AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣದಲ್ಲೂ ಪ್ರತಿಭಟನಾ ನಿರತ ರೈತರತ್ತ ನುಗ್ಗಿದ ಕಾರು; ಪೊಲೀಸರಿಗೆ ದೂರು ನೀಡಿದ ಗಾಯಾಳು ರೈತ

ಗಾಯಗೊಂಡ ರೈತನಿಗೆ ನರೈಂಗರ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಂತ ದೊಡ್ಡಮಟ್ಟದ ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೇ, ಘಟನೆಗೆ ಸಂಬಂಧಪಟ್ಟಂತೆ ಯಾವುದೇ ಎಫ್​ಐಆರ್​ ಇನ್ನೂ ದಾಖಲಾಗಿಲ್ಲ. 

ಹರ್ಯಾಣದಲ್ಲೂ ಪ್ರತಿಭಟನಾ ನಿರತ ರೈತರತ್ತ ನುಗ್ಗಿದ ಕಾರು; ಪೊಲೀಸರಿಗೆ ದೂರು ನೀಡಿದ ಗಾಯಾಳು ರೈತ
ಲಖಿಂಪುರ ಖೇರಿ ಹಿಂಸಾಚಾರದ ದೃಶ್ಯ
TV9 Web
| Edited By: |

Updated on:Oct 07, 2021 | 5:01 PM

Share

ಹರ್ಯಾಣದ ನರೈಂಗರ್​ ಎಂಬಲ್ಲಿಯೂ ಕೂಡ ಲಖಿಂಪುರ ಖೇರಿಯಲ್ಲಿ ನಡೆದ ಘಟನೆಯಂಥದ್ದೇ ಘಟನೆ ನಡೆದಿದ್ದು, ವರದಿಯಾಗಿದೆ. ಇಲ್ಲಿ ಬಿಜೆಪಿ ಶಾಸಕ ಸಂದೀಪ್​ ಸಿಂಗ್​ ಅವರ ಸನ್ಮಾನ ಕಾರ್ಯಕ್ರಮದ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರತ್ತ ಕಾರು ಹರಿದಿದೆ, ಈ ಘಟನೆಯಲ್ಲಿ ಒಬ್ಬ ರೈತ ಗಾಯಗೊಂಡಿದ್ದಾರೆ ಎಂದು ಆ ಸಮಯದಲ್ಲಿ ಸ್ಥಳದಲ್ಲಿದ್ದ ರೈತರಗೊಬ್ಬರು ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ 11ಗಂಟೆ ಹೊತ್ತಿಗೆ ಘಟನೆ ನಡೆದಿದೆ ಎಂದೂ ಅವರು ತಿಳಿಸಿದ್ದಾರೆ.  

ಇಂದು ಹರ್ಯಾಣದ ನರೈಂಗರ್​​ನ ಸೈನಿ ಭವನದಲ್ಲಿ ಬಿಜೆಪಿ ಶಾಸಕ ಸಂದೀಪ್​ ಸಿಂಗ್​​ಗೆ ಸನ್ಮಾನ ಕಾರ್ಯಕ್ರಮವಿತ್ತು. ಇದರಲ್ಲಿ ಕುರುಕ್ಷೇತ್ರ ಸಂಸದ ನಯಾಬ್​ ಸೈನಿ ಮತ್ತಿತರ ಬಿಜೆಪಿ ನಾಯಕರು ಪಾಲ್ಗೊಂಡಿದ್ದರು. ಅಲ್ಲೇ ಸಮೀಪದಲ್ಲಿ ರೈತರು, ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರು. ಕಾರ್ಯಕ್ರಮ ಮುಕ್ತಾಯವಾಗುತ್ತಿದ್ದಂತೆ  ಸಂಸದ ನಯಾಬ್​ ಅವರ ಬೆಂಗಾವಲು ವಾಹನವೊಂದು ರೈತರತ್ತ ನುಗ್ಗಿದೆ ಎಂದು ಗಾಯಗೊಂಡ ರೈತ ಭವನ್​ ಪ್ರೀತ್​ ಸಿಂಗ್​ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಗಾಯಗೊಂಡ ರೈತನಿಗೆ ನರೈಂಗರ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಂತ ದೊಡ್ಡಮಟ್ಟದ ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೇ, ಘಟನೆಗೆ ಸಂಬಂಧಪಟ್ಟಂತೆ ಯಾವುದೇ ಎಫ್​ಐಆರ್​ ಇನ್ನೂ ದಾಖಲಾಗಿಲ್ಲ.  ಆದರೆ ರೈತರತ್ತ ನುಗ್ಗಿದ ಕಾರಿನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಪ್ರತಿಭಟನಾ ನಿರತ ರೈತರು ಆಗ್ರಹಿಸುತ್ತಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರತ್ತ ಕಾರು ನುಗ್ಗಿ ದೊಡ್ಡ ಮಟ್ಟದ ಹಿಂಸಾಚಾರ ನಡೆದ ಬೆನ್ನಲ್ಲೇ ಹರ್ಯಾಣದಿಂದಲೂ ಇಂಥದ್ದೇ ಘಟನೆ ವರದಿಯಾಗಿದೆ. ಲಖಿಂಪುರ ಖೇರಿಯಲ್ಲಿ ನಡೆದ ಘಟನೆಯಲ್ಲಿ ಬಿಜೆಪಿ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ವಿರುದ್ಧ ಆರೋಪ ಕೇಳಿಬಂದಿದ್ದರೆ, ಇಲ್ಲಿ ಬಿಜೆಪಿ ಸಂಸದನ ಬೆಂಗಾವಲು ವಾಹನದ ವಿರುದ್ಧ ರೈತರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ‘ಶೀಘ್ರವೇ ಮಹತ್ವದ ಘೋಷಣೆ ಮಾಡುತ್ತೇನೆ ಎಂದ ಕಾಜಲ್ ಅಗರ್​​ವಾಲ್​’​; ನಟಿ ಪ್ರೆಗ್ನೆಂಟ್​ ಎಂದ ಅಭಿಮಾನಿಗಳು

ಧೈರ್ಯ ಇದ್ದರೆ ನನ್ನ ಮುಂದೆ ಬನ್ನಿ, ಚರ್ಚಿಸೋಣ; ಉಗ್ರರಿಗೆ ಸವಾಲು ಹಾಕಿದ ಶ್ರದ್ಧಾ ಬಿಂದ್ರೂ

Published On - 4:41 pm, Thu, 7 October 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ