AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಸಹ ಪ್ರಾಧ್ಯಾಪಕ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಧ್ಯಪ್ರದೇಶದ ಕಾಲೇಜ್​ವೊಂದರಲ್ಲಿ ಪ್ರದ್ಯಾಪಕ ಮತ್ತು ಪ್ರಾಂಶುಪಾಲರು ಹೊಡೆದಾಡಿಕೊಂಡ ಘಟನೆ ನಡೆದಿದೆ. ಇದರ ದೃಶ್ಯಗಳು  ಸಿಸಿಟಿವಿ (CCTV)ಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಕಾಲೇಜು ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಸಹ ಪ್ರಾಧ್ಯಾಪಕ : ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸುತ್ತಿರುವ ಪ್ರದ್ಯಾಪಕ
TV9 Web
| Edited By: |

Updated on:Jan 19, 2022 | 3:29 PM

Share

ಮಧ್ಯಪ್ರದೇಶದ ಕಾಲೇಜ್​ವೊಂದರಲ್ಲಿ ಪ್ರಾಧ್ಯಾಪಕ  ಮತ್ತು ಪ್ರಾಂಶುಪಾಲರು ಹೊಡೆದಾಡಿಕೊಂಡ ಘಟನೆ ನಡೆದಿದೆ. ಇದರ ದೃಶ್ಯಗಳು  ಸಿಸಿಟಿವಿ (CCTV)ಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮಧ್ಯಪ್ರದೇಶದ ಉಜ್ಜಯನಿಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಬ್ರಹ್ಮದೀಪ ಅಲುನೆ ಎನ್ನುವ ಸಹಪ್ರಾಧ್ಯಾಪಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೇಖರ್ ​ಮೆಡ್ಮಾವರ್​ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಉಜ್ಜಯಿನಿಯ ಘಟ್ಟಿ ಪ್ರದೇಶದ ದಿವಂಗತ ನಾಗುಲಾಲ್ ಮಾಳವೀಯ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. 

ಎನ್​ಡಿಟಿವಿ ವರದಿಯ ಪ್ರಕಾರ, ಜನವರಿ 15 ರಂದು ಘಟನೆಯ ಸಿಸಿಟಿವಿ ವಿಡಿಯೋ ವೈರಲ್​ ಆಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಾಧ್ಯಾಪಕ ಬ್ರಹ್ಮದೀಪ ಅಲುನೆ  ಮೇಲೆ ಹಲ್ಲೆ ಆರೋಪವನ್ನು ಹೊರಿಸಿ ಪ್ರಕರಣ ದಾಖಲಿಸಲಾಗಿದೆ. ಪ್ರಾಂಶುಪಾಲರ ಹೇಳಿಕೆ ಪ್ರಕಾರ ಬ್ರಹ್ಮದೀಪ ಅಲುನೆ  ಅವರು ಭೂಪಾಲ್​ನಿಂದ  ಉಜ್ಜಯನಿ ಕಾಲೇಜಿಗೆ ವರ್ಗಾವಣೆಯಾಗಿದ್ದು ಪ್ರತಿದಿನ 5 ಕಿಮೀ ನಡೆದುಕೊಂಡು ಕಾಲೇಜಿಗೆ ಬರುತ್ತಾರೆ. ಹೀಗೆ ಒಂದು ದಿನ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಕಾಲೇಜಿನಲ್ಲಿ ವ್ಯಾಕ್ಸಿನೇಷನ್​ ಸೆಂಟರ್​ ತೆರೆಯುವುದರ ಕುರಿತು ಮಾತನಾಡಲು ಕ್ಯಾಬಿನ್​ಗೆ ಕರೆಸಿದಾಗ ಕೋಪಗೊಂಡು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ ಪ್ರಾಧ್ಯಾಪಕ ಬ್ರಹ್ಮದೀಪ ಅಲುನೆ ಪ್ರಾಂಶುಪಾಲರು ಸಿಬ್ಬಂದಿಗಳ ಜತೆ ಅನುಚಿತವಾಗಿ ವರ್ತಿಸುತ್ತಾರೆ. ಈಗಾಗಲೇ ಇವರ ವರ್ತನೆಯಿಂದ ಬೇಸತ್ತು ಇಬ್ಬರು ಸಿಬ್ಬಂದಿ ಸ್ವಯಂ ನಿವೃತ್ತಿ ಪಡೆದುಕೊಂಡು ಹೋಗಿದ್ದಾರೆ. ಆಫೀಸ್​ಗೆ ಕರೆಸಿದ ವೇಳೆ ನನ್ನ ಬಳಿಯೂ ಅನುಚಿತವಾದ ಮಾತುಗಳನ್ನು ಆಡಿದ್ದರು. ಹೀಗಾಗಿ ಹಲ್ಲೆ ನಡೆಯಿತು ಎಂದಿದ್ದಾರೆ.

ಸಿಸಿಟಿವಿ ವಿಡಿಯೋದಲ್ಲಿ ಪ್ರಾಧ್ಯಾಪಕ ಮತ್ತು ಪ್ರಾಂಶುಪಾಲರು ಕುಳಿತು ಮಾತನಾಡುತ್ತಿರುವುದನ್ನು ಕಾಣಬಹುದು ಈ ವೇಳೆ ಒಂದೇ ಸಲಕ್ಕೆ ಎದ್ದು ನಿಂತ ಪ್ರಾಧ್ಯಾಪಕ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಹೊರಗಡೆ ಇದ್ದ ಜನ ಬಂದು ಗಲಾಟೆಯನ್ನು ತಪ್ಪಿಸಿದ್ದಾರೆ. ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು ಸಹಾಯಕ ಪ್ರಾಧ್ಯಾಪಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಹೋಮ್​​ವರ್ಕ್ ಮಾಡಿಸಲು ಮುಂಜಾನೆ 3-4 ಗಂಟೆವರೆಗೆ ಮಕ್ಕಳೊಂದಿಗೆ ಕುಳಿತುಕೊಳ್ಳಬೇಕಾಗಿ ಬರುತ್ತದೆ: ಪ್ರಿಯಾಂಕಾ ಗಾಂಧಿ

Published On - 2:56 pm, Wed, 19 January 22

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ