AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಕೋರ್ಟ್​ ಆವರಣದಲ್ಲಿ ವಕೀಲರಿಂದ ಯುವತಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲು

ಕೆಲಸ ಕೊಡಿಸುತ್ತೇನೆ ಅಂದು ಕೋರ್ಟ್​ಗೆ ಕರೆಸಿಕೊಂಡು ವಕೀಲರೊಬ್ಬರು 21 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.ಯುವತಿ ಕೂಗಲು ಯತ್ನಿಸಿದಾಗ ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಬಳಿಕ ಆಕೆಗೆ 1,500 ಹಣ ನೀಡಿ ಅಲ್ಲಿಂದ ಹೋಗುವಂತೆ ಹೇಳಿದ್ದರು.

ದೆಹಲಿ ಕೋರ್ಟ್​ ಆವರಣದಲ್ಲಿ ವಕೀಲರಿಂದ ಯುವತಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲು
ನ್ಯಾಯಾಲಯImage Credit source: India Today
ನಯನಾ ರಾಜೀವ್
|

Updated on:Aug 09, 2024 | 3:12 PM

Share

ಕೆಲಸ ಕೊಡಿಸುವ ನೆಪದಲ್ಲಿ ಯುವತಿಯನ್ನು ಕರೆಸಿಕೊಂಡು ಕೋರ್ಟ್​ ಆವರಣದಲ್ಲೇ ವಕೀಲರೊಬ್ಬರು ಅತ್ಯಾಚಾರವೆಸಗಿದ್ದಾರೆ ಎಂದು ಪ್ರಕರಣ ದಾಖಲಾಗಿದೆ. ತೀಸ್ ಹಜಾರಿ ಕೋರ್ಟ್​ನಲ್ಲಿರುವ ಚೇಂಬರ್​ನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು 21 ವರ್ಷದ ಯುವತಿ ದೂರು ನೀಡಿದ್ದಾರೆ. ಜುಲೈ 30ರಂದು ಯುವತಿಯ ಸಂಬಂಧಿ ಸಬ್ಜಿ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆ ದೂರಿನಲ್ಲಿ ಆಕೆ ಕೆಲಸ ಹುಡುಕುತ್ತಿದ್ದಳು, ಆ ಸಂದರ್ಭದಲ್ಲಿ ವಕೀಲರು ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು, ಆಕೆಯ ಶೈಕ್ಷಣಿಕ ಅರ್ಹತೆಯನ್ನು ತೋರಿಸಲು ಅವರ ಚೇಂಬರ್​ಗೆ ಬರುವಂತೆ ತಿಳಿಸಿದ್ದರು.

ಮುಂದಿನ 8-10 ದಿನಗಳೊಳಗಾಗಿ ಆಕೆಗೆ ಕೆಲಸ ಕೊಡಿಸುವುದಾಗಿ ವಕೀಲರು ಯುವತಿಗೆ ತಿಳಿಸಿದ್ದರು, 10 ದಿನಗಳ ನಂತರ ಆಕೆ ವಕೀಲರನ್ನು ಸಂಪರ್ಕಿಸಿದಾಗ ಪ್ರತಿಯೊಬ್ಬರಿಗೂ ಜೀವನದಲ್ಲಿ ಒಳ್ಳೆಯ ಸ್ನೇಹಿತರು ಬೇಕು ಎಂದು ವಕೀಲರು ಹೇಳಿದ್ದರು. ಜುಲೈ 27ರಂದು ಮತ್ತೆ ಯುವತಿಯನ್ನು ವಕೀಲರ ಚೇಂಬರ್‌ಗೆ ಕರೆಸಲಾಗಿತ್ತು. ಕೆಲ ಹೊತ್ತು ಮಾತನಾಡಿದ ಬಳಿಕ ವಕೀಲರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಮತ್ತಷ್ಟು ಓದಿ: ನಂಬಿದವರು ಅಸಹಾಯಕ ಸ್ಥಿತಿಯಲ್ಲಿದ್ದಾಗಲೇ ಆ ಇಬ್ಬರು ವಿವಾಹಿತರ ಮಧ್ಯೆ ಪ್ರೇಮಾಂಕುರ! ಆಮೇಲೇನಾಯ್ತು?

ಯುವತಿ ಕೂಗಲು ಯತ್ನಿಸಿದಾಗ ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಬಳಿಕ ಆಕೆಗೆ 1,500 ಹಣ ನೀಡಿ ಅಲ್ಲಿಂದ ಹೋಗುವಂತೆ ಹೇಳಿದ್ದರು.

ಮನೆಗೆ ಬಂದ ಬಳಿಕ ಯುವತಿ ನಡೆದಿರುವ ಎಲ್ಲಾ ವಿಚಾರವನ್ನು ತಿಳಿಸಿದ್ದಾಳೆ, ಕೂಡಲೇ ಅವರು ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:18 pm, Fri, 9 August 24

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್