AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿಯಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಸೇರಿದಂತೆ ವೈಜ್ಞಾನಿಕ ತನಿಖೆಗಾಗಿ ಮನವಿ; ಇಂದು ನಿರ್ಣಾಯಕ ಆದೇಶ ಸಾಧ್ಯತೆ

ಜ್ಞಾನವಾಪಿ ಮಸೀದಿಯೊಳಗಿನ ದೇಗುಲದಲ್ಲಿ ವರ್ಷಪೂರ್ತಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಐದು ಹಿಂದೂ ಮಹಿಳಾ ಅರ್ಜಿದಾರರ ಪೈಕಿ ನಾಲ್ವರ ಅರ್ಜಿ ಬಗ್ಗೆ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಜ್ಞಾನವಾಪಿಯಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಸೇರಿದಂತೆ ವೈಜ್ಞಾನಿಕ ತನಿಖೆಗಾಗಿ ಮನವಿ; ಇಂದು ನಿರ್ಣಾಯಕ ಆದೇಶ ಸಾಧ್ಯತೆ
ಜ್ಞಾನವಾಪಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 07, 2022 | 11:06 AM

Share

ಲಕ್ನೋ: ಈ ವರ್ಷದ ಆರಂಭದಲ್ಲಿ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ (c)  ಪತ್ತೆಯಾದ ‘ಶಿವಲಿಂಗ’ದ (Shivling)ಕಾರ್ಬನ್ ಡೇಟಿಂಗ್ ಸೇರಿದಂತೆ ವೈಜ್ಞಾನಿಕ ತನಿಖೆಗಾಗಿ ಹಿಂದೂ ಮಹಿಳಾ ಅರ್ಜಿದಾರರು ಮನವಿ ಮಾಡಿದ್ದು, ಈ ಬಗ್ಗೆ ವಾರಣಾಸಿಯ ಹಿರಿಯ ನ್ಯಾಯಾಧೀಶರ ನ್ಯಾಯಾಲಯವು ಇಂದು ನಿರ್ಣಾಯಕ ಆದೇಶವನ್ನು ನೀಡುವ ಸಾಧ್ಯತೆ ಇದೆ. ಕೆಳ ನ್ಯಾಯಾಲಯದ ಆದೇಶದ ಮೇರೆಗೆ ಜ್ಞಾನವಾಪಿ ಮಸೀದಿಯ ವಿಡಿಯೊ ಸಮೀಕ್ಷೆಯನ್ನು ನಡೆಸಲಾಗಿತ್ತು. ಜ್ಞಾನವಾಪಿ ಮಸೀದಿಯೊಳಗಿನ ದೇಗುಲದಲ್ಲಿ ವರ್ಷಪೂರ್ತಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಐದು ಹಿಂದೂ ಮಹಿಳಾ ಅರ್ಜಿದಾರರ ಪೈಕಿ ನಾಲ್ವರ ಅರ್ಜಿ ಬಗ್ಗೆ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಕಳೆದ ತಿಂಗಳು ‘ಶಿವಲಿಂಗ’ದ ವಯಸ್ಸು ನಿರ್ಧರಿಸುವುದಕ್ಕಾಗಿ “ವೈಜ್ಞಾನಿಕ ತನಿಖೆ” ನಡೆಸಬೇಕು ಎಂದು ಇವರು ಅರ್ಜಿ ಸಲ್ಲಿಸಿದ್ದರು. ಅಂತಹ ತನಿಖೆಯು ಕಾರ್ಬನ್ ಡೇಟಿಂಗ್ ಪ್ರಕ್ರಿಯೆಯನ್ನು ಒಳಗೊಂಡಿರುತ್ತದೆ. ಸರ್ಕಾರಿ ಸಂಸ್ಥೆಯಾದ ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಇದನ್ನು ನಡೆಸಬಹುದು ಎಂದು ಮಹಿಳೆಯರು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

ಐವರು ಹಿಂದೂ ಮಹಿಳೆಯರಲ್ಲಿ ಒಬ್ಬರು, ಇತರ ನಾಲ್ವರು ಮಹಿಳೆಯರ ವೈಜ್ಞಾನಿಕ ತನಿಖೆಯ ಮನವಿಯನ್ನು ವಿರೋಧಿಸಿ, ಕಾರ್ಬನ್ ಡೇಟಿಂಗ್ ಸೇರಿದಂತೆ ಯಾವುದೇ ಪರೀಕ್ಷೆಯು ‘ಶಿವಲಿಂಗ’ಕ್ಕೆ ಹಾನಿ ಮಾಡುತ್ತದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 12 ರಂದು, ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಮಸೀದಿಯ ಸಂಕೀರ್ಣದೊಳಗೆ ವರ್ಷಪೂರ್ತಿ ಪೂಜೆಗಾಗಿ ಹಿಂದೂ ಮಹಿಳೆಯರು ನಡೆಸುತ್ತಿರುವ ಪ್ರಕರಣಕ್ಕೆ ಯಾವುದೇ ಕಾನೂನು ಮಾನ್ಯತೆ ಇಲ್ಲ ಎಂದ ಮಸೀದಿ ಸಮಿತಿಯ ಮೇಲ್ಮನವಿ ವಜಾಗೊಳಿಸಿದರು. ಅವರು ಉಲ್ಲೇಖಿಸಿದ ಎಲ್ಲಾ ಮೂರು ಅಂಶಗಳ ಮೇಲೆ ಅವರ ಮೇಲ್ಮನವಿ ತಿರಸ್ಕರಿಸಲಾಯಿತು. ಇವುಗಳಲ್ಲಿ ಪ್ರಮುಖವಾದದ್ದು 1991 ರ ಕಾನೂನು, ಅದು ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಪೂಜಾ ಸ್ಥಳದ ಸ್ಥಿತಿಯನ್ನು ಸ್ಥಗಿತಗೊಳಿಸುತ್ತದೆ. ಅರ್ಜಿದಾರರು ಮಾಲೀಕತ್ವವನ್ನು ಬಯಸಲಿಲ್ಲ, ಕೇವಲ ಪೂಜೆ ಮಾಡುವ ಹಕ್ಕು ಕೇಳಿದ್ದು ಎಂದು ನ್ಯಾಯಾಲಯ ತೀರ್ಪು ನೀಡಿತು.

ಈ ವರ್ಷದ ಆರಂಭದಲ್ಲಿ, ವಾರಣಾಸಿಯ ಕೆಳ ನ್ಯಾಯಾಲಯವು ಮಹಿಳೆಯರ ಅರ್ಜಿಯ ಆಧಾರದ ಮೇಲೆ ಶತಮಾನಗಳಷ್ಟು ಹಳೆಯದಾದ ಮಸೀದಿಯ ಚಿತ್ರೀಕರಣಕ್ಕೆ ಆದೇಶಿಸಿತ್ತು. ಹಿಂದೂ ಅರ್ಜಿದಾರರಿಂದ ವಿವಾದಾತ್ಮಕವಾಗಿ ಸೋರಿಕೆಯಾದ ವೀಡಿಯೊಗ್ರಫಿ ವರದಿಯಲ್ಲಿ, ಮುಸ್ಲಿಂ ಪ್ರಾರ್ಥನೆಯ ಮೊದಲು ವಜೂ ಅಥವಾ ಶುದ್ಧೀಕರಣ ಆಚರಣೆಗಳಿಗೆ ಬಳಸಲಾಗುವ ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಅಥವಾ ಶಿವನ ಅವಶೇಷ ಕಂಡುಬಂದಿದೆ ಎಂದು ಹೇಳಲಾಗಿದೆ.

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು