AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣದಲ್ಲೂ ಪ್ರತಿಭಟನಾ ನಿರತ ರೈತರತ್ತ ನುಗ್ಗಿದ ಕಾರು; ಪೊಲೀಸರಿಗೆ ದೂರು ನೀಡಿದ ಗಾಯಾಳು ರೈತ

ಗಾಯಗೊಂಡ ರೈತನಿಗೆ ನರೈಂಗರ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಂತ ದೊಡ್ಡಮಟ್ಟದ ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೇ, ಘಟನೆಗೆ ಸಂಬಂಧಪಟ್ಟಂತೆ ಯಾವುದೇ ಎಫ್​ಐಆರ್​ ಇನ್ನೂ ದಾಖಲಾಗಿಲ್ಲ. 

ಹರ್ಯಾಣದಲ್ಲೂ ಪ್ರತಿಭಟನಾ ನಿರತ ರೈತರತ್ತ ನುಗ್ಗಿದ ಕಾರು; ಪೊಲೀಸರಿಗೆ ದೂರು ನೀಡಿದ ಗಾಯಾಳು ರೈತ
ಲಖಿಂಪುರ ಖೇರಿ ಹಿಂಸಾಚಾರದ ದೃಶ್ಯ
TV9 Web
| Updated By: Lakshmi Hegde|

Updated on:Oct 07, 2021 | 5:01 PM

Share

ಹರ್ಯಾಣದ ನರೈಂಗರ್​ ಎಂಬಲ್ಲಿಯೂ ಕೂಡ ಲಖಿಂಪುರ ಖೇರಿಯಲ್ಲಿ ನಡೆದ ಘಟನೆಯಂಥದ್ದೇ ಘಟನೆ ನಡೆದಿದ್ದು, ವರದಿಯಾಗಿದೆ. ಇಲ್ಲಿ ಬಿಜೆಪಿ ಶಾಸಕ ಸಂದೀಪ್​ ಸಿಂಗ್​ ಅವರ ಸನ್ಮಾನ ಕಾರ್ಯಕ್ರಮದ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರತ್ತ ಕಾರು ಹರಿದಿದೆ, ಈ ಘಟನೆಯಲ್ಲಿ ಒಬ್ಬ ರೈತ ಗಾಯಗೊಂಡಿದ್ದಾರೆ ಎಂದು ಆ ಸಮಯದಲ್ಲಿ ಸ್ಥಳದಲ್ಲಿದ್ದ ರೈತರಗೊಬ್ಬರು ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ 11ಗಂಟೆ ಹೊತ್ತಿಗೆ ಘಟನೆ ನಡೆದಿದೆ ಎಂದೂ ಅವರು ತಿಳಿಸಿದ್ದಾರೆ.  

ಇಂದು ಹರ್ಯಾಣದ ನರೈಂಗರ್​​ನ ಸೈನಿ ಭವನದಲ್ಲಿ ಬಿಜೆಪಿ ಶಾಸಕ ಸಂದೀಪ್​ ಸಿಂಗ್​​ಗೆ ಸನ್ಮಾನ ಕಾರ್ಯಕ್ರಮವಿತ್ತು. ಇದರಲ್ಲಿ ಕುರುಕ್ಷೇತ್ರ ಸಂಸದ ನಯಾಬ್​ ಸೈನಿ ಮತ್ತಿತರ ಬಿಜೆಪಿ ನಾಯಕರು ಪಾಲ್ಗೊಂಡಿದ್ದರು. ಅಲ್ಲೇ ಸಮೀಪದಲ್ಲಿ ರೈತರು, ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರು. ಕಾರ್ಯಕ್ರಮ ಮುಕ್ತಾಯವಾಗುತ್ತಿದ್ದಂತೆ  ಸಂಸದ ನಯಾಬ್​ ಅವರ ಬೆಂಗಾವಲು ವಾಹನವೊಂದು ರೈತರತ್ತ ನುಗ್ಗಿದೆ ಎಂದು ಗಾಯಗೊಂಡ ರೈತ ಭವನ್​ ಪ್ರೀತ್​ ಸಿಂಗ್​ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಗಾಯಗೊಂಡ ರೈತನಿಗೆ ನರೈಂಗರ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಂತ ದೊಡ್ಡಮಟ್ಟದ ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೇ, ಘಟನೆಗೆ ಸಂಬಂಧಪಟ್ಟಂತೆ ಯಾವುದೇ ಎಫ್​ಐಆರ್​ ಇನ್ನೂ ದಾಖಲಾಗಿಲ್ಲ.  ಆದರೆ ರೈತರತ್ತ ನುಗ್ಗಿದ ಕಾರಿನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಪ್ರತಿಭಟನಾ ನಿರತ ರೈತರು ಆಗ್ರಹಿಸುತ್ತಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರತ್ತ ಕಾರು ನುಗ್ಗಿ ದೊಡ್ಡ ಮಟ್ಟದ ಹಿಂಸಾಚಾರ ನಡೆದ ಬೆನ್ನಲ್ಲೇ ಹರ್ಯಾಣದಿಂದಲೂ ಇಂಥದ್ದೇ ಘಟನೆ ವರದಿಯಾಗಿದೆ. ಲಖಿಂಪುರ ಖೇರಿಯಲ್ಲಿ ನಡೆದ ಘಟನೆಯಲ್ಲಿ ಬಿಜೆಪಿ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ವಿರುದ್ಧ ಆರೋಪ ಕೇಳಿಬಂದಿದ್ದರೆ, ಇಲ್ಲಿ ಬಿಜೆಪಿ ಸಂಸದನ ಬೆಂಗಾವಲು ವಾಹನದ ವಿರುದ್ಧ ರೈತರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ‘ಶೀಘ್ರವೇ ಮಹತ್ವದ ಘೋಷಣೆ ಮಾಡುತ್ತೇನೆ ಎಂದ ಕಾಜಲ್ ಅಗರ್​​ವಾಲ್​’​; ನಟಿ ಪ್ರೆಗ್ನೆಂಟ್​ ಎಂದ ಅಭಿಮಾನಿಗಳು

ಧೈರ್ಯ ಇದ್ದರೆ ನನ್ನ ಮುಂದೆ ಬನ್ನಿ, ಚರ್ಚಿಸೋಣ; ಉಗ್ರರಿಗೆ ಸವಾಲು ಹಾಕಿದ ಶ್ರದ್ಧಾ ಬಿಂದ್ರೂ

Published On - 4:41 pm, Thu, 7 October 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!