Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದ ಖುಷಿ! ಪುರಸಭೆ ಕಚೇರಿ ಮೇಲೆ ಜೈ ಶ್ರೀರಾಮ್ ಬ್ಯಾನರ್ ಹಾಕಿದ್ದ ಬಿಜೆಪಿಗರ ವಿರುದ್ಧ ಕೇಸ್​ ದಾಖಲು

ಒಂದೆಡೆ ಪುರಸಭೆ ಕಾರ್ಯದರ್ಶಿ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೆ, ಇನ್ನೊಂದೆಡೆ, ಅಲ್ಲಿನ ಎಡಪಂಥೀಯ ಸಂಘಟನೆ DYFI ಇಂದು ಪುರಸಭೆ ಕಚೇರಿ ಬಳಿ ತ್ರಿವರ್ಣ ಧ್ವಜ ಹಾರಿಸಿದೆ.

ಗೆದ್ದ ಖುಷಿ! ಪುರಸಭೆ ಕಚೇರಿ ಮೇಲೆ ಜೈ ಶ್ರೀರಾಮ್ ಬ್ಯಾನರ್ ಹಾಕಿದ್ದ ಬಿಜೆಪಿಗರ ವಿರುದ್ಧ ಕೇಸ್​ ದಾಖಲು
ಪುರಸಭೆ ಕಚೇರಿ ಮೇಲೆ ಛತ್ರಪತಿ ಶಿವಾಜಿ ಫೋಟೋ ಇರುವ ಬ್ಯಾನರ್​
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Dec 18, 2020 | 5:52 PM

ಪಾಲಕ್ಕಡ್​: ಕೇರಳದ ಪಾಲಕ್ಕಾಡ್​ ಪುರಸಭೆ ಕಚೇರಿಯ ಟೆರೇಸ್ ಮೇಲೆ ಜೈ ಶ್ರೀರಾಮ್​ ಎಂದು ಬರೆದ ದೊಡ್ಡದಾದ ಬ್ಯಾನರ್​ ಹಾಕಿ, ಸಂಭ್ರಮಾಚರಣೆ ಮಾಡಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚೆಗೆ ನಡೆದಿದ್ದ ಪಾಲಕ್ಕಾಡ್​ ಪುರಸಭೆ ಚುನಾವಣೆಯಲ್ಲಿ 52 ವಾರ್ಡ್​ಗಳಲ್ಲಿ 28 ಸೀಟ್​ಗಳನ್ನು ಗೆಲ್ಲುವ ಮೂಲಕ ಬಿಜೆಪಿ ಗೆಲುವು ಸಾಧಿಸಿತ್ತು. ಅದಾದ ಬಳಿಕ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಭರ್ಜರಿಯಾಗಿ ಸಂಭ್ರಮ ಆಚರಿಸಿದ್ದರು. ಹಾಗೇ, ಕಚೇರಿಯ ಟೆರೇಸ್​ನಿಂದ ಜೈ ಶ್ರೀರಾಮ್​ ಎಂದು ಮಲೆಯಾಳಂನಲ್ಲಿ ಬರೆದುಕೊಂಡಿದ್ದ ದೊಡ್ಡ ಬ್ಯಾನರ್​ನ್ನು ಇಳಿಯಬಿಟ್ಟಿದ್ದರು. ಅದರಲ್ಲಿ ಛತ್ರಪತಿ ಶಿವಾಜಿ ಚಿತ್ರವೂ ಇತ್ತು. ಇದರ ವಿರುದ್ಧ ಪುರಸಭೆಯ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ಇದು ಕೋಮು ಸೌಹಾರ್ದವನ್ನು ಕದಡುವ ಪ್ರಯತ್ನ ಎಂದು ಆರೋಪಿಸಿದ್ದರು.

ಅಷ್ಟೇ ಅಲ್ಲದೆ ಈ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ಚಿತ್ರವನ್ನೊಳಗೊಂಡ ಇನ್ನೊಂದು ಬ್ಯಾನರ್ ಕೂಡ ಹಾಕಿದ್ದರು. ಒಂದೆಡೆ ಪುರಸಭೆ ಕಾರ್ಯದರ್ಶಿ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೆ, ಇನ್ನೊಂದೆಡೆ, ಅಲ್ಲಿನ ಎಡಪಂಥೀಯ ಸಂಘಟನೆ DYFI ಇಂದು ಪುರಸಭೆ ಕಚೇರಿ ಬಳಿ ತ್ರಿವರ್ಣ ಧ್ವಜ ಹಾರಿಸಿ, ಬಿಜೆಪಿ ಮತ್ತು ಆರ್​ಎಸ್​ಎಸ್​ ವಿರೋಧಿ ಘೋಷಣೆಗಳನ್ನು ಕೂಗಿದೆ.

ಟಿಎಂಸಿ ತೊರೆದ ಸುವೇಂದು ಅಧಿಕಾರಿಗೆ Z ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಸರ್ಕಾರದ ನಿರ್ಧಾರ

Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ