AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​​​ನಲ್ಲಿ ಭೀಕರ ಅಪಘಾತ; ಕಾರು-ಟ್ರಕ್ ಡಿಕ್ಕಿ, ನಾಲ್ವರ ದುರ್ಮರಣ

ಹೋಶಿಯಾರ್‌ಪುರದ ಮುಕೇರಿಯನ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಪಂಜಾಬ್​​​​ನಲ್ಲಿ ಭೀಕರ ಅಪಘಾತ; ಕಾರು-ಟ್ರಕ್ ಡಿಕ್ಕಿ, ನಾಲ್ವರ ದುರ್ಮರಣ
ಪಂಜಾಬ್​​​​ನಲ್ಲಿ ಭೀಕರ ಅಪಘಾತ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 27, 2024 | 7:41 AM

Share

ಚಂಡಿಗಢ, ಜ.27: ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ಕಾರೊಂದು ಟ್ರಕ್‌ಗೆ ಡಿಕ್ಕಿ (Accident) ಹೊಡೆದು ಬೆಂಕಿ ಹೊತ್ತಿಕೊಂಡಿದ್ದು ಈ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ (Death). ಹಾಗೂ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಪೊಲೀಸರ ಪ್ರಕಾರ, ಹೋಶಿಯಾರ್‌ಪುರದ ಮುಕೇರಿಯನ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ಸಹಾಯದಿಂದ ಕಾರಿನಲ್ಲಿ ಸಿಲುಕಿದ್ದ ಜನರನ್ನು ಹೊರತೆಗೆದು ಅವರನ್ನು ಮುಕೇರಿಯನ್ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಅಗ್ನಿಶಾಮಕ ದಳದವರು ಕಾರಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಪೊಲೀಸರು ಶವವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಈ ಅಪಘಾತದ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ದಕ್ಷಿಣಕ್ಕೆ ಎದುರಾಗಿರುವ ಮನೆಯನ್ನು ಏಕೆ ದುರಾದೃಷ್ಟ ಎಂದು ಪರಿಗಣಿಸಲಾಗುತ್ತದೆ?

ಮೃತರನ್ನು ಇನ್ನೂ ಗುರುತಿಸಲಾಗಿಲ್ಲ, ಆದರೆ ಅಪಘಾತಕ್ಕೀಡಾದ ವಾಹನದ ನಂಬರ್ ಪ್ಲೇಟ್ ಜಲಂಧರ್‌ನದ್ದಾಗಿರುವುದರಿಂದ ಅವರು ಜಲಂಧರ್ ನಿವಾಸಿಗಳಾಗಿರಬಹುದು ಎಂದು ಊಹಿಸಲಾಗಿದೆ.

ಕಳೆದ ವರ್ಷದ ಆರಂಭದಲ್ಲಿ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯಲ್ಲಿ ಎರಡು ಟ್ರಾಕ್ಟರ್ ಟ್ರಾಲಿಗಳಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದರು. ಮರ್ದ್ಖೇರಾ ಗ್ರಾಮದ ಬಳಿ ಸುನಮ್-ಪಟಿಯಾಲ ರಸ್ತೆಯಲ್ಲಿ ಅಪಘಾತ ಸಂಭವಿಸಿತ್ತು. ನೀರಜ್ ಸಿಂಗ್ಲಾ ಅವರು ಮಲೇರ್‌ಕೋಟ್ಲಾದಿಂದ ಸುನಮ್ ಪಟ್ಟಣದ ಕಡೆಗೆ ಚಲಾಯಿಸುತ್ತಿದ್ದ ಕಾರು ಮರ್ದಖೇರಾ ಗ್ರಾಮದಿಂದ ಬರುತ್ತಿದ್ದ ಎರಡು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಡಿಕ್ಕಿ ಹೊಡೆದಿತ್ತು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ