AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಸಹ ಪ್ರಾಧ್ಯಾಪಕ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಧ್ಯಪ್ರದೇಶದ ಕಾಲೇಜ್​ವೊಂದರಲ್ಲಿ ಪ್ರದ್ಯಾಪಕ ಮತ್ತು ಪ್ರಾಂಶುಪಾಲರು ಹೊಡೆದಾಡಿಕೊಂಡ ಘಟನೆ ನಡೆದಿದೆ. ಇದರ ದೃಶ್ಯಗಳು  ಸಿಸಿಟಿವಿ (CCTV)ಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಕಾಲೇಜು ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಸಹ ಪ್ರಾಧ್ಯಾಪಕ : ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸುತ್ತಿರುವ ಪ್ರದ್ಯಾಪಕ
TV9 Web
| Edited By: |

Updated on:Jan 19, 2022 | 3:29 PM

Share

ಮಧ್ಯಪ್ರದೇಶದ ಕಾಲೇಜ್​ವೊಂದರಲ್ಲಿ ಪ್ರಾಧ್ಯಾಪಕ  ಮತ್ತು ಪ್ರಾಂಶುಪಾಲರು ಹೊಡೆದಾಡಿಕೊಂಡ ಘಟನೆ ನಡೆದಿದೆ. ಇದರ ದೃಶ್ಯಗಳು  ಸಿಸಿಟಿವಿ (CCTV)ಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮಧ್ಯಪ್ರದೇಶದ ಉಜ್ಜಯನಿಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಬ್ರಹ್ಮದೀಪ ಅಲುನೆ ಎನ್ನುವ ಸಹಪ್ರಾಧ್ಯಾಪಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೇಖರ್ ​ಮೆಡ್ಮಾವರ್​ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಉಜ್ಜಯಿನಿಯ ಘಟ್ಟಿ ಪ್ರದೇಶದ ದಿವಂಗತ ನಾಗುಲಾಲ್ ಮಾಳವೀಯ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. 

ಎನ್​ಡಿಟಿವಿ ವರದಿಯ ಪ್ರಕಾರ, ಜನವರಿ 15 ರಂದು ಘಟನೆಯ ಸಿಸಿಟಿವಿ ವಿಡಿಯೋ ವೈರಲ್​ ಆಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಾಧ್ಯಾಪಕ ಬ್ರಹ್ಮದೀಪ ಅಲುನೆ  ಮೇಲೆ ಹಲ್ಲೆ ಆರೋಪವನ್ನು ಹೊರಿಸಿ ಪ್ರಕರಣ ದಾಖಲಿಸಲಾಗಿದೆ. ಪ್ರಾಂಶುಪಾಲರ ಹೇಳಿಕೆ ಪ್ರಕಾರ ಬ್ರಹ್ಮದೀಪ ಅಲುನೆ  ಅವರು ಭೂಪಾಲ್​ನಿಂದ  ಉಜ್ಜಯನಿ ಕಾಲೇಜಿಗೆ ವರ್ಗಾವಣೆಯಾಗಿದ್ದು ಪ್ರತಿದಿನ 5 ಕಿಮೀ ನಡೆದುಕೊಂಡು ಕಾಲೇಜಿಗೆ ಬರುತ್ತಾರೆ. ಹೀಗೆ ಒಂದು ದಿನ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಕಾಲೇಜಿನಲ್ಲಿ ವ್ಯಾಕ್ಸಿನೇಷನ್​ ಸೆಂಟರ್​ ತೆರೆಯುವುದರ ಕುರಿತು ಮಾತನಾಡಲು ಕ್ಯಾಬಿನ್​ಗೆ ಕರೆಸಿದಾಗ ಕೋಪಗೊಂಡು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ ಪ್ರಾಧ್ಯಾಪಕ ಬ್ರಹ್ಮದೀಪ ಅಲುನೆ ಪ್ರಾಂಶುಪಾಲರು ಸಿಬ್ಬಂದಿಗಳ ಜತೆ ಅನುಚಿತವಾಗಿ ವರ್ತಿಸುತ್ತಾರೆ. ಈಗಾಗಲೇ ಇವರ ವರ್ತನೆಯಿಂದ ಬೇಸತ್ತು ಇಬ್ಬರು ಸಿಬ್ಬಂದಿ ಸ್ವಯಂ ನಿವೃತ್ತಿ ಪಡೆದುಕೊಂಡು ಹೋಗಿದ್ದಾರೆ. ಆಫೀಸ್​ಗೆ ಕರೆಸಿದ ವೇಳೆ ನನ್ನ ಬಳಿಯೂ ಅನುಚಿತವಾದ ಮಾತುಗಳನ್ನು ಆಡಿದ್ದರು. ಹೀಗಾಗಿ ಹಲ್ಲೆ ನಡೆಯಿತು ಎಂದಿದ್ದಾರೆ.

ಸಿಸಿಟಿವಿ ವಿಡಿಯೋದಲ್ಲಿ ಪ್ರಾಧ್ಯಾಪಕ ಮತ್ತು ಪ್ರಾಂಶುಪಾಲರು ಕುಳಿತು ಮಾತನಾಡುತ್ತಿರುವುದನ್ನು ಕಾಣಬಹುದು ಈ ವೇಳೆ ಒಂದೇ ಸಲಕ್ಕೆ ಎದ್ದು ನಿಂತ ಪ್ರಾಧ್ಯಾಪಕ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಹೊರಗಡೆ ಇದ್ದ ಜನ ಬಂದು ಗಲಾಟೆಯನ್ನು ತಪ್ಪಿಸಿದ್ದಾರೆ. ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು ಸಹಾಯಕ ಪ್ರಾಧ್ಯಾಪಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಹೋಮ್​​ವರ್ಕ್ ಮಾಡಿಸಲು ಮುಂಜಾನೆ 3-4 ಗಂಟೆವರೆಗೆ ಮಕ್ಕಳೊಂದಿಗೆ ಕುಳಿತುಕೊಳ್ಳಬೇಕಾಗಿ ಬರುತ್ತದೆ: ಪ್ರಿಯಾಂಕಾ ಗಾಂಧಿ

Published On - 2:56 pm, Wed, 19 January 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ