್ತು ಅದು ರಾತ್ರಿ ಸಮಯವಾಗಿತ್ತು. ಆಕೆಯ ಮನೆಯ ಅಂಗಳದಲ್ಲಿ ಕುಳಿತಿರುವಾಗ ಆ ಏಕಾಏಕಿ ಆಕೆಯ ಮೇಲೆ ದಾಳಿ ಮಾಡಿ ಅತ್ಯಾಚಾರವೆಸಗಿದ್ದ.

ಬಳಿಕ ಆಕೆ ತಪ್ಪಿಸಿಕೊಂಡು ಮನೆಯ ಒಳಗೆ ಓಡಿ ಹೋದಳು, ಪಕ್ಕದ ಅಂಗಡಿಯವರೊಬ್ಬರಿಗೆ ಕರೆ ಮಾಡಿದಳು, ಆ ಸಮಯದಲ್ಲಿ ಆತ ಮತ್ತೆ ಅತ್ಯಾಚಾರವೆಸಗಿದ್ದ. ಅಂಗಡಿಯವನು ಮನೆಗೆ ತಲುಪುವಷ್ಟರಲ್ಲಿ ಘಟನೆ ನಡೆದಿತ್ತು. ಆರೋಪಿ ತಕ್ಷಣ ಓಡಿ ಹೋಗಿದ್ದಾನೆ. ಮಹಿಳೆ ಮರುದಿನ ಪೊಲೀಸ್ ಠಾಣೆಗೆ ಬಂದಿ ದೂರು ದಾಖಲಿಸಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು