AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶ್ನೆಗಾಗಿ ನಗದು ಪ್ರಕರಣ: ಮಹುವಾ ಮೊಯಿತ್ರಾ ಸರ್ಕಾರಿ ಮನೆ ತೆರವು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್​​​

ಮಹುವಾ ಮೊಯಿತ್ರಾ ಅವರಿಗೆ ಸರಕಾರದಿಂದ ಮಂಜೂರಾಗಿದ್ದ ಮನೆಯನ್ನು ಖಾಲಿ ಮಾಡುವಂತೆ ನೊಟೀಸ್‌ ನೀಡಿಲಾಗಿತ್ತು. ಈ ನೋಟಿಸ್​​​ ವಿರುದ್ಧ ಮಹುವಾ ಮೊಯಿತ್ರಾ ಅವರು ದೆಹಲಿ ಹೈಕೋರ್ಟ್​​​ ಮೊರೆ ಹೋಗಿದರು. ಇದೀಗ ಅವರು ಅರ್ಜಿಯನ್ನು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್​​​​​ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಶ್ನೆಗಾಗಿ ನಗದು ಪ್ರಕರಣ: ಮಹುವಾ ಮೊಯಿತ್ರಾ ಸರ್ಕಾರಿ ಮನೆ ತೆರವು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್​​​
ಮಹುವಾ ಮೊಯಿತ್ರಾ
ಅಕ್ಷಯ್​ ಪಲ್ಲಮಜಲು​​
|

Updated on: Jan 04, 2024 | 1:10 PM

Share

ದೆಹಲಿ, ಜ.4: ಪ್ರಶ್ನೆಗಾಗಿ ನಗದು ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಿಂದ ಉಚ್ಚಾಟನೆಗೊಂಡ ಬಳಿಕ ಮಹುವಾ ಮೊಯಿತ್ರಾ (Mahua Moitra) ಅವರಿಗೆ ಸರಕಾರದಿಂದ ಮಂಜೂರಾಗಿದ್ದ ಮನೆಯನ್ನು ಖಾಲಿ ಮಾಡುವಂತೆ ನೊಟೀಸ್‌ ನೀಡಿಲಾಗಿತ್ತು. ಈ ನೋಟಿಸ್​​​ ವಿರುದ್ಧ ಮಹುವಾ ಮೊಯಿತ್ರಾ ಅವರು ದೆಹಲಿ ಹೈಕೋರ್ಟ್​​​ ಮೊರೆ ಹೋಗಿದರು. ಇದೀಗ ಅವರು ಅರ್ಜಿಯನ್ನು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್​​​​​ ಅರ್ಜಿಯನ್ನು ವಜಾಗೊಳಿಸಿದೆ. ನಿಮ್ಮ ಮನವಿಯನ್ನು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಸಲ್ಲಿಸಿ ಎಂದು ಹೇಳಿದೆ.

ಜನವರಿ 7 ರೊಳಗೆ ಮನೆ ಖಾಲಿ ಮಾಡುವ ಸೂಚನೆಯನ್ನು ರದ್ದು ಮಾಡುವಂತೆ ಕೋರ್ಟ್​​​ ನಿರ್ದೇಶನ ನೀಡಬೇಕು ಎಂದು ಮನವಿಯನ್ನು ಸಲ್ಲಿಸಿದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್​​​, ನಿಮ್ಮ ಮನವಿಯನ್ನು ಜನವರಿ 7 ರೊಳಗೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಸಲ್ಲಿಸಬೇಕು ಎಂದು ಹೇಳಿದೆ. ಜತೆಗೆ ಕಾನೂನಿನ ಪ್ರಕಾರ ಮಾತ್ರ ಮಹುವಾ ಮೊಯಿತ್ರಾ ಅವರನ್ನು ಸರ್ಕಾರಿ ಮನೆಯಿಂದ ಹೊರಹಾಕಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶಿಸಿತು.

ಈ ಮನಿವಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ಸುಬ್ರಮೊನಿಯುನ್ ಪ್ರಸಾದ್, ನಿಯಮಗಳ ಪ್ರಕಾರ ಅಧಿಕಾರಿಗಳು ನಿರ್ದಿಷ್ಟ ಅವಧಿಯವರೆಗೆ ಹೆಚ್ಚು ಕಾಲ ಉಳಿಯಲು ಅನುಮತಿ ನೀಡುತ್ತವೆ ಎಂದು ಹೇಳಿದರು. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಇಲಾಖೆ ಡೈರೆಕ್ಟರೇಟ್ ಆಫ್ ಎಸ್ಟೇಟ್​​ಗೆ ಮನವಿ ಸಲ್ಲಿಸಿ ಎಂದು ಕೋರ್ಟ್​​​ ಹೇಳಿದೆ.

ಇದನ್ನೂ ಓದಿ: ಪ್ರಶ್ನೆಗಾಗಿ ನಗದು ಆರೋಪದಿಂದ ಹಿಡಿದು ಮಹುವಾ ಮೊಯಿತ್ರಾ ಉಚ್ಛಾಟನೆವರೆಗೆ ಏನೇನಾಯ್ತು?

ಮಹುವಾ ಮೊಯಿತ್ರಾ ಅವರು ಡಿಸೆಂಬರ್ 11 ರಂದು ಡೈರೆಕ್ಟರೇಟ್ ಆಫ್ ಎಸ್ಟೇಟ್ ಆದೇಶವನ್ನು ರದ್ದುಗೊಳಿಸುವಂತೆ ನ್ಯಾಯಾಲಯವನ್ನು ಕೋರಿದ್ದರು. 2024ರ ಸಾರ್ವತ್ರಿಕ ಚುನಾವಣೆ ನಡೆಯುವವರೆಗೆ ನಾನು ಈ ಮನೆಯಲ್ಲಿ ಉಳಿಯಲು ಅವಕಾಶ ನೀಡುವಂತೆ ನಿರ್ದೇಶನ ನೀಡಬೇಕು ಎಂದು ಕೋರ್ಟ್​​ಗೆ ಮನವಿಯನ್ನು ಸಲ್ಲಿಸಿದರು. ಆದರೆ ಇದು ನಮ್ಮಿಂದ ಸಾಧ್ಯವಿಲ್ಲ, ನೀವು ಡೈರೆಕ್ಟರೇಟ್ ಆಫ್ ಎಸ್ಟೇಟ್​​ಗೆ ಈ ಮನವಿಯನ್ನು ಸಲ್ಲಿಸಿ ಎಂದು ದೆಹಲಿ ಹೈಕೋರ್ಟ್​​​ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ