AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಸಹ ಪ್ರಾಧ್ಯಾಪಕ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಧ್ಯಪ್ರದೇಶದ ಕಾಲೇಜ್​ವೊಂದರಲ್ಲಿ ಪ್ರದ್ಯಾಪಕ ಮತ್ತು ಪ್ರಾಂಶುಪಾಲರು ಹೊಡೆದಾಡಿಕೊಂಡ ಘಟನೆ ನಡೆದಿದೆ. ಇದರ ದೃಶ್ಯಗಳು  ಸಿಸಿಟಿವಿ (CCTV)ಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಕಾಲೇಜು ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಸಹ ಪ್ರಾಧ್ಯಾಪಕ : ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸುತ್ತಿರುವ ಪ್ರದ್ಯಾಪಕ
TV9 Web
| Updated By: Pavitra Bhat Jigalemane|

Updated on:Jan 19, 2022 | 3:29 PM

Share

ಮಧ್ಯಪ್ರದೇಶದ ಕಾಲೇಜ್​ವೊಂದರಲ್ಲಿ ಪ್ರಾಧ್ಯಾಪಕ  ಮತ್ತು ಪ್ರಾಂಶುಪಾಲರು ಹೊಡೆದಾಡಿಕೊಂಡ ಘಟನೆ ನಡೆದಿದೆ. ಇದರ ದೃಶ್ಯಗಳು  ಸಿಸಿಟಿವಿ (CCTV)ಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮಧ್ಯಪ್ರದೇಶದ ಉಜ್ಜಯನಿಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಬ್ರಹ್ಮದೀಪ ಅಲುನೆ ಎನ್ನುವ ಸಹಪ್ರಾಧ್ಯಾಪಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೇಖರ್ ​ಮೆಡ್ಮಾವರ್​ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಉಜ್ಜಯಿನಿಯ ಘಟ್ಟಿ ಪ್ರದೇಶದ ದಿವಂಗತ ನಾಗುಲಾಲ್ ಮಾಳವೀಯ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. 

ಎನ್​ಡಿಟಿವಿ ವರದಿಯ ಪ್ರಕಾರ, ಜನವರಿ 15 ರಂದು ಘಟನೆಯ ಸಿಸಿಟಿವಿ ವಿಡಿಯೋ ವೈರಲ್​ ಆಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಾಧ್ಯಾಪಕ ಬ್ರಹ್ಮದೀಪ ಅಲುನೆ  ಮೇಲೆ ಹಲ್ಲೆ ಆರೋಪವನ್ನು ಹೊರಿಸಿ ಪ್ರಕರಣ ದಾಖಲಿಸಲಾಗಿದೆ. ಪ್ರಾಂಶುಪಾಲರ ಹೇಳಿಕೆ ಪ್ರಕಾರ ಬ್ರಹ್ಮದೀಪ ಅಲುನೆ  ಅವರು ಭೂಪಾಲ್​ನಿಂದ  ಉಜ್ಜಯನಿ ಕಾಲೇಜಿಗೆ ವರ್ಗಾವಣೆಯಾಗಿದ್ದು ಪ್ರತಿದಿನ 5 ಕಿಮೀ ನಡೆದುಕೊಂಡು ಕಾಲೇಜಿಗೆ ಬರುತ್ತಾರೆ. ಹೀಗೆ ಒಂದು ದಿನ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಕಾಲೇಜಿನಲ್ಲಿ ವ್ಯಾಕ್ಸಿನೇಷನ್​ ಸೆಂಟರ್​ ತೆರೆಯುವುದರ ಕುರಿತು ಮಾತನಾಡಲು ಕ್ಯಾಬಿನ್​ಗೆ ಕರೆಸಿದಾಗ ಕೋಪಗೊಂಡು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ ಪ್ರಾಧ್ಯಾಪಕ ಬ್ರಹ್ಮದೀಪ ಅಲುನೆ ಪ್ರಾಂಶುಪಾಲರು ಸಿಬ್ಬಂದಿಗಳ ಜತೆ ಅನುಚಿತವಾಗಿ ವರ್ತಿಸುತ್ತಾರೆ. ಈಗಾಗಲೇ ಇವರ ವರ್ತನೆಯಿಂದ ಬೇಸತ್ತು ಇಬ್ಬರು ಸಿಬ್ಬಂದಿ ಸ್ವಯಂ ನಿವೃತ್ತಿ ಪಡೆದುಕೊಂಡು ಹೋಗಿದ್ದಾರೆ. ಆಫೀಸ್​ಗೆ ಕರೆಸಿದ ವೇಳೆ ನನ್ನ ಬಳಿಯೂ ಅನುಚಿತವಾದ ಮಾತುಗಳನ್ನು ಆಡಿದ್ದರು. ಹೀಗಾಗಿ ಹಲ್ಲೆ ನಡೆಯಿತು ಎಂದಿದ್ದಾರೆ.

ಸಿಸಿಟಿವಿ ವಿಡಿಯೋದಲ್ಲಿ ಪ್ರಾಧ್ಯಾಪಕ ಮತ್ತು ಪ್ರಾಂಶುಪಾಲರು ಕುಳಿತು ಮಾತನಾಡುತ್ತಿರುವುದನ್ನು ಕಾಣಬಹುದು ಈ ವೇಳೆ ಒಂದೇ ಸಲಕ್ಕೆ ಎದ್ದು ನಿಂತ ಪ್ರಾಧ್ಯಾಪಕ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಹೊರಗಡೆ ಇದ್ದ ಜನ ಬಂದು ಗಲಾಟೆಯನ್ನು ತಪ್ಪಿಸಿದ್ದಾರೆ. ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು ಸಹಾಯಕ ಪ್ರಾಧ್ಯಾಪಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಹೋಮ್​​ವರ್ಕ್ ಮಾಡಿಸಲು ಮುಂಜಾನೆ 3-4 ಗಂಟೆವರೆಗೆ ಮಕ್ಕಳೊಂದಿಗೆ ಕುಳಿತುಕೊಳ್ಳಬೇಕಾಗಿ ಬರುತ್ತದೆ: ಪ್ರಿಯಾಂಕಾ ಗಾಂಧಿ

Published On - 2:56 pm, Wed, 19 January 22

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?