Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್‌ನಲ್ಲಿ ನಿಯೋಜನೆಗೊಂಡ ಮೊದಲ ಮಹಿಳಾ ವೈದ್ಯಕೀಯ ಅಧಿಕಾರಿ ಕ್ಯಾಪ್ಟನ್ ಗೀತಿಕಾ ಕೌಲ್

Snow Leopard Brigadeನ ಕ್ಯಾಪ್ಟನ್ ಗೀತಿಕಾ ಕೌಲ್ ಅವರು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಭಾರತೀಯ ಸೇನೆಯ ಮೊದಲ ಮಹಿಳಾ ವೈದ್ಯಕೀಯ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಇತಿಹಾಸದಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. ಕ್ಯಾಪ್ಟನ್ ಕೌಲ್ ಪ್ರತಿಷ್ಠಿತ ಸಿಯಾಚಿನ್ ಬ್ಯಾಟಲ್ ಸ್ಕೂಲ್‌ನಲ್ಲಿ ಕಠಿಣ ಇಂಡಕ್ಷನ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಸಿಯಾಚಿನ್‌ನಲ್ಲಿ ನಿಯೋಜನೆಗೊಂಡ ಮೊದಲ ಮಹಿಳಾ ವೈದ್ಯಕೀಯ ಅಧಿಕಾರಿ ಕ್ಯಾಪ್ಟನ್ ಗೀತಿಕಾ ಕೌಲ್
ಗೀತಿಕಾ ಕೌಲ್
Follow us
ರಶ್ಮಿ ಕಲ್ಲಕಟ್ಟ
|

Updated on: Dec 06, 2023 | 3:30 PM

ದೆಹಲಿ ಡಿಸೆಂಬರ್ 06: ಕ್ಯಾಪ್ಟನ್ ಗೀತಿಕಾ ಕೌಲ್ (Captain Geetika Koul) ಭಾರತದ ಇತಿಹಾಸದಲ್ಲಿ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಎಂದು ಕರೆಯಲ್ಪಡುವ ಸಿಯಾಚಿನ್‌ನಲ್ಲಿ (Siachen) ನಿಯೋಜಿಸಲ್ಪಟ್ಟ ಮೊದಲ ಮಹಿಳೆಯಾಗಿದ್ದಾರೆ. Snow Leopard Brigadeನ ಕ್ಯಾಪ್ಟನ್ ಕೌಲ್ ಭಾರತೀಯ ಸೇನೆಯಲ್ಲಿ ವೈದ್ಯಕೀಯ ಅಧಿಕಾರಿ. ಪ್ರಸಿದ್ಧ ಸಿಯಾಚಿನ್ ಬ್ಯಾಟಲ್ ಸ್ಕೂಲ್‌ನಲ್ಲಿ ಇಂಡಕ್ಷನ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಕೌಲ್ ಈ ಮೈಲುಗಲ್ಲು ಸಾಧಿಸಿದ್ದಾರೆ.

ದೈಹಿಕ ಮತ್ತು ಮಾನಸಿಕ ಸ್ಥೈರ್ಯಕ್ಕೆ ಅದರ ಸವಾಲುಗಳಿಗೆ ಗುರುತಿಸಲ್ಪಟ್ಟಿರುವ ಈ ಕಠಿಣ ತರಬೇತಿಯು ಎತ್ತರದ ಪ್ರದೇಶಗಳಿಗೆ ಏರುವುದು, ಬದುಕುಳಿಯುವ ಕೌಶಲ್ಯಗಳು ಮತ್ತು ವಿಪರೀತ ಪರಿಸ್ಥಿತಿಗಳಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಪ್ರಮುಖ ವಿಶೇಷ ವೈದ್ಯಕೀಯ ವಿಧಾನಗಳನ್ನು ಒಳಗೊಂಡಂತೆ ಹಲವಾರು ಅಂಶಗಳನ್ನು ಒಳಗೊಂಡಿದೆ. Snow Leopard Brigadeನ ಕ್ಯಾಪ್ಟನ್ ಗೀತಿಕಾ ಕೌಲ್ ಅವರು ಸಿಯಾಚಿನ್ ಬ್ಯಾಟಲ್ ಸ್ಕೂಲ್ ನಲ್ಲಿ ಇಂಡಕ್ಷನ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ನಿಯೋಜಿಸಲಾದ ಭಾರತೀಯ ಸೇನೆಯ ಮೊದಲ ಮಹಿಳಾ ವೈದ್ಯಕೀಯ ಅಧಿಕಾರಿಯಾಗಿದ್ದಾರೆ ಎಂದು ಭಾರತೀಯ ಸೇನೆಯ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದೆ.

ಸಿಯಾಚಿನ್ ಹಿಮಾಲಯದ ಉತ್ತರ ಭಾಗದಲ್ಲಿದೆ. ಇದು ತನ್ನ ಕಾರ್ಯತಂತ್ರದ ಪ್ರಾಮುಖ್ಯತೆಗಾಗಿ ಪರಿಗಣಿಸಲ್ಪಟ್ಟಿದೆ. ಆದರೆ ಅದರ ಕಠಿಣ ಹವಾಮಾನ ಮನುಷ್ಯರಿಗೆ ಸವಾಲೇ ಸರಿ. ಈ ತೀವ್ರವಾದ ಯುದ್ಧಭೂಮಿಗೆ ಮಹಿಳಾ ವೈದ್ಯಕೀಯ ಅಧಿಕಾರಿಯಾಗಿ ಕ್ಯಾಪ್ಟನ್ ಗೀತಿಕಾ ಕೌಲ್ ಅವರ ನಿಯೋಜನೆಯು ಭಾರತೀಯ ಸೇನೆಯೊಳಗೆ ಮಹಿಳೆಯರ ಸೇರ್ಪಡೆಯಲ್ಲಿ ಗಣನೀಯ ಏರಿಕೆಯನ್ನು ಸೂಚಿಸುತ್ತದೆ.

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಅಕ್ಟೋಬರ್‌ನಲ್ಲಿ 15,500 ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿ ನಿಯೋಜಿಸಲಾದ ಸೈನಿಕರಿಗೆ ಮೊಬೈಲ್ ಸಂವಹನವನ್ನು ವಿಸ್ತರಿಸಲು ಸಿಯಾಚಿನ್ ಹಿಮನದಿಯಲ್ಲಿ ಹೊಸ ಬೇಸ್ ಟ್ರಾನ್ಸ್‌ಸಿವರ್ ಸ್ಟೇಷನ್ (BTS) ಅನ್ನು ನಿಯೋಜಿಸಿತು. ಸಿಯಾಚಿನ್ ವಾರಿಯರ್ಸ್ BSNL ಸಹಯೋಗದೊಂದಿಗೆ 15,500 ಅಡಿಗಳಿಗಿಂತ ಹೆಚ್ಚು ನಿಯೋಜಿಸಲಾದ ಸೈನಿಕರಿಗೆ ಮೊಬೈಲ್ ಸಂವಹನವನ್ನು ವಿಸ್ತರಿಸಲು ಅಕ್ಟೋಬರ್ 6 ರಂದು ಅತ್ಯುನ್ನತ ಯುದ್ಧಭೂಮಿಯ ಫಾರ್ವರ್ಡ್ ಪೋಸ್ಟ್‌ಗಳಲ್ಲಿ ಮೊಟ್ಟಮೊದಲ BSNL BTS ಅನ್ನು ಸ್ಥಾಪಿಸಿತು ಎಂದು ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಟ್ವೀಟ್ ಮಾಡಿತ್ತು.

ಇದನ್ನೂ ಓದಿ: ಸಿಯಾಚಿನ್​ನಲ್ಲಿ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್​ಗೆ ನೆಟ್ಟಿಗರಿಂದ ಅಭಿನಂದನೆ

ಅತ್ಯಂತ ಶೀತ ಮತ್ತು ಅತಿ ಎತ್ತರದ ಯುದ್ಧಭೂಮಿಯಲ್ಲಿ ಎತ್ತರದ ಪೋಸ್ಟ್‌ಗಳಲ್ಲಿ ನೆಲೆಸಿರುವ ಸೈನಿಕರು ಈಗ ತಮ್ಮ ಕರ್ತವ್ಯಗಳನ್ನು ಪೂರೈಸುವಾಗ ತಮ್ಮ ಕುಟುಂಬಗಳೊಂದಿಗೆ ಸಂಪರ್ಕದಲ್ಲಿರಲು ಅವಕಾಶವನ್ನು ಹೊಂದಿರುತ್ತಾರೆ. ಸ್ನೋ ಲೆಪರ್ಡ್ ಬ್ರಿಗೇಡ್ ಪರ್ವತ ಯುದ್ಧದಲ್ಲಿ ಪರಿಣತಿ ಹೊಂದಿದೆ ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ ಎತ್ತರದ ನಡುವೆ ಭಾರತದ ಗಡಿಗಳನ್ನು ರಕ್ಷಿಸುವುದು ಇದರ ಪ್ರಮುಖ ಜವಾಬ್ದಾರಿಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ