Sign In

By signing in or creating an account, you agree with Associated Broadcasting Company's Terms & Conditions and Privacy Policy.

Air fare: ದೇಶೀ ವಿಮಾನ ಪ್ರಯಾಣದ ಕನಿಷ್ಠ ದರದಲ್ಲಿ ಶೇಕಡಾ 5ರಷ್ಟು ಹೆಚ್ಚಳ

ದೇಶೀಯ ವಿಮಾನ ಯಾನದ ಪ್ರಯಾಣ ದರ ಕನಿಷ್ಠ ಮಿತಿಯನ್ನು ಶೇಕಡಾ 5ರಷ್ಟು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಲಾಗಿದೆ ಎಂದು ನಾಗರಿಕ ವಿಮಾನ ಯಾನ ಖಾತೆ ಸಚಿವ ಹರ್​ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ.

Air fare: ದೇಶೀ ವಿಮಾನ ಪ್ರಯಾಣದ ಕನಿಷ್ಠ ದರದಲ್ಲಿ ಶೇಕಡಾ 5ರಷ್ಟು ಹೆಚ್ಚಳ
ಪ್ರಾತಿನಿಧಿಕ ಚಿತ್ರ
Follow us
Srinivas Mata
|

Updated on: Mar 20, 2021 | 4:31 PM

ನವದೆಹಲಿ: ದೇಶೀಯ ವಿಮಾನ ಯಾನದ ಪ್ರಯಾಣ ದರಕ್ಕೆ ಇದ್ದ ಕನಿಷ್ಠ ಮಿತಿಯನ್ನು ನಾಗರಿಕ ವಿಮಾನ ಯಾನ ಸಚಿವಾಲಯವು ಶೇಕಡಾ 5ರಷ್ಟು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿದೆ. ಇದರ ಪರಿಣಾಮವಾಗಿ ಅತ್ಯಂತ ಅಗ್ಗದ ದರಕ್ಕೆ ಸಿಗುತ್ತಿದ್ದ ವಿಮಾನದ ಟಿಕೆಟ್​ಗಳು ದುಬಾರಿ ಆಗಲಿವೆ. ಶುಕ್ರವಾರದಂದು ಈ ಬಗ್ಗೆ ಟ್ವೀಟ್ ಮಾಡಿರುವ ನಾಗರಿಕ ವಿಮಾನಯಾನ ಖಾತೆ ಸಚಿವ ಹರ್​ದೀಪ್ ಸಿಂಗ್ ಪುರಿ, ಏವಿಯೇಷನ್ ಟರ್ಬೈನ್ ಫ್ಯುಯೆಲ್ (ATF) ದರದಲ್ಲಿ ನಿರಂತರವಾಗಿ ಏರಿಕೆ ಕಂಡಿದ್ದರಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಅಂದ ಹಾಗೆ ಕೊರೊನಾ ಬಿಕ್ಕಟ್ಟಿನ ನಂತರ ಮತ್ತೆ ವಿಮಾನ ಸಂಚಾರವು ಶುರುವಾಯಿತಲ್ಲಾ, ಆಗ ಏಳು ಬ್ಯಾಂಡ್​ಗಳ ಮೇಲೆ ವಿಮಾನ ದರಗಳಿಗೆ ಮಿತಿ ಹಾಕಲಾಯಿತು. ಯಾವಾಗ ದೇಶೀಯ ಹಾಗೂ ಅಂತರರಾಷ್ಟ್ರೀಯ ವಿಮಾನಗಳು ಅಮಾನತು ಆದವೋ ಆಗಲೇ ವಿಮಾನಗಳ ಸಂಚಾರ ಕಾಲಾವಧಿಯ ಆಧಾರದ ಮೇಲೆ ಬ್ಯಾಂಡ್​ಗಳನ್ನು ನಿರ್ಧರಿಸಲಾಯಿತು.

ದರದ ಮಿತಿಯು ತಾತ್ಕಾಲಿಕ ಮಾತ್ರ. ಒಂದು ಸಲ ವಿಮಾನಗಳ ಕಾರ್ಯಾಚರಣೆ ಸಹಜ ಸ್ಥಿತಿಗೆ ಮರಳಿದ ಮೇಲೆ ಈ ಮಿತಿಗೆ ತಡೆಯನ್ನು ನಿಲ್ಲಿಸಲಾಗುತ್ತದೆ ಎಂದು ಸಚಿವಾಲಯದಿಂದ ತಿಳಿಸಲಾಗಿದೆ. ವಿಮಾನ ಯಾನ ಸಂಸ್ಥೆಗಳು ಶೇಕಡಾ 80ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆ ಮಾಡಲಿದೆ.

ಇದನ್ನೂ ಓದಿ: ಮಾಸ್ಕ್ ಸರಿಯಾಗಿ ಧರಿಸದಿದ್ದಲ್ಲಿ ನಿಲ್ದಾಣ ಮಾತ್ರವಲ್ಲ, ವಿಮಾನದಿಂದಲೂ ಹೊರಗೆ ಹಾಕ್ತಾರೆ

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ