AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Car Accident: ಗುಜರಾತ್​​ನಲ್ಲಿ ಆಟೋಗೆ ಡಿಕ್ಕಿ ಹೊಡೆದ ಎಸ್​ಯುವಿ ಕಾರು; ಭೀಕರ ಅಪಘಾತದಲ್ಲಿ 6 ಜನ ಸಾವು

Gujarat News: ಕುಟುಂಬದ ಸದಸ್ಯರು ರಕ್ಷಾಬಂಧನವನ್ನು ಆಚರಿಸಿ ಹಿಂತಿರುಗುತ್ತಿದ್ದಾಗ ಆನಂದ್ ಜಿಲ್ಲೆಯ ಸೋಜಿತ್ರಾ ಬಳಿ ಈ ಅಪಘಾತ ಸಂಭವಿಸಿದೆ.

Car Accident: ಗುಜರಾತ್​​ನಲ್ಲಿ ಆಟೋಗೆ ಡಿಕ್ಕಿ ಹೊಡೆದ ಎಸ್​ಯುವಿ ಕಾರು; ಭೀಕರ ಅಪಘಾತದಲ್ಲಿ 6 ಜನ ಸಾವು
ಗುಜರಾತ್​​ನಲ್ಲಿ ಕಾರು ಅಪಘಾತImage Credit source: India.com
TV9 Web
| Updated By: ಸುಷ್ಮಾ ಚಕ್ರೆ|

Updated on:Aug 12, 2022 | 11:31 AM

Share

ಅಹಮದಾಬಾದ್: ಗುಜರಾತ್‌ನ (Gujarat) ಆನಂದ್ ಜಿಲ್ಲೆಯ ಸೋಜಿತ್ರಾ ಗ್ರಾಮದ ಬಳಿ ಗುರುವಾರ ಸಂಜೆ ವೇಗವಾಗಿ ಬಂದ ಎಸ್‌ಯುವಿ ಕಾರು ಆಟೋ ರಿಕ್ಷಾ ಮತ್ತು ಮೋಟಾರ್‌ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದಾರೆ. ಆನಂದ ಪಟ್ಟಣ ಮತ್ತು ತಾರಾಪುರದ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಆಟೋ ರಿಕ್ಷಾದಲ್ಲಿದ್ದ (Auto Rickshaw) ನಾಲ್ವರು ಹಾಗೂ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಟುಂಬದ ಸದಸ್ಯರು ರಕ್ಷಾಬಂಧನವನ್ನು ಆಚರಿಸಿ ಹಿಂತಿರುಗುತ್ತಿದ್ದಾಗ ಆನಂದ್ ಜಿಲ್ಲೆಯ ಸೋಜಿತ್ರಾ ಬಳಿ ಈ ಅಪಘಾತ ಸಂಭವಿಸಿದೆ. ಎಸ್‌ಯುವಿ ಕಾರು ಚಾಲನೆ ಮಾಡುತ್ತಿದ್ದ ಕೇತನ್ ರಮಣ್‌ಭಾಯ್ ಪಾಧಿಯಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಇದನ್ನೂ ಓದಿ
Image
Crime News: ಸೊಸೆಯ ತಲೆ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಅತ್ತೆ!
Image
Gold Price Today: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಕುಸಿತ; ಬೆಳ್ಳಿ ದರ 200 ರೂ. ಏರಿಕೆ
Image
ಗುಜರಾತ್‌ನ ಜಾಮ್‌ನಗರದ 36 ಕೊಠಡಿಗಳ ಹೋಟೆಲ್‌ನಲ್ಲಿ ಭಾರೀ ಅಗ್ನಿ ದುರಂತ: 25 ಮಂದಿ ಅಗ್ನಿಗಾಹುತಿ ಶಂಕೆ

ಇದನ್ನೂ ಓದಿ: Accident: ಭೀಕರ ಅಪಘಾತ; ಭತ್ತದ ಗದ್ದೆಯಿಂದ ಮನೆಗೆ ಹಿಂದಿರುಗುತ್ತಿದ್ದ 8 ಮಹಿಳಾ ಕೃಷಿ ಕಾರ್ಮಿಕರು ಸಾವು

ಆನಂದ್‌ನ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗುಪ್ತಾ ಮಾತನಾಡಿ, ಆನಂದ್‌ನಲ್ಲಿ ರಾತ್ರಿ 7 ಗಂಟೆಗೆ ಕಾರು, ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ನಾಲ್ವರು ಹಾಗೂ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.

ಅಪಘಾತದಲ್ಲಿ ವಿನಾ ವಿಪುಲ್ ಮಿಸ್ತ್ರಿ (44) ಮತ್ತು ಆಕೆಯ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳಾದ ಜಿಯಾ (14) ಮತ್ತು ಜಾನ್ವಿ (17) ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ರಿಕ್ಷಾ ಚಾಲಕ ಯಾಸಿನ್ ಮೊಹಮ್ಮದ್ ವೋಹ್ರಾ (38) ಕೂಡ ಸಾವನ್ನಪ್ಪಿದ್ದಾರೆ. ಬೈಕ್‌ನಲ್ಲಿದ್ದ ಯೋಗೇಶ್ ರಾಜೇಶ್ ಓಡ್ (20) ಮತ್ತು ಸಂದೀಪ್ ಠಾಕೂರ್ ಓಡ್ (19) ಸಹ ಸೋಜಿತ್ರಾದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:30 am, Fri, 12 August 22