AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಸಂತ್ರಸ್ತೆ ರಾತ್ರೋ ರಾತ್ರಿ ಪೊಲೀಸ್​ ಠಾಣೆಗೆ ಬಂದು ದೂರು ನೀಡಬೇಕೆಂದು ಅಪೇಕ್ಷಿಸುವುದು ತಪ್ಪು: ಕೋರ್ಟ್​

ಅತ್ಯಾಚಾರವಾದ ತಕ್ಷಣವೇ ಸಂತ್ರಸ್ತೆ ಪೊಲೀಸ್​ ಠಾಣೆಗೆ ಬಂದು ದೂರು ನೀಡಬೇಕೆಂದು ಅಪೇಕ್ಷಿಸುವುದು ತಪ್ಪು ಎಂದು ಬಾಂಬೆ ಹೈಕೋರ್ಟ್​ನ ಪೀಠ ಅಭಿಪ್ರಾಯಪಟ್ಟಿದೆ. 35 ವರ್ಷ ವಯಸ್ಸಿನ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಅಮರಾವತಿ ಸೆಷನ್ಸ್​ ನ್ಯಾಯಾಲಯದ ತೀರ್ಪನ್ನು ಬಾಂಬೆ ಹೈಕೋರ್ಟ್​ ಎತ್ತಿಹಿಡಿದಿದೆ. ಆರೋಪಿಯನ್ನು ಅಪರಾಧಿ ಎಂದು ತೀರ್ಪು ನೀಡಿದೆ. 10 ವರ್ಷಗಳ ಶಿಕ್ಷೆಯನ್ನು ಎತ್ತಿ ಹಿಡಿದಿದೆ.

ಅತ್ಯಾಚಾರ ಸಂತ್ರಸ್ತೆ ರಾತ್ರೋ ರಾತ್ರಿ ಪೊಲೀಸ್​ ಠಾಣೆಗೆ ಬಂದು ದೂರು ನೀಡಬೇಕೆಂದು ಅಪೇಕ್ಷಿಸುವುದು ತಪ್ಪು: ಕೋರ್ಟ್​
ನ್ಯಾಯಾಲಯImage Credit source: The Amikus Qriae
ನಯನಾ ರಾಜೀವ್
|

Updated on: Feb 07, 2025 | 8:12 AM

Share

ಅತ್ಯಾಚಾರ ಸಂತ್ರಸ್ತೆ ರಾತ್ರೋ ರಾತ್ರಿ ಪೊಲೀಸ್​ ಠಾಣೆಗೆ ಬಂದು ದೂರು ನೀಡಬೇಕೆಂದು ಅಪೇಕ್ಷಿಸುವುದು ತಪ್ಪು ಎಂದು ಬಾಂಬೆ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. 35 ವರ್ಷ ವಯಸ್ಸಿನ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಅಮರಾವತಿ ಸೆಷನ್ಸ್​ ನ್ಯಾಯಾಲಯದ ತೀರ್ಪನ್ನು ಬಾಂಬೆ ಹೈಕೋರ್ಟ್​ ಎತ್ತಿಹಿಡಿದಿದೆ. ಆರೋಪಿಯನ್ನು ಅಪರಾಧಿ ಎಂದು ತೀರ್ಪು ನೀಡಿದೆ. 10 ವರ್ಷಗಳ ಶಿಕ್ಷೆಯನ್ನು ಎತ್ತಿ ಹಿಡಿದಿದೆ.

ಅಮರಾವತಿ ಸೆಷನ್ಸ್​ ನ್ಯಾಯಾಲಯದ ತೀರ್ಪಿನ ವಿರುದ್ಧ ಆರೋಪಿ ರಾಹುಲ್ ಲೋಖಂಡೆ ಮೇಲ್ಮನವಿ ಸಲ್ಲಿಸಿದ್ದ, ಆದರೆ ನ್ಯಾಯಾಲಯವು ಸಂತ್ರಸ್ತೆಯ ಸಾಕ್ಷ್ಯವು ದೃಢ ಮತ್ತು ವಿಶ್ವಾಸಾರ್ಹವಾಗಿದೆ ಎಂದು ಹೇಳಿದೆ. ಈ ಆರೋಪಿ ಆಕೆ ವಾಸಿಸುತ್ತಿದ್ದ ಮನೆಯ ಮಾಲೀಕನ ಕೈಕೆಳಗೆ ಕೆಲಸ ಮಾಡುತ್ತಿರುವ ಉದ್ಯೋಗಿಯಾಗಿದ್ದು, ಆಕೆ ಈಗಾಗಲೇ ಮನೆ ಮಾಲೀಕನೊಂದಿಗೆ ವಿವಾದ ಹೊಂದಿದ್ದರಿಂದ ಸುಳ್ಳು ದೂರು ನೀಡಿದ್ದಾಳೆ ಎಂದು ವಕೀಲರು ವಾದಿಸಿದ್ದರು.

ಹಾಗೆಯೇ ಎಫ್​ಐಆರ್​ ದಾಖಲಿಸುವಲ್ಲಿ ವಿಳಂಬವಾಗಿದ್ದೇಕೆ ಎಂದು ಪ್ರಶ್ನಿಸಿದ್ದರು. ಆದರೆ ನ್ಯಾಯಾಲಯವು ಅತ್ಯಾಚಾರ ಸಂತ್ರಸ್ತೆ ರಾತ್ರಿ 15 ಕಿ.ಮೀ ದೂರ ಪೊಲೀಸ್​ ಠಾಣೆಗೆ ಬಂದು ದೂರು ಕೊಡಬೇಕು ಎಂದು ಅಪೇಕ್ಷಿಸುವುದು ತಪ್ಪೆಂದು ಅಭಿಪ್ರಾಯಪಟ್ಟಿದೆ.

ಮತ್ತಷ್ಟು ಓದಿ: ಬಾಲಕಿಯ ಮೇಲೆ ಅತ್ಯಾಚಾರ, ಬರ್ಬರ ಕೊಲೆ, ಮರಣೋತ್ತರ ಪರೀಕ್ಷೆ ವೇಳೆ ಕಣ್ಣೀರಿಟ್ಟ ವೈದ್ಯರು

ಆಕೆ ಒಬ್ಬಂಟಿ ಹೆಂಗಸು ಅಂದು ಆಕೆ ಅನುಭವಿಸಿದ ನೋವು, ಸಂಕಟವನ್ನು ಅರ್ಥ ಮಾಡಿಕೊಳ್ಳಬೇಕು, ಅಂದು ಮಾರ್ಚ್​ 25, 2017ರ ರಾತ್ರಿ, ಆತನ ಪರಿಚಯವಿತ್ತು ಅದು ರಾತ್ರಿ ಸಮಯವಾಗಿತ್ತು. ಆಕೆಯ ಮನೆಯ ಅಂಗಳದಲ್ಲಿ ಕುಳಿತಿರುವಾಗ ಆ ಏಕಾಏಕಿ ಆಕೆಯ ಮೇಲೆ ದಾಳಿ ಮಾಡಿ ಅತ್ಯಾಚಾರವೆಸಗಿದ್ದ.

ಬಳಿಕ ಆಕೆ ತಪ್ಪಿಸಿಕೊಂಡು ಮನೆಯ ಒಳಗೆ ಓಡಿ ಹೋದಳು, ಪಕ್ಕದ ಅಂಗಡಿಯವರೊಬ್ಬರಿಗೆ ಕರೆ ಮಾಡಿದಳು, ಆ ಸಮಯದಲ್ಲಿ ಆತ ಮತ್ತೆ ಅತ್ಯಾಚಾರವೆಸಗಿದ್ದ. ಅಂಗಡಿಯವನು ಮನೆಗೆ ತಲುಪುವಷ್ಟರಲ್ಲಿ ಘಟನೆ ನಡೆದಿತ್ತು. ಆರೋಪಿ ತಕ್ಷಣ ಓಡಿ ಹೋಗಿದ್ದಾನೆ. ಮಹಿಳೆ ಮರುದಿನ ಪೊಲೀಸ್ ಠಾಣೆಗೆ ಬಂದಿ ದೂರು ದಾಖಲಿಸಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ