AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air fare: ದೇಶೀ ವಿಮಾನ ಪ್ರಯಾಣದ ಕನಿಷ್ಠ ದರದಲ್ಲಿ ಶೇಕಡಾ 5ರಷ್ಟು ಹೆಚ್ಚಳ

ದೇಶೀಯ ವಿಮಾನ ಯಾನದ ಪ್ರಯಾಣ ದರ ಕನಿಷ್ಠ ಮಿತಿಯನ್ನು ಶೇಕಡಾ 5ರಷ್ಟು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಲಾಗಿದೆ ಎಂದು ನಾಗರಿಕ ವಿಮಾನ ಯಾನ ಖಾತೆ ಸಚಿವ ಹರ್​ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ.

Air fare: ದೇಶೀ ವಿಮಾನ ಪ್ರಯಾಣದ ಕನಿಷ್ಠ ದರದಲ್ಲಿ ಶೇಕಡಾ 5ರಷ್ಟು ಹೆಚ್ಚಳ
ಪ್ರಾತಿನಿಧಿಕ ಚಿತ್ರ
Srinivas Mata
|

Updated on: Mar 20, 2021 | 4:31 PM

Share

ನವದೆಹಲಿ: ದೇಶೀಯ ವಿಮಾನ ಯಾನದ ಪ್ರಯಾಣ ದರಕ್ಕೆ ಇದ್ದ ಕನಿಷ್ಠ ಮಿತಿಯನ್ನು ನಾಗರಿಕ ವಿಮಾನ ಯಾನ ಸಚಿವಾಲಯವು ಶೇಕಡಾ 5ರಷ್ಟು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿದೆ. ಇದರ ಪರಿಣಾಮವಾಗಿ ಅತ್ಯಂತ ಅಗ್ಗದ ದರಕ್ಕೆ ಸಿಗುತ್ತಿದ್ದ ವಿಮಾನದ ಟಿಕೆಟ್​ಗಳು ದುಬಾರಿ ಆಗಲಿವೆ. ಶುಕ್ರವಾರದಂದು ಈ ಬಗ್ಗೆ ಟ್ವೀಟ್ ಮಾಡಿರುವ ನಾಗರಿಕ ವಿಮಾನಯಾನ ಖಾತೆ ಸಚಿವ ಹರ್​ದೀಪ್ ಸಿಂಗ್ ಪುರಿ, ಏವಿಯೇಷನ್ ಟರ್ಬೈನ್ ಫ್ಯುಯೆಲ್ (ATF) ದರದಲ್ಲಿ ನಿರಂತರವಾಗಿ ಏರಿಕೆ ಕಂಡಿದ್ದರಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಅಂದ ಹಾಗೆ ಕೊರೊನಾ ಬಿಕ್ಕಟ್ಟಿನ ನಂತರ ಮತ್ತೆ ವಿಮಾನ ಸಂಚಾರವು ಶುರುವಾಯಿತಲ್ಲಾ, ಆಗ ಏಳು ಬ್ಯಾಂಡ್​ಗಳ ಮೇಲೆ ವಿಮಾನ ದರಗಳಿಗೆ ಮಿತಿ ಹಾಕಲಾಯಿತು. ಯಾವಾಗ ದೇಶೀಯ ಹಾಗೂ ಅಂತರರಾಷ್ಟ್ರೀಯ ವಿಮಾನಗಳು ಅಮಾನತು ಆದವೋ ಆಗಲೇ ವಿಮಾನಗಳ ಸಂಚಾರ ಕಾಲಾವಧಿಯ ಆಧಾರದ ಮೇಲೆ ಬ್ಯಾಂಡ್​ಗಳನ್ನು ನಿರ್ಧರಿಸಲಾಯಿತು.

ದರದ ಮಿತಿಯು ತಾತ್ಕಾಲಿಕ ಮಾತ್ರ. ಒಂದು ಸಲ ವಿಮಾನಗಳ ಕಾರ್ಯಾಚರಣೆ ಸಹಜ ಸ್ಥಿತಿಗೆ ಮರಳಿದ ಮೇಲೆ ಈ ಮಿತಿಗೆ ತಡೆಯನ್ನು ನಿಲ್ಲಿಸಲಾಗುತ್ತದೆ ಎಂದು ಸಚಿವಾಲಯದಿಂದ ತಿಳಿಸಲಾಗಿದೆ. ವಿಮಾನ ಯಾನ ಸಂಸ್ಥೆಗಳು ಶೇಕಡಾ 80ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆ ಮಾಡಲಿದೆ.

ಇದನ್ನೂ ಓದಿ: ಮಾಸ್ಕ್ ಸರಿಯಾಗಿ ಧರಿಸದಿದ್ದಲ್ಲಿ ನಿಲ್ದಾಣ ಮಾತ್ರವಲ್ಲ, ವಿಮಾನದಿಂದಲೂ ಹೊರಗೆ ಹಾಕ್ತಾರೆ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?