AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದ ಖುಷಿ! ಪುರಸಭೆ ಕಚೇರಿ ಮೇಲೆ ಜೈ ಶ್ರೀರಾಮ್ ಬ್ಯಾನರ್ ಹಾಕಿದ್ದ ಬಿಜೆಪಿಗರ ವಿರುದ್ಧ ಕೇಸ್​ ದಾಖಲು

ಒಂದೆಡೆ ಪುರಸಭೆ ಕಾರ್ಯದರ್ಶಿ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೆ, ಇನ್ನೊಂದೆಡೆ, ಅಲ್ಲಿನ ಎಡಪಂಥೀಯ ಸಂಘಟನೆ DYFI ಇಂದು ಪುರಸಭೆ ಕಚೇರಿ ಬಳಿ ತ್ರಿವರ್ಣ ಧ್ವಜ ಹಾರಿಸಿದೆ.

ಗೆದ್ದ ಖುಷಿ! ಪುರಸಭೆ ಕಚೇರಿ ಮೇಲೆ ಜೈ ಶ್ರೀರಾಮ್ ಬ್ಯಾನರ್ ಹಾಕಿದ್ದ ಬಿಜೆಪಿಗರ ವಿರುದ್ಧ ಕೇಸ್​ ದಾಖಲು
ಪುರಸಭೆ ಕಚೇರಿ ಮೇಲೆ ಛತ್ರಪತಿ ಶಿವಾಜಿ ಫೋಟೋ ಇರುವ ಬ್ಯಾನರ್​
Lakshmi Hegde
| Edited By: |

Updated on: Dec 18, 2020 | 5:52 PM

Share

ಪಾಲಕ್ಕಡ್​: ಕೇರಳದ ಪಾಲಕ್ಕಾಡ್​ ಪುರಸಭೆ ಕಚೇರಿಯ ಟೆರೇಸ್ ಮೇಲೆ ಜೈ ಶ್ರೀರಾಮ್​ ಎಂದು ಬರೆದ ದೊಡ್ಡದಾದ ಬ್ಯಾನರ್​ ಹಾಕಿ, ಸಂಭ್ರಮಾಚರಣೆ ಮಾಡಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚೆಗೆ ನಡೆದಿದ್ದ ಪಾಲಕ್ಕಾಡ್​ ಪುರಸಭೆ ಚುನಾವಣೆಯಲ್ಲಿ 52 ವಾರ್ಡ್​ಗಳಲ್ಲಿ 28 ಸೀಟ್​ಗಳನ್ನು ಗೆಲ್ಲುವ ಮೂಲಕ ಬಿಜೆಪಿ ಗೆಲುವು ಸಾಧಿಸಿತ್ತು. ಅದಾದ ಬಳಿಕ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಭರ್ಜರಿಯಾಗಿ ಸಂಭ್ರಮ ಆಚರಿಸಿದ್ದರು. ಹಾಗೇ, ಕಚೇರಿಯ ಟೆರೇಸ್​ನಿಂದ ಜೈ ಶ್ರೀರಾಮ್​ ಎಂದು ಮಲೆಯಾಳಂನಲ್ಲಿ ಬರೆದುಕೊಂಡಿದ್ದ ದೊಡ್ಡ ಬ್ಯಾನರ್​ನ್ನು ಇಳಿಯಬಿಟ್ಟಿದ್ದರು. ಅದರಲ್ಲಿ ಛತ್ರಪತಿ ಶಿವಾಜಿ ಚಿತ್ರವೂ ಇತ್ತು. ಇದರ ವಿರುದ್ಧ ಪುರಸಭೆಯ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ಇದು ಕೋಮು ಸೌಹಾರ್ದವನ್ನು ಕದಡುವ ಪ್ರಯತ್ನ ಎಂದು ಆರೋಪಿಸಿದ್ದರು.

ಅಷ್ಟೇ ಅಲ್ಲದೆ ಈ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ಚಿತ್ರವನ್ನೊಳಗೊಂಡ ಇನ್ನೊಂದು ಬ್ಯಾನರ್ ಕೂಡ ಹಾಕಿದ್ದರು. ಒಂದೆಡೆ ಪುರಸಭೆ ಕಾರ್ಯದರ್ಶಿ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೆ, ಇನ್ನೊಂದೆಡೆ, ಅಲ್ಲಿನ ಎಡಪಂಥೀಯ ಸಂಘಟನೆ DYFI ಇಂದು ಪುರಸಭೆ ಕಚೇರಿ ಬಳಿ ತ್ರಿವರ್ಣ ಧ್ವಜ ಹಾರಿಸಿ, ಬಿಜೆಪಿ ಮತ್ತು ಆರ್​ಎಸ್​ಎಸ್​ ವಿರೋಧಿ ಘೋಷಣೆಗಳನ್ನು ಕೂಗಿದೆ.

ಟಿಎಂಸಿ ತೊರೆದ ಸುವೇಂದು ಅಧಿಕಾರಿಗೆ Z ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಸರ್ಕಾರದ ನಿರ್ಧಾರ

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?