AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ, ಏಕನಾಥ್ ಶಿಂಧೆ ಮತ್ತು ನಾರಾಯಣ್ ರಾಣೆಯನ್ನು ಅನುಕರಿಸಿದ 7 ಶಿವಸೇನಾ ನಾಯಕರ ವಿರುದ್ಧ ಕೇಸು ದಾಖಲು

ಥಾಣೆಯಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಿಎಂ ಏಕನಾಥ್ ಶಿಂಧೆ ಮತ್ತು ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಅನುಕರಿಸಿದ ಶಿವಸೇನಾದ ನಾಯಕರ ವಿರುದ್ಧ ಕೇಸು ದಾಖಲು

ಮೋದಿ, ಏಕನಾಥ್ ಶಿಂಧೆ ಮತ್ತು ನಾರಾಯಣ್ ರಾಣೆಯನ್ನು ಅನುಕರಿಸಿದ 7 ಶಿವಸೇನಾ ನಾಯಕರ ವಿರುದ್ಧ ಕೇಸು ದಾಖಲು
ಶಿವಸೇನಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Oct 12, 2022 | 1:27 PM

Share

ಮುಂಬೈ: ಅಕ್ಟೋಬರ್ 9 ರಂದು ಥಾಣೆಯಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi), ಸಿಎಂ ಏಕನಾಥ್ ಶಿಂಧೆ (Eknath Shinde) ಮತ್ತು ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಅನುಕರಿಸಿದ ಶಿವಸೇನಾದ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣದ 7 ನಾಯಕರ ವಿರುದ್ಧ ಥಾಣೆಯ ನೌಪಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಥಾಣೆ ಪೊಲೀಸರು ಹೇಳಿದ್ದಾರೆ.  ಥಾಣೆಯ ನೌಪದ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153, 500 ಮತ್ತು 504 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದಸರಾ ರ್ಯಾಲಿಯಲ್ಲಿ ‘ಶಿವಸೇನಾ – ಉದ್ಧವ್ ಬಾಳಾಸಾಹೇಬ್ ಠಾಕ್ರೆ’ ಎಂದು ಕರೆಯಲ್ಪಡುವ ಉದ್ಧವ್ ಠಾಕ್ರೆ ಅವರ ಶಿವಸೇನಾ ಪಿಎಂ ಮೋದಿ ಮತ್ತು ಇತರ ಗಣ್ಯರನ್ನು ಅನುಕರಿಸುವುದು ಮಾತ್ರವಲ್ಲದೆ ಮುಖ್ಯಮಂತ್ರಿಗಳ ದಸರಾ ರ್ಯಾಲಿಯನ್ನು ಅಣಕಿಸಿದೆ.

ಶಿವಸೇನಾ vs ಶಿವಸೇನಾ ದಸರಾ ರ್ಯಾಲಿ

ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಮತ್ತು ಈಗ ಪ್ರಸ್ತುತ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾವೆ ಶಕ್ತಿ ಮತ್ತು ಒಗ್ಗಟ್ಟನ್ನು ಪ್ರದರ್ಶಿಸಲ ಮೆಗಾ ದಸರಾ ರ್ಯಾಲಿಗಳನ್ನು ನಡೆಸಿತ್ತು. ದಾದರ್ ಪ್ರದೇಶದ ಶಿವಾಜಿ ಪಾರ್ಕ್‌ನಲ್ಲಿ ಠಾಕ್ರೆ ತಮ್ಮ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರೆ, ಶಿಂಧೆ ಬಿಕೆಸಿಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರಧಾನಿ ಮೋದಿ ಅವರ ಅನುಕರಣೆ ಮಾಡಿದ್ದು ಇದೇ ಮೊದಲು ಅಲ್ಲ

ಏತನ್ಮಧ್ಯೆ, ಶಿವಸೇನಾ ನಾಯಕರೊಬ್ಬರು ಪ್ರಧಾನಿ ಮೋದಿಯನ್ನು ಅನುಕರಿಸುವುದು ಇದೇ ಮೊದಲಲ್ಲ. ಡಿಸೆಂಬರ್ 2021 ರಲ್ಲಿ, ಪಕ್ಷದ ಭಾಸ್ಕರ್ ಜಾಧವ್ ಅವರು ಪಿಎಂ ಮೋದಿಯವರನ್ನು ಅನುಕರಿಸಿದರು. ಈ ಬಗ್ಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ ನಂತರ ಕ್ಷಮೆಯಾಚಿಸಿದರು. ಪಿಎಂ ಮೋದಿಯನ್ನು ಸ್ಪಷ್ಟವಾಗಿ ಕೆಣಕುವ ಮೂಲಕ, ಸಂಸತ್ ಅಧಿವೇಶನದಲ್ಲಿ ಜಾದವ್ ಅವರು 2014 ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ವಿದೇಶಿ ಬ್ಯಾಂಕ್‌ಗಳಲ್ಲಿ ಇಟ್ಟಿರುವ ಕಪ್ಪು ಹಣವನ್ನು ಮರಳಿ ತರುವ ಬಗ್ಗೆ ಹೇಳಿದ್ದನ್ನೇ ಪುನರಾವರ್ತಿಸಿ ಅನುಕರಿಸಿದ್ದರು.

Published On - 12:48 pm, Wed, 12 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ