AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀರ್ತಿಚಕ್ರವನ್ನು ನಾವು ಮುಟ್ಟಿಯೂ ನೋಡಿಲ್ಲ; ಕ್ಯಾಪ್ಟನ್ ಅಂಶುಮಾನ್ ಸಿಂಗ್ ಪೋಷಕರ ಬೇಸರ

ರಾಷ್ಟ್ರಪತಿ ದ್ರೌಪದಿ ಮುರ್ಮು ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರಿಗೆ ಮರಣೋತ್ತರವಾಗಿ ಕೀರ್ತಿ ಚಕ್ರವನ್ನು ಪ್ರದಾನ ಮಾಡಿದ್ದರು. ಆದರೆ, ತಮ್ಮ ಸೊಸೆ ಸ್ಮೃತಿ ತಮ್ಮ ಮಗನ ಶೌರ್ಯ ಪದಕ ಮತ್ತು ಇತರ ನೆನಪುಗಳನ್ನು ತನ್ನ ತವರುಮನೆಗೆ ತೆಗೆದುಕೊಂಡು ಹೋಗಿದ್ದಾಳೆ ಎಂದು ಅಂಶುಮಾನ್ ಸಿಂಗ್ ಪೋಷಕರು ಆರೋಪಿಸಿದ್ದಾರೆ.

ಕೀರ್ತಿಚಕ್ರವನ್ನು ನಾವು ಮುಟ್ಟಿಯೂ ನೋಡಿಲ್ಲ; ಕ್ಯಾಪ್ಟನ್ ಅಂಶುಮಾನ್ ಸಿಂಗ್ ಪೋಷಕರ ಬೇಸರ
ಕ್ಯಾಪ್ಟನ್ ಅಂಶುಮಾನ್ ಸಿಂಗ್ ಪೋಷಕರು
Follow us
ಸುಷ್ಮಾ ಚಕ್ರೆ
|

Updated on: Jul 12, 2024 | 4:07 PM

ನವದೆಹಲಿ: ಕಳೆದ ವರ್ಷ ಜುಲೈನಲ್ಲಿ ಸಿಯಾಚಿನ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರ ಪೋಷಕರು ತಮ್ಮ ಸೊಸೆಯ ಬಗ್ಗೆ ಆರೋಪ ಮಾಡಿದ್ದಾರೆ. ಅತಿ ಚಿಕ್ಕ ವಯಸ್ಸಿನಲ್ಲೇ ವಿಧವೆಯಾಗಿದ್ದ ಅಂಶುಮಾನ್ ಸಿಂಗ್ ಸ್ಮೃತಿ ಅವರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಅನುಕಂಪ ವ್ಯಕ್ತವಾಗಿತ್ತು. ಆದರೆ, ಇದೀಗ ಅಂಶುಮಾನ್ ಸಿಂಗ್ ಪೋಷಕರೇ ಆಕೆಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಮರಣೋತ್ತರವಾಗಿ ಕೀರ್ತಿ ಚಕ್ರ ಪಡೆದ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರ ಪೋಷಕರು, ನಮ್ಮ ಸೊಸೆ ಸ್ಮೃತಿ ಈಗ ತವರುಮನೆಯಲ್ಲಿದ್ದಾಳೆ. ನಮ್ಮ ಮಗ ಸಾವನ್ನಪ್ಪಿದ ನಂತರ ಆಕೆ ತನ್ನ ಬಟ್ಟೆಯ ಜೊತೆಗೆ ನಮ್ಮ ಮಗನ ಬಟ್ಟೆ, ಆತನ ವಸ್ತುಗಳನ್ನೆಲ್ಲ ತೆಗೆದುಕೊಂಡು ತವರುಮನೆಯಲ್ಲಿ ವಾಸವಾಗಿದ್ದಾಳೆ. ಈಗ ಸರ್ಕಾರ ಕೊಟ್ಟಿರುವ ಕೀರ್ತಿ ಚಕ್ರ ಪ್ರಶಸ್ತಿಯನ್ನು ಕೂಡ ಆಕೆಯೇ ತೆಗೆದುಕೊಂಡು ಹೋಗಿದ್ದಾಳೆ. ನಾವು ಆ ಪ್ರಶಸ್ತಿಯನ್ನು ಮುಟ್ಟಿಯೂ ನೋಡಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ಸಿಯಾಚಿನ್‌ನಲ್ಲಿ ಸಂಭವಿಸಿದ ದೊಡ್ಡ ಬೆಂಕಿಯಿಂದ ಜನರನ್ನು ರಕ್ಷಿಸುವ ವೇಳೆ ಸೇನಾ ವೈದ್ಯಕೀಯ ದಳದ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಸಾವನ್ನಪ್ಪಿದ್ದರು. ಅವರ ಪತ್ನಿ ಸ್ಮೃತಿ ತಮ್ಮ ಅತ್ತೆ ಮಂಜು ಸಿಂಗ್ ಅವರೊಂದಿಗೆ ಜುಲೈ 5ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಭಾರತದ ಎರಡನೇ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.

ಇದನ್ನೂ ಓದಿ: ಕೀರ್ತಿ ಚಕ್ರ ಸ್ವೀಕರಿಸಿದ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಪತ್ನಿಯನ್ನು ನೋಡಿ ಭಾವುಕರಾದ ರಾಷ್ಟ್ರಪತಿ

ಈ ಬಗ್ಗೆ ಮಾಹಿತಿ ನೀಡಿರುವ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರ ತಂದೆ ರವಿ ಪ್ರತಾಪ್ ಸಿಂಗ್, ನಮ್ಮ ಸೊಸೆಯು ನಮ್ಮ ಮಗನ ಅಧಿಕೃತ ದಾಖಲೆಗಳಲ್ಲಿ ಪಟ್ಟಿ ಮಾಡಲಾದ ಖಾಯಂ ವಿಳಾಸವನ್ನು ಲಕ್ನೋದಿಂದ ತಮ್ಮ ತವರುಮನೆಯಾದ ಗುರುದಾಸ್‌ಪುರಕ್ಕೆ ಬದಲಾಯಿಸಿದ್ದಾಳೆ ಎಂದು ಹೇಳಿದರು. ‘ನೆಕ್ಸ್ಟ್ ಆಫ್ ಕಿನ್’ ಕಾನೂನಿನಲ್ಲಿ ಬದಲಾವಣೆ ತರಬೇಕೆಂದು ಅವರು ಒತ್ತಾಯಿಸಿದ್ದಾರೆ. ಇದು ಸ್ವತ್ತುಗಳನ್ನು ಯಾರು ಪಡೆಯುತ್ತಾರೆ ಮತ್ತು ಉಯಿಲು ಇಲ್ಲದೆ ಯಾರಾದರೂ ಸತ್ತರೆ ವೈದ್ಯಕೀಯ ಸೌಲಭ್ಯಗಳನ್ನು ಯಾರು ಸ್ವೀಕರಿಸುತ್ತಾರೆ ಎಂಬುದನ್ನು ನಿರ್ಧರಿಸುತ್ತದೆ.

“ಹುತಾತ್ಮರ ಪತ್ನಿಯೊಂದಿಗೆ ಪೋಷಕರು ಕೂಡ ಈ ಸೌಲಭ್ಯಗಳಿಗೆ ಅರ್ಹರಾಗಲು ಸಹಾಯದ ಮೊತ್ತ ಮತ್ತು ಸರ್ಕಾರವು ಒದಗಿಸುವ ಇತರ ಸೌಲಭ್ಯಗಳಿಗೆ ಸಂಬಂಧಿಸಿದಂತೆ ನಿಯಮಗಳನ್ನು ತಿದ್ದುಪಡಿ ಮಾಡಬೇಕು” ಎಂದು ಪ್ರತಾಪ್ ಸಿಂಗ್ ಇಂಡಿಯಾ ಟುಡೇಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ. ತಮ್ಮ ಮಗನ ನೆನಪುಗಳನ್ನು ಮೆಲುಕು ಹಾಕಲು ಸರ್ಕಾರವು ಪತ್ನಿಯ ಜೊತೆಗೆ ಪೋಷಕರಿಗೆ ಕೀರ್ತಿ ಚಕ್ರದಂತಹ ಮಿಲಿಟರಿ ಗೌರವದ ಇನ್ನೊಂದು ಪ್ರತಿಯನ್ನು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ನಾವು ಅಂಶುಮಾನ್ ಅವರನ್ನು ಸ್ಮೃತಿಯೊಂದಿಗೆ ಮದುವೆ ಮಾಡಿದೆವು. ಮದುವೆಯ ನಂತರ ಆಕೆ ನನ್ನ ಮಗಳೊಂದಿಗೆ ನೋಯ್ಡಾದಲ್ಲಿ ಇರಲು ಪ್ರಾರಂಭಿಸಿದಳು. ಜುಲೈ 19, 2023ರಂದು ಅಂಶುಮಾನ್ ಸಾವಿನ ಬಗ್ಗೆ ನಮಗೆ ಮಾಹಿತಿ ಬಂದಾಗ ನಾನು ಆಕೆಯನ್ನು ಲಕ್ನೋಗೆ ಕರೆದಿದ್ದೆ. ನಾವು ಆಕೆಗಾಗಿ ಗೋರಖ್‌ಪುರಕ್ಕೆ ಹೋಗಿದ್ದೆವು. ಆದರೆ ತೆಹ್ರಾವಿ (ಅಂತ್ಯಕ್ರಿಯೆಯ ಆಚರಣೆ) ನಂತರ ಸ್ಮೃತಿ ತನ್ನ ತವರುಮನೆಯಾದ ಗುರುದಾಸ್‌ಪುರಕ್ಕೆ ವಾಪಾಸ್ ಹೋದಳು ಎಂದಿದ್ದಾರೆ.

ಇದನ್ನೂ ಓದಿ: 8 ವರ್ಷ ಪ್ರೀತಿಸಿದರೂ ಜೊತೆಗಿದ್ದಿದ್ದು ಎರಡೇ ತಿಂಗಳು; ವೀರಮರಣವನ್ನಪ್ಪಿದ ಯೋಧ ಅಂಶುಮಾನ್ ಲವ್ ಸ್ಟೋರಿ

“ನಮ್ಮ ಮಗ ಅಂಶುಮಾನ್‌ಗೆ ಕೀರ್ತಿ ಚಕ್ರ ನೀಡಿದಾಗ ಸ್ಮೃತಿ ಜೊತೆಗೆ ನನ್ನ ಹೆಂಡತಿ ಕೂಡ ಗೌರವ ಸ್ವೀಕರಿಸಲು ತೆರಳಿದ್ದರು. ರಾಷ್ಟ್ರಪತಿಗಳು ನನ್ನ ಮಗನ ತ್ಯಾಗಕ್ಕೆ ಕೀರ್ತಿ ಚಕ್ರವನ್ನು ನೀಡಿ ಗೌರವಿಸಿದರು. ಆದರೆ ನಾನು ಅದನ್ನು ಒಮ್ಮೆ ಕೂಡ ಆ ಪ್ರಶಸ್ತಿಯನ್ನು ಮುಟ್ಟಲು ಸಾಧ್ಯವಾಗಲಿಲ್ಲ” ಎಂದು ರವಿ ಪ್ರತಾಪ್ ಸಿಂಗ್ ಹೇಳಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವನ್ನು ನೆನಪಿಸಿಕೊಂಡ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರ ತಾಯಿ ಮಂಜು ಸಿಂಗ್, ಜುಲೈ 5ರಂದು ರಾಷ್ಟ್ರಪತಿ ಭವನದಲ್ಲಿ ಸ್ಮೃತಿ ಜೊತೆಗೆ ನಾನು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದೆ. ನಾವು ಕಾರ್ಯಕ್ರಮದಿಂದ ಹೊರಡುವಾಗ ಸೇನಾಧಿಕಾರಿಗಳ ಒತ್ತಾಯದ ಮೇರೆಗೆ ನಾನು ಫೋಟೋಗಾಗಿ ನಾನು ಕೀರ್ತಿ ಚಕ್ರವನ್ನು ಹಿಡಿದಿದ್ದೆ. ಆದರೆ, ಅದರ ನಂತರ ಸ್ಮೃತಿ ನನ್ನ ಕೈಯಿಂದ ಕೀರ್ತಿ ಚಕ್ರವನ್ನು ತೆಗೆದುಕೊಂಡು ಹೋದಳು ಎಂದಿದ್ದಾರೆ.

ಕ್ಯಾಪ್ಟನ್ ಅಂಶುಮಾನ್ ಸಿಂಗ್ ಫೈಬರ್ಗ್ಲಾಸ್ ಗುಡಿಸಲಿನಲ್ಲಿ ಸಿಲುಕಿಕೊಂಡಿದ್ದ ತನ್ನೊಂದಿಗಿನ ಇತರೆ ಸೇನಾ ಅಧಿಕಾರಿಗಳನ್ನು ರಕ್ಷಿಸಿದ್ದರು. ಆದರೆ, ತಾವು ಬೆಂಕಿಯಿಂದ ಹೊರಬರಲಾರದೆ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ