AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ವಿವಿ ನೀಡಿದ ದೂರಿನಲ್ಲಿ ಬಿಜೆಪಿ ಮುಖಂಡರು ಅನುಮತಿ ಇಲ್ಲದೆ ಕ್ಯಾಂಪಸ್​ನ ಒಳಗೆ ಪ್ರವೇಶಿಸಿ ಬ್ಯಾರಿಕೇಡ್​ಗಳನ್ನು ತೆಗೆದು ಸಭೆ ನಡೆಸಿದ್ದಾರೆ ಎಂದು ತಿಳಿಸಲಾಗಿದೆ.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು
ಬ್ಯಾರಿಕೇಡ್ ಏಳದು ಒಯು ಕ್ಯಾಂಸ್​ನ ಒಳಗೆ ಪ್ರವೇಶಿಸುತ್ತಿರುವ ತೇಜಸ್ವಿ ಸೂರ್ಯ
preethi shettigar
|

Updated on:Nov 26, 2020 | 7:04 PM

Share

ಹೈದರಾಬಾದ್: ಬಿಜೆಪಿ ಸಂಸದ ಮತ್ತು ಪಕ್ಷದ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ಒಸ್ಮಾನಿಯಾ ವಿಶ್ವವಿದ್ಯಾಲಯ ಆವರಣದಲ್ಲಿ ಅತಿಕ್ರಮಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಸೂರ್ಯ ಮತ್ತು ಅವರ ಬೆಂಬಲಿಗರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸೂರ್ಯ ತೆಲಂಗಾಣ ಚಳುವಳಿಯ ಹುತಾತ್ಮರಿಗೆ ಗೌರವ ಸಲ್ಲಿಸಲು ಹಾಕಿದ್ದ ಬ್ಯಾರಿಕೇಡ್​ಗಳನ್ನು ತೆಗೆದು ಕ್ಯಾಂಪಸ್​ನ ಒಳಗೆ ಪ್ರವೇಶಿಸಿದ್ದಾರೆ. ಈ ಕುರಿತು ವಿವಿ ಅಧಿಕಾರಿಗಳು ದೂರು ನೀಡಿದ್ದು, ಈ ಪ್ರಕರಣವನ್ನು ಭಾರತೀಯ ದಂಡ ಸಂಹಿತೆ ಸೆಕ್ಷನ್ 447ರ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿವಿ ನೀಡಿದ ದೂರಿನಲ್ಲಿ ಬಿಜೆಪಿ ಮುಖಂಡರು ಅನುಮತಿ ಇಲ್ಲದೆ ಕ್ಯಾಂಪಸ್​ನ ಒಳಗೆ ಪ್ರವೇಶಿಸಿ ಬ್ಯಾರಿಕೇಡ್​ಗಳನ್ನು ತೆಗೆದು ಸಭೆ ನಡೆಸಿದ್ದಾರೆ ಎಂದು ತಿಳಿಸಲಾಗಿದೆ.

ಸಂಸದರನ್ನು ಪೊಲೀಸರು ತಡೆದಿದ್ದಾರೆ ಎಂದು ಊಹಾಪೋಹಗಳು ಹರಿದಾಡುತ್ತಿವೆ. ಪೊಲೀಸರೊಂದಿಗೆ ಯಾವುದೇ ಘರ್ಷಣೆ ನಡೆದಿಲ್ಲ ಎಂದು ನಗರ ಪೊಲೀಸರು ಸ್ಪಷ್ಟಪಡಿಸಿದ್ದಾರೆ ಮತ್ತು ಕ್ಯಾಂಪಸ್​ನ ಒಳಗೆ ಸಂಸದರು ಶಾಂತಿಯುತ ಸಭೆ ನಡೆಸಿದ್ದರು ಎಂದು ಹೇಳಿದ್ದಾರೆ.

ತೆಲಂಗಾಣ ಪ್ರತ್ಯೇಕ ರಾಜ್ಯದ ಬೇಡಿಕೆ ಸಂದರ್ಭದಲ್ಲಿ ವಿಶ್ವವಿದ್ಯಾಲಯವು ಪ್ರತಿಭಟನೆಯ ಕೇಂದ್ರ ಬಿಂದುವಾಗಿತ್ತು. ಡಿಸೆಂಬರ್ 1ರಂದು ನಡೆಯಲಿರುವ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್ಎಂಸಿ) ಚುನಾವಣೆಯ ಪ್ರಚಾರಕ್ಕಾಗಿ ಸೂರ್ಯ ಅಲ್ಲಿಗೆ ತೆರಳಿದ್ದರು.

Published On - 6:59 pm, Thu, 26 November 20

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ