AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶ್ನೆಗಾಗಿ ನಗದು ಪ್ರಕರಣ: ಅಕ್ಟೋಬರ್ 31 ರಂದು ನೈತಿಕ ಸಮಿತಿಯ ಮುಂದೆ ಹಾಜರಾಗಲು ಮಹುವಾ ಮೊಯಿತ್ರಾಗೆ ಸೂಚನೆ

ಇಂದು, ನಾವು ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಅವರನ್ನು ಕರೆದು ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಆರೋಪಗಳನ್ನು ಆಲಿಸಿದ್ದೇವೆ. ಈಗ, ನಾವು ಅಕ್ಟೋಬರ್ 31 ರಂದು ಸಂಸದ ಮಹುವಾ ಮೊಯಿತ್ರಾ ಅವರ ವಾದವನ್ನು ಮಂಡಿಸಲು ಕರೆದಿದ್ದೇವೆ ಎಂದು ವಿನೋದ್ ಕುಮಾರ್ ಸೋಂಕರ್ ಹೇಳಿದರು

ಪ್ರಶ್ನೆಗಾಗಿ ನಗದು ಪ್ರಕರಣ: ಅಕ್ಟೋಬರ್ 31 ರಂದು ನೈತಿಕ ಸಮಿತಿಯ ಮುಂದೆ ಹಾಜರಾಗಲು ಮಹುವಾ ಮೊಯಿತ್ರಾಗೆ ಸೂಚನೆ
ಮಹುವಾ ಮೊಯಿತ್ರಾ
ರಶ್ಮಿ ಕಲ್ಲಕಟ್ಟ
|

Updated on:Oct 26, 2023 | 6:22 PM

Share

ದೆಹಲಿ ಅಕ್ಟೋಬರ್ 26: ಪ್ರಶ್ನೆಗಾಗಿ ನಗದು ಪ್ರಕರಣ (Cash for query) ಸಂಬಂಧಿಸಿದಂತೆ ಮಹುವಾ ಮೊಯಿತ್ರಾ(Mahua Moitra) ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ಲೋಕಸಭೆಯ ನೈತಿಕ ಸಮಿತಿಯು (Ethics Committee) ಅಕ್ಟೋಬರ್‌ 31ರಂದು ಹಾಜರಾಗುವಂತೆ ತೃಣಮೂಲ ಕಾಂಗ್ರೆಸ್‌ ಸಂಸದರಿಗೆ ಸಮನ್ಸ್‌ ನೀಡಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ನೈತಿಕ ಸಮಿತಿಯ ಅಧ್ಯಕ್ಷ ವಿನೋದ್ ಕುಮಾರ್ ಸೋಂಕರ್, ಸಮಿತಿಯು ಜಾರ್ಖಂಡ್‌ನ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ಸುಪ್ರೀಂಕೋರ್ಟ್ ವಕೀಲ ಜೈ ಅನಂತ್ ದೆಹದ್ರಾಯ್ ಅವರನ್ನು ಪ್ರಕರಣದ ವಿಚಾರಣೆಗೆ ಕರೆದಿದೆ.

ಇಂದು, ನಾವು ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಅವರನ್ನು ಕರೆದು ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಆರೋಪಗಳನ್ನು ಆಲಿಸಿದ್ದೇವೆ. ಈಗ, ನಾವು ಅಕ್ಟೋಬರ್ 31 ರಂದು ಸಂಸದ ಮಹುವಾ ಮೊಯಿತ್ರಾ ಅವರ ವಾದವನ್ನು ಮಂಡಿಸಲು ಕರೆದಿದ್ದೇವೆ ಎಂದು ವಿನೋದ್ ಕುಮಾರ್ ಸೋಂಕರ್ ಹೇಳಿದರು. ಸಂಸದ ಮಹುವಾ ಮೊಯಿತ್ರಾ ಅವರು ಪ್ರಶ್ನೆ ಕೇಳುವುದಕ್ಕಾಗಿ ಲಂಚ ಪಡೆದಿದ್ದಾರೆ ಎಂದು ದೇಹದ್ರಾಯ್ ಆರೋಪಿಸಿದ್ದರು.

ಮಹುವಾ ಮೊಯಿತ್ರಾ ವಿರುದ್ಧ ನಿಶಿಕಾಂತ್ ದುಬೆ  ದೂರಿನ ನಂತರ ತನಿಖೆ

ಗುರುವಾರ ಸಮಿತಿಯ ಮುಂದೆ ನಿಶಿಕಾಂತ್ ದುಬೆ ಮತ್ತು ಜೈ ಅನಂತ್ ದೇಹದ್ರಾಯ್ ಅವರನ್ನು ಕರೆದ ನಂತರ ತೃಣಮೂಲ ಸಂಸದರನ್ನು ವಿಚಾರಣೆಗೆ ಕರೆಯಲಾಗಿದೆ. ನಿಶಿಕಾಂತ್ ದುಬೆ ಅವರ ದೂರಿನ ನಂತರ ಲೋಕಸಭೆಯ ನೈತಿಕ ಸಮಿತಿಯು ಈ ವಿಷಯವನ್ನು ಕೈಗೆತ್ತಿಕೊಂಡಿದೆ.

ಲೋಕಸಭೆಯ ಸ್ಪೀಕರ್‌ಗೆ ನೀಡಿದ ದೂರಿನಲ್ಲಿ ದುಬೆ ಅವರು ಸುಪ್ರೀಂಕೋರ್ಟ್ ವಕೀಲ ದೆಹದ್ರಾಯಿ ಅವರು ಹಂಚಿಕೊಂಡಿದ್ದಾರೆ ಎನ್ನಲಾದ ದಾಖಲೆಗಳನ್ನು ಉಲ್ಲೇಖಿಸಿದ್ದಾರೆ. ಒಂದು ಕಾಲದಲ್ಲಿ ಮಹುವಾ ಮೊಯಿತ್ರಾಗೆ ನಿಕಟವಾಗಿದ್ದ ಜೈ ಅನಂತ್ ದೆಹದ್ರಾ ಅವರು ಟಿಎಂಸಿ ಸಂಸದ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ದರ್ಶನ್ ಹಿರಾನಂದಾನಿ ನಡುವಿನ ‘ಲಂಚ ವಿನಿಮಯ’ವನ್ನು ಬಹಿರಂಗಪಡಿಸುವ ದಾಖಲೆಗಳನ್ನು ಹಂಚಿಕೊಂಡಿದ್ದಾರೆ ಎಂದು ನಿಶಿಕಾಂತ್ ದುಬೆ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸುವ ಪ್ರಯತ್ನದಲ್ಲಿ ಅದಾನಿ ಗ್ರೂಪ್ ಬಗ್ಗೆ ಪ್ರಶ್ನೆಗಳನ್ನು ಕೇಳಲು ಮೊಯಿತ್ರಾ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಅದಾನಿ, ಬಿಜೆಪಿ ಸಂಸದರ ವಿರುದ್ಧ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಾಗ್ದಾಳಿ

ದರ್ಶನ್ ಹಿರಾನಂದಾನಿ ಅಫಿಡವಿಟ್

ಅಕ್ಟೋಬರ್ 22 ರಂದು, ಉದ್ಯಮಿ ದರ್ಶನ್ ಹಿರಾನಂದಾನಿ ಅವರು ನೈತಿಕ ಸಮಿತಿಯ ಮುಂದೆ ಅಫಿಡವಿಟ್ ಸಲ್ಲಿಸಿದ್ದು, ಮಹುವಾ ಮೊಯಿತ್ರಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಮಹುವಾ ಮೊಯಿತ್ರಾಗೆ ಲಂಚ ನೀಡಿದ್ದೇನೆ ಎಂದು ಉದ್ಯಮಿ ಹೇಳಿಕೊಂಡಿದ್ದಾರೆ. ಟಿಎಂಸಿ ನಾಯಕರು ಹಲವಾರು ಬೇಡಿಕೆಗಳನ್ನು ಮುಂದಿಟ್ಟು ತಮ್ಮ ಬಳಿ ಲಂಚ ಕೇಳಿದರು ಎಂದು ಅವರು ಆರೋಪಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:19 pm, Thu, 26 October 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು