AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಸಹ ಪ್ರಾಧ್ಯಾಪಕ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಧ್ಯಪ್ರದೇಶದ ಕಾಲೇಜ್​ವೊಂದರಲ್ಲಿ ಪ್ರದ್ಯಾಪಕ ಮತ್ತು ಪ್ರಾಂಶುಪಾಲರು ಹೊಡೆದಾಡಿಕೊಂಡ ಘಟನೆ ನಡೆದಿದೆ. ಇದರ ದೃಶ್ಯಗಳು  ಸಿಸಿಟಿವಿ (CCTV)ಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಕಾಲೇಜು ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಸಹ ಪ್ರಾಧ್ಯಾಪಕ : ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸುತ್ತಿರುವ ಪ್ರದ್ಯಾಪಕ
TV9 Web
| Edited By: |

Updated on:Jan 19, 2022 | 3:29 PM

Share

ಮಧ್ಯಪ್ರದೇಶದ ಕಾಲೇಜ್​ವೊಂದರಲ್ಲಿ ಪ್ರಾಧ್ಯಾಪಕ  ಮತ್ತು ಪ್ರಾಂಶುಪಾಲರು ಹೊಡೆದಾಡಿಕೊಂಡ ಘಟನೆ ನಡೆದಿದೆ. ಇದರ ದೃಶ್ಯಗಳು  ಸಿಸಿಟಿವಿ (CCTV)ಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮಧ್ಯಪ್ರದೇಶದ ಉಜ್ಜಯನಿಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಬ್ರಹ್ಮದೀಪ ಅಲುನೆ ಎನ್ನುವ ಸಹಪ್ರಾಧ್ಯಾಪಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೇಖರ್ ​ಮೆಡ್ಮಾವರ್​ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಉಜ್ಜಯಿನಿಯ ಘಟ್ಟಿ ಪ್ರದೇಶದ ದಿವಂಗತ ನಾಗುಲಾಲ್ ಮಾಳವೀಯ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. 

ಎನ್​ಡಿಟಿವಿ ವರದಿಯ ಪ್ರಕಾರ, ಜನವರಿ 15 ರಂದು ಘಟನೆಯ ಸಿಸಿಟಿವಿ ವಿಡಿಯೋ ವೈರಲ್​ ಆಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಾಧ್ಯಾಪಕ ಬ್ರಹ್ಮದೀಪ ಅಲುನೆ  ಮೇಲೆ ಹಲ್ಲೆ ಆರೋಪವನ್ನು ಹೊರಿಸಿ ಪ್ರಕರಣ ದಾಖಲಿಸಲಾಗಿದೆ. ಪ್ರಾಂಶುಪಾಲರ ಹೇಳಿಕೆ ಪ್ರಕಾರ ಬ್ರಹ್ಮದೀಪ ಅಲುನೆ  ಅವರು ಭೂಪಾಲ್​ನಿಂದ  ಉಜ್ಜಯನಿ ಕಾಲೇಜಿಗೆ ವರ್ಗಾವಣೆಯಾಗಿದ್ದು ಪ್ರತಿದಿನ 5 ಕಿಮೀ ನಡೆದುಕೊಂಡು ಕಾಲೇಜಿಗೆ ಬರುತ್ತಾರೆ. ಹೀಗೆ ಒಂದು ದಿನ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಕಾಲೇಜಿನಲ್ಲಿ ವ್ಯಾಕ್ಸಿನೇಷನ್​ ಸೆಂಟರ್​ ತೆರೆಯುವುದರ ಕುರಿತು ಮಾತನಾಡಲು ಕ್ಯಾಬಿನ್​ಗೆ ಕರೆಸಿದಾಗ ಕೋಪಗೊಂಡು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ ಪ್ರಾಧ್ಯಾಪಕ ಬ್ರಹ್ಮದೀಪ ಅಲುನೆ ಪ್ರಾಂಶುಪಾಲರು ಸಿಬ್ಬಂದಿಗಳ ಜತೆ ಅನುಚಿತವಾಗಿ ವರ್ತಿಸುತ್ತಾರೆ. ಈಗಾಗಲೇ ಇವರ ವರ್ತನೆಯಿಂದ ಬೇಸತ್ತು ಇಬ್ಬರು ಸಿಬ್ಬಂದಿ ಸ್ವಯಂ ನಿವೃತ್ತಿ ಪಡೆದುಕೊಂಡು ಹೋಗಿದ್ದಾರೆ. ಆಫೀಸ್​ಗೆ ಕರೆಸಿದ ವೇಳೆ ನನ್ನ ಬಳಿಯೂ ಅನುಚಿತವಾದ ಮಾತುಗಳನ್ನು ಆಡಿದ್ದರು. ಹೀಗಾಗಿ ಹಲ್ಲೆ ನಡೆಯಿತು ಎಂದಿದ್ದಾರೆ.

ಸಿಸಿಟಿವಿ ವಿಡಿಯೋದಲ್ಲಿ ಪ್ರಾಧ್ಯಾಪಕ ಮತ್ತು ಪ್ರಾಂಶುಪಾಲರು ಕುಳಿತು ಮಾತನಾಡುತ್ತಿರುವುದನ್ನು ಕಾಣಬಹುದು ಈ ವೇಳೆ ಒಂದೇ ಸಲಕ್ಕೆ ಎದ್ದು ನಿಂತ ಪ್ರಾಧ್ಯಾಪಕ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಹೊರಗಡೆ ಇದ್ದ ಜನ ಬಂದು ಗಲಾಟೆಯನ್ನು ತಪ್ಪಿಸಿದ್ದಾರೆ. ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು ಸಹಾಯಕ ಪ್ರಾಧ್ಯಾಪಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಹೋಮ್​​ವರ್ಕ್ ಮಾಡಿಸಲು ಮುಂಜಾನೆ 3-4 ಗಂಟೆವರೆಗೆ ಮಕ್ಕಳೊಂದಿಗೆ ಕುಳಿತುಕೊಳ್ಳಬೇಕಾಗಿ ಬರುತ್ತದೆ: ಪ್ರಿಯಾಂಕಾ ಗಾಂಧಿ

Published On - 2:56 pm, Wed, 19 January 22

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!