AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದ ಖುಷಿ! ಪುರಸಭೆ ಕಚೇರಿ ಮೇಲೆ ಜೈ ಶ್ರೀರಾಮ್ ಬ್ಯಾನರ್ ಹಾಕಿದ್ದ ಬಿಜೆಪಿಗರ ವಿರುದ್ಧ ಕೇಸ್​ ದಾಖಲು

ಒಂದೆಡೆ ಪುರಸಭೆ ಕಾರ್ಯದರ್ಶಿ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೆ, ಇನ್ನೊಂದೆಡೆ, ಅಲ್ಲಿನ ಎಡಪಂಥೀಯ ಸಂಘಟನೆ DYFI ಇಂದು ಪುರಸಭೆ ಕಚೇರಿ ಬಳಿ ತ್ರಿವರ್ಣ ಧ್ವಜ ಹಾರಿಸಿದೆ.

ಗೆದ್ದ ಖುಷಿ! ಪುರಸಭೆ ಕಚೇರಿ ಮೇಲೆ ಜೈ ಶ್ರೀರಾಮ್ ಬ್ಯಾನರ್ ಹಾಕಿದ್ದ ಬಿಜೆಪಿಗರ ವಿರುದ್ಧ ಕೇಸ್​ ದಾಖಲು
ಪುರಸಭೆ ಕಚೇರಿ ಮೇಲೆ ಛತ್ರಪತಿ ಶಿವಾಜಿ ಫೋಟೋ ಇರುವ ಬ್ಯಾನರ್​
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Dec 18, 2020 | 5:52 PM

ಪಾಲಕ್ಕಡ್​: ಕೇರಳದ ಪಾಲಕ್ಕಾಡ್​ ಪುರಸಭೆ ಕಚೇರಿಯ ಟೆರೇಸ್ ಮೇಲೆ ಜೈ ಶ್ರೀರಾಮ್​ ಎಂದು ಬರೆದ ದೊಡ್ಡದಾದ ಬ್ಯಾನರ್​ ಹಾಕಿ, ಸಂಭ್ರಮಾಚರಣೆ ಮಾಡಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚೆಗೆ ನಡೆದಿದ್ದ ಪಾಲಕ್ಕಾಡ್​ ಪುರಸಭೆ ಚುನಾವಣೆಯಲ್ಲಿ 52 ವಾರ್ಡ್​ಗಳಲ್ಲಿ 28 ಸೀಟ್​ಗಳನ್ನು ಗೆಲ್ಲುವ ಮೂಲಕ ಬಿಜೆಪಿ ಗೆಲುವು ಸಾಧಿಸಿತ್ತು. ಅದಾದ ಬಳಿಕ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಭರ್ಜರಿಯಾಗಿ ಸಂಭ್ರಮ ಆಚರಿಸಿದ್ದರು. ಹಾಗೇ, ಕಚೇರಿಯ ಟೆರೇಸ್​ನಿಂದ ಜೈ ಶ್ರೀರಾಮ್​ ಎಂದು ಮಲೆಯಾಳಂನಲ್ಲಿ ಬರೆದುಕೊಂಡಿದ್ದ ದೊಡ್ಡ ಬ್ಯಾನರ್​ನ್ನು ಇಳಿಯಬಿಟ್ಟಿದ್ದರು. ಅದರಲ್ಲಿ ಛತ್ರಪತಿ ಶಿವಾಜಿ ಚಿತ್ರವೂ ಇತ್ತು. ಇದರ ವಿರುದ್ಧ ಪುರಸಭೆಯ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ಇದು ಕೋಮು ಸೌಹಾರ್ದವನ್ನು ಕದಡುವ ಪ್ರಯತ್ನ ಎಂದು ಆರೋಪಿಸಿದ್ದರು.

ಅಷ್ಟೇ ಅಲ್ಲದೆ ಈ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ಚಿತ್ರವನ್ನೊಳಗೊಂಡ ಇನ್ನೊಂದು ಬ್ಯಾನರ್ ಕೂಡ ಹಾಕಿದ್ದರು. ಒಂದೆಡೆ ಪುರಸಭೆ ಕಾರ್ಯದರ್ಶಿ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೆ, ಇನ್ನೊಂದೆಡೆ, ಅಲ್ಲಿನ ಎಡಪಂಥೀಯ ಸಂಘಟನೆ DYFI ಇಂದು ಪುರಸಭೆ ಕಚೇರಿ ಬಳಿ ತ್ರಿವರ್ಣ ಧ್ವಜ ಹಾರಿಸಿ, ಬಿಜೆಪಿ ಮತ್ತು ಆರ್​ಎಸ್​ಎಸ್​ ವಿರೋಧಿ ಘೋಷಣೆಗಳನ್ನು ಕೂಗಿದೆ.

ಟಿಎಂಸಿ ತೊರೆದ ಸುವೇಂದು ಅಧಿಕಾರಿಗೆ Z ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಸರ್ಕಾರದ ನಿರ್ಧಾರ

ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ