ಪ್ರಶ್ನೆಗಾಗಿ ನಗದು ಪ್ರಕರಣ: ಮಹುವಾ ಮೊಯಿತ್ರಾ ಸರ್ಕಾರಿ ಮನೆ ತೆರವು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್​​​

ಮಹುವಾ ಮೊಯಿತ್ರಾ ಅವರಿಗೆ ಸರಕಾರದಿಂದ ಮಂಜೂರಾಗಿದ್ದ ಮನೆಯನ್ನು ಖಾಲಿ ಮಾಡುವಂತೆ ನೊಟೀಸ್‌ ನೀಡಿಲಾಗಿತ್ತು. ಈ ನೋಟಿಸ್​​​ ವಿರುದ್ಧ ಮಹುವಾ ಮೊಯಿತ್ರಾ ಅವರು ದೆಹಲಿ ಹೈಕೋರ್ಟ್​​​ ಮೊರೆ ಹೋಗಿದರು. ಇದೀಗ ಅವರು ಅರ್ಜಿಯನ್ನು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್​​​​​ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಶ್ನೆಗಾಗಿ ನಗದು ಪ್ರಕರಣ: ಮಹುವಾ ಮೊಯಿತ್ರಾ ಸರ್ಕಾರಿ ಮನೆ ತೆರವು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್​​​
ಮಹುವಾ ಮೊಯಿತ್ರಾ

Updated on: Jan 04, 2024 | 1:10 PM

ದೆಹಲಿ, ಜ.4: ಪ್ರಶ್ನೆಗಾಗಿ ನಗದು ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಿಂದ ಉಚ್ಚಾಟನೆಗೊಂಡ ಬಳಿಕ ಮಹುವಾ ಮೊಯಿತ್ರಾ (Mahua Moitra) ಅವರಿಗೆ ಸರಕಾರದಿಂದ ಮಂಜೂರಾಗಿದ್ದ ಮನೆಯನ್ನು ಖಾಲಿ ಮಾಡುವಂತೆ ನೊಟೀಸ್‌ ನೀಡಿಲಾಗಿತ್ತು. ಈ ನೋಟಿಸ್​​​ ವಿರುದ್ಧ ಮಹುವಾ ಮೊಯಿತ್ರಾ ಅವರು ದೆಹಲಿ ಹೈಕೋರ್ಟ್​​​ ಮೊರೆ ಹೋಗಿದರು. ಇದೀಗ ಅವರು ಅರ್ಜಿಯನ್ನು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್​​​​​ ಅರ್ಜಿಯನ್ನು ವಜಾಗೊಳಿಸಿದೆ. ನಿಮ್ಮ ಮನವಿಯನ್ನು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಸಲ್ಲಿಸಿ ಎಂದು ಹೇಳಿದೆ.

ಜನವರಿ 7 ರೊಳಗೆ ಮನೆ ಖಾಲಿ ಮಾಡುವ ಸೂಚನೆಯನ್ನು ರದ್ದು ಮಾಡುವಂತೆ ಕೋರ್ಟ್​​​ ನಿರ್ದೇಶನ ನೀಡಬೇಕು ಎಂದು ಮನವಿಯನ್ನು ಸಲ್ಲಿಸಿದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್​​​, ನಿಮ್ಮ ಮನವಿಯನ್ನು ಜನವರಿ 7 ರೊಳಗೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಸಲ್ಲಿಸಬೇಕು ಎಂದು ಹೇಳಿದೆ. ಜತೆಗೆ ಕಾನೂನಿನ ಪ್ರಕಾರ ಮಾತ್ರ ಮಹುವಾ ಮೊಯಿತ್ರಾ ಅವರನ್ನು ಸರ್ಕಾರಿ ಮನೆಯಿಂದ ಹೊರಹಾಕಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶಿಸಿತು.

ಈ ಮನಿವಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ಸುಬ್ರಮೊನಿಯುನ್ ಪ್ರಸಾದ್, ನಿಯಮಗಳ ಪ್ರಕಾರ ಅಧಿಕಾರಿಗಳು ನಿರ್ದಿಷ್ಟ ಅವಧಿಯವರೆಗೆ ಹೆಚ್ಚು ಕಾಲ ಉಳಿಯಲು ಅನುಮತಿ ನೀಡುತ್ತವೆ ಎಂದು ಹೇಳಿದರು. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಇಲಾಖೆ ಡೈರೆಕ್ಟರೇಟ್ ಆಫ್ ಎಸ್ಟೇಟ್​​ಗೆ ಮನವಿ ಸಲ್ಲಿಸಿ ಎಂದು ಕೋರ್ಟ್​​​ ಹೇಳಿದೆ.

ಇದನ್ನೂ ಓದಿ: ಪ್ರಶ್ನೆಗಾಗಿ ನಗದು ಆರೋಪದಿಂದ ಹಿಡಿದು ಮಹುವಾ ಮೊಯಿತ್ರಾ ಉಚ್ಛಾಟನೆವರೆಗೆ ಏನೇನಾಯ್ತು?

ಮಹುವಾ ಮೊಯಿತ್ರಾ ಅವರು ಡಿಸೆಂಬರ್ 11 ರಂದು ಡೈರೆಕ್ಟರೇಟ್ ಆಫ್ ಎಸ್ಟೇಟ್ ಆದೇಶವನ್ನು ರದ್ದುಗೊಳಿಸುವಂತೆ ನ್ಯಾಯಾಲಯವನ್ನು ಕೋರಿದ್ದರು. 2024ರ ಸಾರ್ವತ್ರಿಕ ಚುನಾವಣೆ ನಡೆಯುವವರೆಗೆ ನಾನು ಈ ಮನೆಯಲ್ಲಿ ಉಳಿಯಲು ಅವಕಾಶ ನೀಡುವಂತೆ ನಿರ್ದೇಶನ ನೀಡಬೇಕು ಎಂದು ಕೋರ್ಟ್​​ಗೆ ಮನವಿಯನ್ನು ಸಲ್ಲಿಸಿದರು. ಆದರೆ ಇದು ನಮ್ಮಿಂದ ಸಾಧ್ಯವಿಲ್ಲ, ನೀವು ಡೈರೆಕ್ಟರೇಟ್ ಆಫ್ ಎಸ್ಟೇಟ್​​ಗೆ ಈ ಮನವಿಯನ್ನು ಸಲ್ಲಿಸಿ ಎಂದು ದೆಹಲಿ ಹೈಕೋರ್ಟ್​​​ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us