AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ, ಶಾ ವಿರುದ್ಧ ಅವಹೇಳನಕಾರಿ ಫೋಸ್ಟ್.. ಫೇಸ್ಬುಕ್ ಬಳಕೆದಾರನ ವಿರುದ್ಧ ಎಫ್ಐಆರ್

ಫೇಸ್‌ಬುಕ್ ಬಳಕೆದಾರನಾಗಿರುವ ಕಪಿಲ್ ಕುಮಾರ್ ಅಲಿಯಾಸ್ ಕಪಿಲ್ ಪರ್ಮಾರ್ ಎಂಬ ಪ್ರೊಫೈಲ್ ಹೆಸರಿನ ಫೇಸ್ಬುಕ್ ಬಳಕೆದಾರನ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಮೋದಿ, ಶಾ ವಿರುದ್ಧ ಅವಹೇಳನಕಾರಿ ಫೋಸ್ಟ್.. ಫೇಸ್ಬುಕ್ ಬಳಕೆದಾರನ ವಿರುದ್ಧ ಎಫ್ಐಆರ್
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: May 02, 2021 | 10:03 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಉಪಮುಖ್ಯಮಂತ್ರಿ ನಿತಿನ್ ಪಟೇಲ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕಾಗಿ ಪೊಲೀಸರು ಫೇಸ್‌ಬುಕ್ ಬಳಕೆದಾರನೊಬ್ಬನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಫೇಸ್‌ಬುಕ್ ಬಳಕೆದಾರನಾಗಿರುವ ಕಪಿಲ್ ಕುಮಾರ್ ಅಲಿಯಾಸ್ ಕಪಿಲ್ ಪರ್ಮಾರ್ ಎಂಬ ಹೆಸರಿನ ಪ್ರೊಫೈಲ್​ನ  ಫೇಸ್ಬುಕ್ ಬಳಕೆದಾರನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್ 500 ರ ಅಡಿಯಲ್ಲಿ ಮಾನನಷ್ಟ, 505 (1 ಬಿ) ಸಾರ್ವಜನಿಕರಿಗೆ ಪ್ರಚೋದನೆ ನೀಡುವಂತಹ ಉದ್ದೇಶದಿಂದ ಹೇಳಿಕೆ ಪ್ರಕಟಿಸಲು ಮತ್ತು 506 ಕ್ರಿಮಿನಲ್ ಬೆದರಿಕೆಗಾಗಿ ಕಪಿಲ್ ಕುಮಾರ್ ವಿರುದ್ಧ ಕೇಸ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಪೊಲೀಸ್ ಉಪ ಆಯುಕ್ತ (ಡಿಸಿಪಿ) ಅಹಮದಾಬಾದ್ ಸೈಬರ್ ಕ್ರೈಮ್ ಸೆಲ್‌ನ ಸೂಚನೆಯಂತೆ, ಏಪ್ರಿಲ್ 29 ರಂದು ಮಾನಿಟರಿಂಗ್ ಸೆಲ್ ತಂಡವು ಸಾಮಾಜಿಕ ಮಾಧ್ಯಮಗಳಲ್ಲಿನ ಚಟುವಟಿಕೆಗಳ ಬಗ್ಗೆ ನಿಗಾ ಇಟ್ಟಿದ್ದು ಫೇಸ್‌ಬುಕ್ ಬಳಕೆದಾರ ಕಪಿಲ್ ಕುಮಾರ್ ತನ್ನ ಖಾತೆಯಲ್ಲಿ ಅನೇಕ ಪೋಸ್ಟ್‌ಗಳನ್ನು ಮಾಡಿ ಹರಿಬಿಟ್ಟಿದ್ದಾನೆ. ಹಾಗೂ ಸಾರ್ವಜನಿಕರಲ್ಲಿ ಎಚ್ಚರಿಕೆ ಉಂಟುಮಾಡುವ ಸಲುವಾಗಿ ಪ್ರಧಾನಿ ಮೋದಿ, ಗೃಹ ಸಚಿವ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ವಿರುದ್ಧ ಬೆದರಿಕೆ ಹಾಕುವ ಭಾಷೆಯೊಂದಿಗೆ ಅವಹೇಳನಕಾರಿ ಸಂದೇಶವನ್ನು ಫೋಸ್ಟ್ ಮಾಡಿದ್ದಾನೆ”ಎಂದು ಎಫ್‌ಐಆರ್‌ನಲ್ಲಿ ಎಲ್‌ಆರ್‌ಡಿ ಜವಾನ್ ಹರೀಶ್ ಚಂದ್ರ ಸಿಂಗ್ ತಿಳಿಸಿದ್ದಾರೆ.

ಇನ್ನು ಕಪಿಲ್ ಕುಮಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪರಿಚಯಿಸಿದ ವಿವಿಧ ಯೋಜನೆಗಳು ಮತ್ತು ಅವರ ಕಾರ್ಯ ವೈಖರಿಯನ್ನು ಪ್ರಶಂಸಿಸಿದ್ದು ಇಂದಿನ ಪ್ರಧಾನಿ ನರೇಂದ್ರ ಮೋದಿಯವರ ಜಿಎಸ್ಟಿ, ನೋಟ್ ಬ್ಯಾನ್ ಮತ್ತು ಕೊವಿಡ್ -19 ಲಾಕ್‌ಡೌನ್ ಬಗ್ಗೆ ಟೀಕಿಸಿದ್ದಾನೆ. ಮತ್ತೊಂದು ಪೋಸ್ಟ್ನಲ್ಲಿ ನಾಲ್ಕು ನಾಯಕರ ವಿರುದ್ಧ “ಅವಹೇಳನಕಾರಿ ಪದಗಳನ್ನು” ಬರೆದುಕೊಂಡಿದ್ದಾನೆ. ಸದ್ಯ ಈ ಪ್ರಕರಣದ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಅಹಮದಾಬಾದ್ ಸೈಬರ್ ಕ್ರೈಮ್ ಸೆಲ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Amit Shah Interview: ಪ್ರಚಂಡ ಬಹುಮತದಿಂದ ಸೋಲುವ ಮಮತಾ ದೀದಿ ಮೇ 2ಕ್ಕೆ ರಾಜೀನಾಮೆ ಕೊಡ್ತಾರೆ; ಅಮಿತ್ ಶಾ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!