AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನ್ ಟೈಗರ್ ಫೋರ್ಸ್ ವಿರುದ್ಧದ ಪ್ರಕರಣ: ಪಂಜಾಬ್, ಹರ್ಯಾಣದಲ್ಲಿ ಎನ್ಐಎ ದಾಳಿ

ನಿಷೇಧಿತ ಭಯೋತ್ಪಾದಕ ಸಂಘಟನೆಗೆ ನಿಧಿ ಸಂಗ್ರಹಿಸಲು ಮತ್ತು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ಗಡಿಯಾಚೆಗೆ ಕಳ್ಳಸಾಗಣೆ ಮಾಡಲು ಕ್ರಿಮಿನಲ್ ಸಂಚು ರೂಪಿಸಿದ್ದಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಒಂಬತ್ತು ಮತ್ತು ಹರ್ಯಾಣದ ಒಂದು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.

ಖಲಿಸ್ತಾನ್ ಟೈಗರ್ ಫೋರ್ಸ್ ವಿರುದ್ಧದ ಪ್ರಕರಣ: ಪಂಜಾಬ್, ಹರ್ಯಾಣದಲ್ಲಿ ಎನ್ಐಎ ದಾಳಿ
ಎನ್ಐಎ
ರಶ್ಮಿ ಕಲ್ಲಕಟ್ಟ
|

Updated on:Jun 06, 2023 | 1:30 PM

Share

ನಿಷೇಧಿತ ಭಯೋತ್ಪಾದಕ ಸಂಘಟನೆ ಖಲಿಸ್ತಾನ್ ಟೈಗರ್ ಫೋರ್ಸ್ (KTF) ಗೆ ಸಂಬಂಧಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು(ಮಂಗಳವಾರ) ಪಂಜಾಬ್ ಮತ್ತು ಹರ್ಯಾಣದ 10 ಸ್ಥಳಗಳಲ್ಲಿ ಶೋಧ ನಡೆಸಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆಗೆ ನಿಧಿ ಸಂಗ್ರಹಿಸಲು ಮತ್ತು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ಗಡಿಯಾಚೆಗೆ ಕಳ್ಳಸಾಗಣೆ ಮಾಡಲು ಕ್ರಿಮಿನಲ್ ಸಂಚು ರೂಪಿಸಿದ್ದಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಒಂಬತ್ತು ಮತ್ತು ಹರ್ಯಾಣದ ಒಂದು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.

ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎನ್‌ಐಎ ಕಳೆದ ವರ್ಷ ಆಗಸ್ಟ್ 20 ರಂದು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿತ್ತು. ಅದೇ ಪ್ರಕರಣದಲ್ಲಿ, ಎನ್‌ಐಎ ಈ ವರ್ಷ ಮೇ 19 ರಂದು ಕೆನಡಾ ಮೂಲದ ‘ಲಿಸ್ಟೆಡ್ ಭಯೋತ್ಪಾದಕ’ ಆರ್ಶ್ ಧಲ್ಲಾನ ಇಬ್ಬರು ‘ವಾಂಟೆಡ್’ ನಿಕಟ ಸಹಚರರು ಫಿಲಿಪೈನ್ಸ್‌ನ ಮನಿಲಾದಿಂದ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಕೂಡಲೇ ಬಂಧಿಸಿತು.

ಇವರಿಬ್ಬರನ್ನು ಅಮೃತಪಾಲ್ ಸಿಂಗ್ ಅಲಿಯಾಸ್ ಅಮ್ಮಿ ಮತ್ತು ಅಮೃತ್ ಸಿಂಗ್ ಎಂದು ಗುರುತಿಸಲಾಗಿದೆ. ಇಬ್ಬರೂ ಪಂಜಾಬ್ ಮೂಲದವರಾಗಿದ್ದು, ವಿಮಾನ ಇಳಿಯುತ್ತಿದ್ದಂತೆ ಎನ್‌ಐಎ ಮುಂಜಾನೆ ಕಾರ್ಯಾಚರಣೆಯಲ್ಲಿ ಬಂಧಿಸಿದೆ.

ಭಾರತದಲ್ಲಿ ನಿಷೇಧಿತ ಸಂಘಟನೆಗಳ ಕಾನೂನುಬಾಹಿರ ಮತ್ತು ಹಿಂಸಾತ್ಮಕ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಎನ್‌ಐಎ ದೆಹಲಿ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್‌ಗಳನ್ನು ಹೊರಡಿಸಿದೆ ಎಂದು ಎನ್‌ಐಎ ಈ ಹಿಂದೆ ತಿಳಿಸಿತ್ತು. ಆರೋಪಿಗಳ ವಿರುದ್ಧ ಪಂಜಾಬ್‌ನಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಆರೋಪಿಯು ಭಾರತದಲ್ಲಿ ಕೆಟಿಎಫ್‌ನ ಹಿಂಸಾತ್ಮಕ ಅಪರಾಧ ಚಟುವಟಿಕೆಗಳನ್ನು ಉತ್ತೇಜಿಸಲು ಗೊತ್ತುಪಡಿಸಿದ ಭಯೋತ್ಪಾದಕ ಆರ್ಷದೀಪ್ ಸಿಂಗ್ ಧಲ್ಲಾಗಾಗಿ ಕೆಲಸ ಮಾಡುತ್ತಿದ್ದ ಎಂದು ಎನ್‌ಐಎ ತನಿಖೆಗಳು ಬಹಿರಂಗಪಡಿಸಿವೆ. ಮತ್ತೋರ್ವ ಕುಖ್ಯಾತ ವಾಂಟೆಡ್ ಆರೋಪಿ ಮನ್‌ಪ್ರೀತ್ ಸಿಂಗ್ ಅಲಿಯಾಸ್ ಪೀಟಾ ಜತೆಗೂಡಿ, ಇಬ್ಬರು ಆರೋಪಿಗಳು ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡುವಲ್ಲಿ ತೊಡಗಿದ್ದರು. ಕೆಟಿಎಫ್‌ನ ಆಜ್ಞೆಯ ಮೇರೆಗೆ ದೇಶದಲ್ಲಿ ಹಿಂಸಾಚಾರ ಮತ್ತು ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಯುವಕರನ್ನು ನೇಮಿಸಿಕೊಳ್ಳುತ್ತಿದ್ದರು ಎಂದು ಎನ್‌ಐಎ ಹೇಳಿದೆ.

ಅವರು ನಿಷೇಧಿತ ಸಂಘಟನೆಗೆ ಹಣವನ್ನು ಸಂಗ್ರಹಿಸುವುದಕ್ಕಾಗಿ ಸುಲಿಗೆ ದಂಧೆಯ ಭಾಗವಾಗಿದ್ದರು. ಆರೋಪಿಗಳು ಉದ್ಯಮಿಗಳನ್ನು ಗುರುತಿಸಿ ಸುಲಿಗೆಗೆ ಬೆದರಿಕೆಯೊಡ್ಡುತ್ತಿದ್ದರು. ಅವರು ನಿರಾಕರಿಸಿದರೆ, ಅವರ ಮನೆಗಳು ಮತ್ತು ಇತರ ಆವರಣಗಳ ಮೇಲೆ ಆರೋಪಿಗಳ ಭಾರತ ಮೂಲದ ಸಹಚರರು ಗುಂಡು ಹಾರಿಸುತ್ತಿದ್ದರು ಎಂದು ಎನ್ಐಎ ಹೇಳಿದೆ.

ಇದನ್ನೂ ಓದಿ: ನಾಯಿ ಮಾಂಸ ಮಾರಾಟ ನಿಷೇಧಿಸಿದ ನಾಗಾಲ್ಯಾಂಡ್ ಸರ್ಕಾರದ ಆದೇಶವನ್ನು ರದ್ದು ಮಾಡಿದ ಗೌಹಾಟಿ ಹೈಕೋರ್ಟ್

ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳಂತಹ ಭಯೋತ್ಪಾದಕ ವಸ್ತುಗಳ ಕಳ್ಳಸಾಗಣೆ ಮಾಡಲು ಮತ್ತು ಭಾರತದ ನೆಲದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಹಣವನ್ನು ಸಂಗ್ರಹಿಸಲು ಕ್ರಿಮಿನಲ್ ಪಿತೂರಿಯಲ್ಲಿ ತೊಡಗಿರುವ ಭಯೋತ್ಪಾದಕ ಸಂಘಟನೆಗಳ ಮೇಲೆ NIA ಯ ನಿರಂತರ ನಿಗ್ರಹದ ಭಾಗವಾಗಿ ಈ ಬಂಧನಗಳು ನಡೆದಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:06 pm, Tue, 6 June 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ