AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ವಿವಿ ನೀಡಿದ ದೂರಿನಲ್ಲಿ ಬಿಜೆಪಿ ಮುಖಂಡರು ಅನುಮತಿ ಇಲ್ಲದೆ ಕ್ಯಾಂಪಸ್​ನ ಒಳಗೆ ಪ್ರವೇಶಿಸಿ ಬ್ಯಾರಿಕೇಡ್​ಗಳನ್ನು ತೆಗೆದು ಸಭೆ ನಡೆಸಿದ್ದಾರೆ ಎಂದು ತಿಳಿಸಲಾಗಿದೆ.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು
ಬ್ಯಾರಿಕೇಡ್ ಏಳದು ಒಯು ಕ್ಯಾಂಸ್​ನ ಒಳಗೆ ಪ್ರವೇಶಿಸುತ್ತಿರುವ ತೇಜಸ್ವಿ ಸೂರ್ಯ
preethi shettigar
|

Updated on:Nov 26, 2020 | 7:04 PM

Share

ಹೈದರಾಬಾದ್: ಬಿಜೆಪಿ ಸಂಸದ ಮತ್ತು ಪಕ್ಷದ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ಒಸ್ಮಾನಿಯಾ ವಿಶ್ವವಿದ್ಯಾಲಯ ಆವರಣದಲ್ಲಿ ಅತಿಕ್ರಮಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಸೂರ್ಯ ಮತ್ತು ಅವರ ಬೆಂಬಲಿಗರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸೂರ್ಯ ತೆಲಂಗಾಣ ಚಳುವಳಿಯ ಹುತಾತ್ಮರಿಗೆ ಗೌರವ ಸಲ್ಲಿಸಲು ಹಾಕಿದ್ದ ಬ್ಯಾರಿಕೇಡ್​ಗಳನ್ನು ತೆಗೆದು ಕ್ಯಾಂಪಸ್​ನ ಒಳಗೆ ಪ್ರವೇಶಿಸಿದ್ದಾರೆ. ಈ ಕುರಿತು ವಿವಿ ಅಧಿಕಾರಿಗಳು ದೂರು ನೀಡಿದ್ದು, ಈ ಪ್ರಕರಣವನ್ನು ಭಾರತೀಯ ದಂಡ ಸಂಹಿತೆ ಸೆಕ್ಷನ್ 447ರ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿವಿ ನೀಡಿದ ದೂರಿನಲ್ಲಿ ಬಿಜೆಪಿ ಮುಖಂಡರು ಅನುಮತಿ ಇಲ್ಲದೆ ಕ್ಯಾಂಪಸ್​ನ ಒಳಗೆ ಪ್ರವೇಶಿಸಿ ಬ್ಯಾರಿಕೇಡ್​ಗಳನ್ನು ತೆಗೆದು ಸಭೆ ನಡೆಸಿದ್ದಾರೆ ಎಂದು ತಿಳಿಸಲಾಗಿದೆ.

ಸಂಸದರನ್ನು ಪೊಲೀಸರು ತಡೆದಿದ್ದಾರೆ ಎಂದು ಊಹಾಪೋಹಗಳು ಹರಿದಾಡುತ್ತಿವೆ. ಪೊಲೀಸರೊಂದಿಗೆ ಯಾವುದೇ ಘರ್ಷಣೆ ನಡೆದಿಲ್ಲ ಎಂದು ನಗರ ಪೊಲೀಸರು ಸ್ಪಷ್ಟಪಡಿಸಿದ್ದಾರೆ ಮತ್ತು ಕ್ಯಾಂಪಸ್​ನ ಒಳಗೆ ಸಂಸದರು ಶಾಂತಿಯುತ ಸಭೆ ನಡೆಸಿದ್ದರು ಎಂದು ಹೇಳಿದ್ದಾರೆ.

ತೆಲಂಗಾಣ ಪ್ರತ್ಯೇಕ ರಾಜ್ಯದ ಬೇಡಿಕೆ ಸಂದರ್ಭದಲ್ಲಿ ವಿಶ್ವವಿದ್ಯಾಲಯವು ಪ್ರತಿಭಟನೆಯ ಕೇಂದ್ರ ಬಿಂದುವಾಗಿತ್ತು. ಡಿಸೆಂಬರ್ 1ರಂದು ನಡೆಯಲಿರುವ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್ಎಂಸಿ) ಚುನಾವಣೆಯ ಪ್ರಚಾರಕ್ಕಾಗಿ ಸೂರ್ಯ ಅಲ್ಲಿಗೆ ತೆರಳಿದ್ದರು.

Published On - 6:59 pm, Thu, 26 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!