AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ದಿಢೀರನೆ ಕಾರು ನಿಲ್ಲಿಸಿ, ಏಕಾಏಕಿ ಬಾಗಿಲು ತೆರೆದ ಚಾಲಕ: ಪಕ್ಕದಲ್ಲಿಯೇ ಬೈಕ್ ಮೇಲೆ ಹೋಗುತ್ತಿದ್ದ ಮಗು… ಬಾರದ ಲೋಕಕ್ಕೆ ಪಯಣ

Car Accident: ಅಲ್ಪಸ್ವಲ್ಪ ಡ್ರೈವಿಂಗ್ ಕಲಿತಿದ್ದರೂ ಸಾಕು.. ಡ್ರೈವರ್ ಸೀಟಿನಲ್ಲಿ ಕುಳಿತುಬಿಡುತ್ತಾರೆ ಬೇಜವಾಬ್ದಾರಿ ಜನ. ಕನಿಷ್ಠ ಸಾಮಾನ್ಯ ಜ್ಞಾನವೂ ಇರುವುದಿಲ್ಲ. ಈಗ ಹೋದ ಜೀವಕ್ಕೆ ಯಾರು ಹೊಣೆ? ಆ ತಾಯಿಯ ಸಂಕಟವನ್ನು ದೂರ ಮಾಡುವವರು ಯಾರು?

ರಸ್ತೆಯಲ್ಲಿ ದಿಢೀರನೆ ಕಾರು ನಿಲ್ಲಿಸಿ, ಏಕಾಏಕಿ ಬಾಗಿಲು ತೆರೆದ ಚಾಲಕ: ಪಕ್ಕದಲ್ಲಿಯೇ ಬೈಕ್ ಮೇಲೆ ಹೋಗುತ್ತಿದ್ದ ಮಗು... ಬಾರದ ಲೋಕಕ್ಕೆ ಪಯಣ
ಬೈಕ್ ಮೇಲೆ ಹೋಗುತ್ತಿದ್ದ ಮಗು... ಬಾರದ ಲೋಕಕ್ಕೆ ಪಯಣ
TV9 Web
| Edited By: |

Updated on: Jun 02, 2023 | 3:31 PM

Share

ಅಸಡ್ಡೆ, ಬೇಜವಾಬ್ದಾರಿ, ನಿರ್ಲರ್ಕ್ಷ್ಯದ ಪರಮಾವಧಿ ಇದು. ಅವನು ಕಾರನ್ನು ರಸ್ತೆಯಲ್ಲಿ ದಿಢೀರನೆ ನಿಲ್ಲಿಸಿಬಿಟ್ಟ. ಹಿಂದೆ ಬರುತ್ತಿದ್ದ ವಾಹನಗಳತ್ತ ಗಮನ ಹರಿಸದೆ ಬಾಗಿಲು ತೆರೆದು ಕೆಳಗಿಳಿದಿದ್ದ ಆ ಕಾರು ಚಾಲಕ (Car Accident). ಇದರಿಂದ ಹಿಂದಿನಿಂದ ಬೈಕ್ ನಲ್ಲಿ ಮಗುವಿನೊಂದಿಗೆ ತೆರಳುತ್ತಿದ್ದ ದಂಪತಿ ಶಶಿರೇಖಾ ಮತ್ತು ಸೈಯದ್ ಅಪಘಾತಕ್ಕೀಡಾಗಿದ್ದಾರೆ (Bike Mishap). ಕಾರಿನ ಬಾಗಿಲು ತಾಯಿ ಮತ್ತು ಮಗುವಿಗೆ (baby girl) ಬಡಿದಿದೆ. ಧನಲಕ್ಷ್ಮಿ (2) ಎಂಬ ಮುದ್ದಾದ ಮಗು ತೀವ್ರ ಗಾಯಗೊಂಡು ಮೃತಪಟ್ಟಿದ್ದಾಳೆ. ತಾಯಿ ಶಶಿರೇಖಾ ಸ್ಥಿತಿ ಚಿಂತಾಜನಕವಾಗಿದೆ. ಹೈದರಾಬಾದ್‌ನ ಎಲ್‌ಬಿ ನಗರದಲ್ಲಿ (ಲಾಲ್ ಬಹದ್ದೂರ್ ಶಾಸ್ತ್ರಿ ನಗರ) ಈ ಭಯಾನಕ ಘಟನೆ ಬೆಳಕಿಗೆ ಬಂದಿದೆ.

ಅಲ್ಪಸ್ವಲ್ಪ ಡ್ರೈವಿಂಗ್ ಕಲಿತಿದ್ದರೂ ಸಾಕು.. ಡ್ರೈವರ್ ಸೀಟಿನಲ್ಲಿ ಕುಳಿತುಬಿಡುತ್ತಾರೆ ಬೇಜವಾಬ್ದಾರಿ ಜನ. ಕನಿಷ್ಠ ಸಾಮಾನ್ಯ ಜ್ಞಾನವೂ ಇರುವುದಿಲ್ಲ. ಈಗ ಹೋದ ಜೀವಕ್ಕೆ ಯಾರು ಹೊಣೆ? ಆ ತಾಯಿಯ ಸಂಕಟವನ್ನು ದೂರ ಮಾಡುವವರು ಯಾರು? ಇಷ್ಟಕ್ಕೂ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿರುವ ಆ ತಾಯಿ ಸುರಕ್ಷಿತವಾಗಿ ಮನೆಗೆ ಬರುತ್ತಾರಾ? ಚಿಕ್ಕ ಕುಟುಂಬವೊಂದು ಕ್ಷಣ ಮಾತ್ರದಲ್ಲಿ ಇಷ್ಟು ದೊಡ್ಡ ದುರಂತವನ್ನು ಎದುರಿಸಿದ್ದು ಕಾರು ಚಾಲಕನ ತಪ್ಪಲ್ಲವೇ..?

Also Read: ಫಸ್ಟ್​​​ ನೈಟ್​​​ ನಡೆಯುವುದಕ್ಕೂ ಮುನ್ನ, ಶೋಭನದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಹೌದು ತಪ್ಪು ತಪ್ಪೇ.. ಅದಕ್ಕೇ ಜನ ಸಿಟ್ಟು ಮಾಡಿಕೊಂಡರೆ ತನಗೆ ಉಳಿಗಾಲವಿಲ್ಲ ಅಂತಾ ಆ ಬೇಜವಾಬ್ದಾರಿ ಚಾಲಕ ಕಾರನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾನೆ. ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿವೆ. ಈ ರೀತಿ ಬೇಜವಾಬ್ದಾರಿಯಿಂದ ವರ್ತಿಸಿದ್ದಕ್ಕೆ ನೆಟ್ಟಿಗರು ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದಿದ್ದಾರೆ. ಈ ಮಧ್ಯೆ, ಹಯಾತ್​​ ನಗರ ಪೊಲೀಸರು (Hayathnagar Police) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ