Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಕಾರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ನಡೆದ ವಿಡಿಯೋ ಕ್ಲಿಪ್ಪಿಂಗ್ ಬಯಲು ಮಾಡಿದ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು

ವಕೀಲರೂ ಅಗಿರುವ ಬಿಜೆಪಿ ಶಾಸಕರು, ಸೂಕ್ತ ಸಮಯದಲ್ಲಿ ತನ್ನಲ್ಲಿರುವ ಎಲ್ಲ ಸಾಕ್ಷ್ಯಗಳನ್ನು ಕೋರ್ಟಿನ ಮುಂದೆ ಹಾಜರುಪಡಿಸುವುದಾಗಿ ತಿಳಿಸಿದರು. ಸುದ್ದಿಗೋಷ್ಟಿಯೊಂದರಲ್ಲಿ ರಘುನಂದನ್ ಬಿಡುಗಡೆ ಮಾಡಿರುವ ವಿಡಿಯೋ ಕ್ಲಿಪ್ಪಿಂಗ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೈದರಾಬಾದ್: ಕಾರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ನಡೆದ ವಿಡಿಯೋ ಕ್ಲಿಪ್ಪಿಂಗ್ ಬಯಲು ಮಾಡಿದ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು
ಬಿಜೆಪಿ ಶಾಸಕ ಎಮ್ ರಘುನಂದನ್ ರಾವ್
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Jun 07, 2022 | 5:50 PM

ಹೈದರಾಬಾದ್: ಇತ್ತೀಚಿಗೆ ಹೈದರಾಬಾದ ನಗರದ ಪ್ರತಿಷ್ಠಿತ ಪ್ರದೇಶ ಎನಿಸಿಕೊಂಡಿರುವ ಜುಬಿಲೀ ಹಿಲ್ಸ್ (Jubilee Hills) ಏರಿಯಾನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ (gang-rape) ಪೋಟೋಗ್ರಾಫ್ ಮತ್ತು ವಿಡಿಯೋವನ್ನು ಶೇರ್ ಮಾಡಿರುವ ಆರೋಪದಲ್ಲಿ ನಗರದ ಪೊಲೀಸರು ಬಿಜೆಪಿ ಶಾಸಕ ಎಮ್ ರಘುನಂದನ್ ರಾವ್ (M Raghunandan Rao) ಅವರ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿಕೊಂಡಿದ್ದಾರೆ. ವಕೀಲರೊಬ್ಬರು ದಾಖಲಿಸಿದ ದೂರಿನ ಆಧಾರದ ಮೇಲೆ ಇಂಡಿಯನ್ ಪೀನಲ್ ಕೋಡ್ ಸೆಕ್ಷನ್ 228 ಎ ಅಡಿಯಲ್ಲಿ ಆಬಿಡ್ಸ್ ಪೊಲೀಸ್ ಸ್ಟೇಶನ್ ನಲ್ಲಿ ದೂರು ದಾಖಲಿಸಲಾಗಿದೆ.

ರಘುನಂದನ್ ವಿರುದ್ಧ ಸೋಮವಾರ ರಾತ್ರಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಮತ್ತು ಕಾನೂನಿನ ಸಲಹೆ ಪಡೆದ ನಂತರ ಅವರ ವಿರುದ್ಧ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಆಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೆಕ್ಷನ್ 228ರ ಅಡಿಯಲ್ಲಿ ಯಾವುದೇ ವ್ಯಕ್ತಿಯು ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಗುರುತನ್ನು ಪ್ರಿಂಟ್ ಅಥವಾ ಪ್ರಕಾಶಿಸುವ ಮೂಲಕ ಬಹಿರಂಗಗೊಳಿಸಿದರೆ ಎರಡು ವರ್ಷ ಸೆರೆವಾಸದ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ.

ದುಬ್ಬಕ್ ಶಾಸಕರಾಗಿರುವ ರಘುನಂದನ್ ಅವರು ಶಾಸಕರೊಬ್ಬರ ಮಗನೆಂದು ಹೇಳಲಾಗುತ್ತಿರುವ ಒಬ್ಬ ಯುವಕ ಕಾರೊಂದರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ವಿಡಿಯೊವನ್ನು ಬಿಡುಗಡೆ ಮಾಡಿದ ಮೂರು ದಿನಗಳ ಬಳಿಕ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.

ಶಾಸಕರ ಕೃತ್ಯವನ್ನು ವ್ಯಾಪಕವಾಗಿ ಖಂಡಿಸಲಾಗುತ್ತಿದೆ. ಆದರೆ ತಾನು ಸಂತ್ರಸ್ತೆಯ ಹೆಸರು ಮತ್ತು ಗರುತನ್ನು ಬಯಲು ಮಾಡಿಲ್ಲ ಎಂದು ಶಾಸಕರು ಹೇಳುತ್ತಿದ್ದಾರೆ. ಎಮ್ ಐ ಎಮ್ ಶಾಸಕನ ಮಗ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪಿಗಳಲ್ಲಿ ಒಬ್ಬನಾಗಿರುವನೆಂದು ಸಾಬೀತು ಮಾಡುವುದಕ್ಕೋಸ್ಕರ ತಾನು ವಿಡಿಯೋವನ್ನು ಬಿಡುಗಡೆ ಮಾಡಿರುವುದಾಗಿ ಅವರು ಹೇಳಿದ್ದಾರೆ.

ಶಾಸಕನ ಮಗನಿಗೆ ಕ್ಲೀನ್ ಚಿಟ್ ನೀಡಿ ಪೊಲೀಸರು ತನಿಖೆಯನ್ನು ಹಳಿ ತಪ್ಪಿಸುತ್ತಿರುವ ಕಾರಣ ಹಾಗೆ ಮಾಡಿರುವುದಾಗಿ ಮಾಧ್ಯಮಗಳಿಗೆ ಹೇಳಿದ ರಘುನಂದನ್ ಅವರು ತಾನು ಪ್ರಕರಣ ಎದುರಿಸಲು ಸಿದ್ಧ ಎಂದರು.

ವಕೀಲರೂ ಅಗಿರುವ ಬಿಜೆಪಿ ಶಾಸಕರು, ಸೂಕ್ತ ಸಮಯದಲ್ಲಿ ತನ್ನಲ್ಲಿರುವ ಎಲ್ಲ ಸಾಕ್ಷ್ಯಗಳನ್ನು ಕೋರ್ಟಿನ ಮುಂದೆ ಹಾಜರುಪಡಿಸುವುದಾಗಿ ತಿಳಿಸಿದರು. ಸುದ್ದಿಗೋಷ್ಟಿಯೊಂದರಲ್ಲಿ ರಘುನಂದನ್ ಬಿಡುಗಡೆ ಮಾಡಿರುವ ವಿಡಿಯೋ ಕ್ಲಿಪ್ಪಿಂಗ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸದರಿ ವಿಡಿಯೋವನ್ನು ಅಪ್ ಲೋಡ್ ಮಾಡಿದ ಒಂದಿಬ್ಬರು ಯೂಟ್ಯೂಬರ್ ಗಳನ್ನು ಸಹ ಪೊಲೀಸರು ಬಂಧಿಸಿದ್ದಾರೆ.

ಮೇ 28 ರಂದು ಪಬ್ ಒಂದರಲ್ಲಿ ಆಯೋಜಿಸಲಾಗಿದ್ದ ಪಾರ್ಟಿಯಲ್ಲ್ಲಿ ಭಾಗವಹಿಸಿದ್ದ 17-ವರ್ಷ-ವಯಸ್ಸಿನ ಬಾಲಕಿಯೊಬ್ಬಳನ್ನು ಮನೆಗೆ ಡ್ರಾಪ್ ಮಾಡುವುದಾಗಿ ಹೇಳಿ ಐವರು ದುರುಳರು ಕಾರಲ್ಲೇ ಸರದಿಯ ಮೇಲೆ ಅತ್ಯಾಚಾರ ನಡೆಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಾಪರಾಧಿಗಳು ಸೇರಿದಂತೆ ನಾಲ್ವರನ್ನು ಪೊಲೀಸ್ ಬಂಧಿಸಿದ್ದು ಐದನೇಯವನು ತಲೆಮರೆಸಿಕೊಂಡಿದ್ದಾನೆ. ಬಾಪಾಪರಾಧಿಗಳಲ್ಲಿ ಒಬ್ಬನು ತೆಲಂಗಾಣದಲ್ಲಿ ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) ಪಕ್ಷದ ನಾಯಕರೊಬ್ಬರ ಮಗನಾಗಿದ್ದಾನೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್