AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಕೋರ್ಟ್​ ಆವರಣದಲ್ಲಿ ವಕೀಲರಿಂದ ಯುವತಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲು

ಕೆಲಸ ಕೊಡಿಸುತ್ತೇನೆ ಅಂದು ಕೋರ್ಟ್​ಗೆ ಕರೆಸಿಕೊಂಡು ವಕೀಲರೊಬ್ಬರು 21 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.ಯುವತಿ ಕೂಗಲು ಯತ್ನಿಸಿದಾಗ ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಬಳಿಕ ಆಕೆಗೆ 1,500 ಹಣ ನೀಡಿ ಅಲ್ಲಿಂದ ಹೋಗುವಂತೆ ಹೇಳಿದ್ದರು.

ದೆಹಲಿ ಕೋರ್ಟ್​ ಆವರಣದಲ್ಲಿ ವಕೀಲರಿಂದ ಯುವತಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲು
ನ್ಯಾಯಾಲಯImage Credit source: India Today
ನಯನಾ ರಾಜೀವ್
|

Updated on:Aug 09, 2024 | 3:12 PM

Share

ಕೆಲಸ ಕೊಡಿಸುವ ನೆಪದಲ್ಲಿ ಯುವತಿಯನ್ನು ಕರೆಸಿಕೊಂಡು ಕೋರ್ಟ್​ ಆವರಣದಲ್ಲೇ ವಕೀಲರೊಬ್ಬರು ಅತ್ಯಾಚಾರವೆಸಗಿದ್ದಾರೆ ಎಂದು ಪ್ರಕರಣ ದಾಖಲಾಗಿದೆ. ತೀಸ್ ಹಜಾರಿ ಕೋರ್ಟ್​ನಲ್ಲಿರುವ ಚೇಂಬರ್​ನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು 21 ವರ್ಷದ ಯುವತಿ ದೂರು ನೀಡಿದ್ದಾರೆ. ಜುಲೈ 30ರಂದು ಯುವತಿಯ ಸಂಬಂಧಿ ಸಬ್ಜಿ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆ ದೂರಿನಲ್ಲಿ ಆಕೆ ಕೆಲಸ ಹುಡುಕುತ್ತಿದ್ದಳು, ಆ ಸಂದರ್ಭದಲ್ಲಿ ವಕೀಲರು ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು, ಆಕೆಯ ಶೈಕ್ಷಣಿಕ ಅರ್ಹತೆಯನ್ನು ತೋರಿಸಲು ಅವರ ಚೇಂಬರ್​ಗೆ ಬರುವಂತೆ ತಿಳಿಸಿದ್ದರು.

ಮುಂದಿನ 8-10 ದಿನಗಳೊಳಗಾಗಿ ಆಕೆಗೆ ಕೆಲಸ ಕೊಡಿಸುವುದಾಗಿ ವಕೀಲರು ಯುವತಿಗೆ ತಿಳಿಸಿದ್ದರು, 10 ದಿನಗಳ ನಂತರ ಆಕೆ ವಕೀಲರನ್ನು ಸಂಪರ್ಕಿಸಿದಾಗ ಪ್ರತಿಯೊಬ್ಬರಿಗೂ ಜೀವನದಲ್ಲಿ ಒಳ್ಳೆಯ ಸ್ನೇಹಿತರು ಬೇಕು ಎಂದು ವಕೀಲರು ಹೇಳಿದ್ದರು. ಜುಲೈ 27ರಂದು ಮತ್ತೆ ಯುವತಿಯನ್ನು ವಕೀಲರ ಚೇಂಬರ್‌ಗೆ ಕರೆಸಲಾಗಿತ್ತು. ಕೆಲ ಹೊತ್ತು ಮಾತನಾಡಿದ ಬಳಿಕ ವಕೀಲರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಮತ್ತಷ್ಟು ಓದಿ: ನಂಬಿದವರು ಅಸಹಾಯಕ ಸ್ಥಿತಿಯಲ್ಲಿದ್ದಾಗಲೇ ಆ ಇಬ್ಬರು ವಿವಾಹಿತರ ಮಧ್ಯೆ ಪ್ರೇಮಾಂಕುರ! ಆಮೇಲೇನಾಯ್ತು?

ಯುವತಿ ಕೂಗಲು ಯತ್ನಿಸಿದಾಗ ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಬಳಿಕ ಆಕೆಗೆ 1,500 ಹಣ ನೀಡಿ ಅಲ್ಲಿಂದ ಹೋಗುವಂತೆ ಹೇಳಿದ್ದರು.

ಮನೆಗೆ ಬಂದ ಬಳಿಕ ಯುವತಿ ನಡೆದಿರುವ ಎಲ್ಲಾ ವಿಚಾರವನ್ನು ತಿಳಿಸಿದ್ದಾಳೆ, ಕೂಡಲೇ ಅವರು ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:18 pm, Fri, 9 August 24

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!