AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarinder Singh ದೆಹಲಿಯಲ್ಲಿ ಅಮಿತ್​ ಶಾ ಭೇಟಿ ಮಾಡಿದ ಕ್ಯಾಪ್ಟನ್ ಅಮರಿಂದರ್​ ಸಿಂಗ್

ಪಂಜಾಬ್ ಮುಖ್ಯಮಂತ್ರಿ  ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮೊದಲ ಬಾರಿ ದೆಹಲಿಗೆ ಭೇಟಿ ನೀಡಿರುವ  ಅಮರಿಂದರ್ ಸಿಂಗ್ ಅಮಿತ್ ಶಾ ಅವರ ಜತೆ ರೈತರ ಸಮಸ್ಯೆಗಳ ಬಗ್ಗೆಯೂ  ಚರ್ಚಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

Amarinder Singh ದೆಹಲಿಯಲ್ಲಿ ಅಮಿತ್​ ಶಾ ಭೇಟಿ ಮಾಡಿದ ಕ್ಯಾಪ್ಟನ್ ಅಮರಿಂದರ್​ ಸಿಂಗ್
ಅಮರಿಂದರ್ ಸಿಂಗ್​
TV9 Web
| Edited By: |

Updated on:Sep 29, 2021 | 7:22 PM

Share

ದೆಹಲಿ: ಕ್ಯಾಪ್ಟನ್ ಅಮರಿಂದರ್ ಸಿಂಗ್ ದೆಹಲಿಯಲ್ಲಿರುವ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ  ಅವರನ್ನು ಭೇಟಿಯಾಗಿದ್ದಾರೆ. ಈ ಮೂಲಕ  ಅಮರಿಂದರ್ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ನಿಜವಾಗಲಿದೆಯೇ  ಎಂಬ ಕುತೂಹಲ ಹುಟ್ಟಿಕೊಂಡಿದೆ. ಅಮರಿಂದರ್ ಸಿಂಗ್ ದೆಹಲಿ ಪ್ರವಾಸದ ಬಗ್ಗೆ ಊಹಾಪೋಹಗಳು ಕೇಳಿ ಬಂದಾಗ, ಅವರು ವೈಯಕ್ತಿಕ ಭೇಟಿಗಾಗಿ ದೆಹಲಿಗೆ ಹೋಗಿದ್ದಾರೆ ಎಂದು  ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀಣ್ ತುಕ್ರಾಲ್ ಟ್ವೀಟ್ ಮಾಡಿದ್ದರು.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ ಬೆನ್ನಲ್ಲೇ ದೆಹಲಿ ತಲುಪಿದ ಅಮರಿಂದರ್, ನಾನು ಯಾರನ್ನೂ ಭೇಟಿಯಾಗುವ ಉದ್ದೇಶದಿಂದ ದೆಹಲಿಗೆ ಬಂದಿಲ್ಲ. ನಾನು ಯಾವ ನಾಯಕರನ್ನೂ ಭೇಟಿಯಾಗುವುದಿಲ್ಲ. ದೆಹಲಿಯ ಕಪುರ್ತಲದಲ್ಲಿರುವ ಪಂಜಾಬ್ ಮುಖ್ಯಮಂತ್ರಿಯ ಮನೆ ಖಾಲಿ ಮಾಡಲು ಬಂದಿದ್ದೇನೆ ಎಂದು ಹೇಳಿದ್ದರು.

ಮಂಗಳವಾರ  ದೆಹಲಿಗೆ ಬಂದಿಳಿರುವ ಅಮರಿಂದರ್ ಸಿಂಗ್ ಅಂದು ಸಂಜೆ ಅಮಿತ್ ಶಾ ಮತ್ತು ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿತ್ತು. ಕಳೆದ ವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅಮರೀಂದರ್ ಸಿಂಗ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ ಎಂಬ ಸುದ್ದಿಯೂ ಹರಡಿತ್ತು. ಆದರೆ, ಇದು ಸುಳ್ಳು , ನಾನು ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.

ಬಿಜೆಪಿಗೆ ಸೇರುವ ಪ್ರಶ್ನೆಗಳಿಗೆ ಉತ್ತರಿಸಲು ಸಿಂಗ್ ನಿರಾಕರಿಸಿದ್ದರು. ಆದರೆ ಈ ತಿಂಗಳ ಆರಂಭದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಾಗ ಆಯ್ಕೆಗಳು ತೆರೆದಿವೆ  ಎಂದು ಹೇಳಿದ್ದಾರೆ. ಸಿಂಗ್ ಅವರ ತಂಡವು ಇದನ್ನು “ಸೌಜನ್ಯದ ಭೇಟಿ” ಎಂದು ಕರೆದಿದ್ದು ಮುಂದಿನ ನಡೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದಿದೆ.

ಪಂಜಾಬ್ ಮುಖ್ಯಮಂತ್ರಿ  ಸ್ಥಾನಕ್ಕೆ ರಾಜೀನಾಮೆ ನೀಡಿದ  ನಂತರ ಮೊದಲ ಬಾರಿ ದೆಹಲಿಗೆ ಭೇಟಿ ನೀಡಿರುವ  ಅಮರಿಂದರ್ ಸಿಂಗ್ ಅಮಿತ್ ಶಾ ಅವರ ಜತೆ  ರೈತರ ಸಮಸ್ಯೆಗಳ ಬಗ್ಗೆಯೂ  ಚರ್ಚಿಸಲಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ಸಿಎನ್‌ಎನ್-ನ್ಯೂಸ್ 18 ವರದಿ ಮಾಡಿದೆ.

ದೆಹಲಿಯಲ್ಲಿರುವ ಅಮಿತ್ ಶಾ ನಿವಾಸದಲ್ಲಿ ಸಿಂಗ್  45 ನಿಮಿಷ ಕಾಲ ಚರ್ಚೆ ನಡೆಸಿ  ನಿರ್ಗಮಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸಿಧು ರಾಜೀನಾಮೆಗೆ ಕಾರಣವೇನು?: ಪಂಜಾಬ್ ರಾಜಕೀಯದಲ್ಲಿನ ಪ್ರಮುಖ ಬೆಳವಣಿಗೆಗಳು ಇಲ್ಲಿವೆ

Published On - 6:29 pm, Wed, 29 September 21

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ