AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್​ ಘರ್ ತಿರಂಗಾ ಯಾತ್ರೆ ವೇಳೆ ಮಾಜಿ ಡಿಸಿಎಂ ನಿತಿನ್​ ಪಟೇಲ್​ಗೆ ಗುದ್ದಿದ ಹಸು; ಕಾಲಿಗೆ ಗಾಯ

ಹರ್​ ಘರ್ ತಿರಂಗಾ ಯಾತ್ರೆ ವೇಳೆ ಮಾಜಿ ಉಪ ಮುಖ್ಯಮಂತ್ರಿ ನಿತಿನ್​ ಪಟೇಲ್​ ಅವರಿಗೆ  ಹಸು ಗುದ್ದಿ ಎತ್ತೆಸೆದ ಘಟನೆ ಗುಜರಾತನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ.

ಹರ್​ ಘರ್ ತಿರಂಗಾ ಯಾತ್ರೆ ವೇಳೆ ಮಾಜಿ ಡಿಸಿಎಂ ನಿತಿನ್​ ಪಟೇಲ್​ಗೆ ಗುದ್ದಿದ ಹಸು; ಕಾಲಿಗೆ ಗಾಯ
ಮಜಿ ಉಪ ಮುಖ್ಯಮಂತ್ರಿ ನಿತಿನ್​ ಪಟೇಲ್​
TV9 Web
| Updated By: ವಿವೇಕ ಬಿರಾದಾರ|

Updated on:Aug 13, 2022 | 6:11 PM

Share

ಗುಜರಾಜತ: ಹರ್​ ಘರ್ ತಿರಂಗಾ ಯಾತ್ರೆ ವೇಳೆ ಮಾಜಿ ಉಪ ಮುಖ್ಯಮಂತ್ರಿ ನಿತಿನ್​ ಪಟೇಲ್​ ಅವರಿಗೆ  ಹಸು ಗುದ್ದಿ ಎತ್ತೆಸೆದ ಘಟನೆ ಗುಜರಾತನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ.  ಬೀಡಾಡಿ ಹಸು ಗುದ್ದಿದ ರಭಸಕ್ಕೆ ನಿತಿನ್​ ಪಟೇಲ್ ಕುಸಿದುಬಿದ್ದಿದ್ದು, ​ಕಾಲಿಗೆ ಗಾಯವಾಗಿದೆ. ಸಧ್ಯ  ನಿತಿನ್ ಪಟೇಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 ಮಕ್ಕಳಿಗೆ ಧ್ವಜ ವಿತರಿಸುವ ಮೂಲಕ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ ತಾಯಿ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬಾ ಮೋದಿ ಅವರು ಶನಿವಾರ ಗುಜರಾತ್‌ನ ಗಾಂಧಿನಗರ ನಗರದ ಹೊರವಲಯದಲ್ಲಿರುವ ತಮ್ಮ ನಿವಾಸದಲ್ಲಿ ಮಕ್ಕಳಿಗೆ ರಾಷ್ಟ್ರಧ್ವಜವನ್ನು ವಿತರಿಸಿದರು. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಶನಿವಾರ ರಾಜ್ಯ ರಾಜಧಾನಿಯ ಮಕ್ಕಳ ವಿಶ್ವವಿದ್ಯಾಲಯದಲ್ಲಿ 100 ಅಡಿ ಎತ್ತರದ ಧ್ವಜ ಕಂಬದ ಮೇಲೆ ಬೃಹತ್ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ನೆನಪಿಗಾಗಿ ಮೂರು ದಿನಗಳ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಅಭಿಯಾನದ ಅಡಿಯಲ್ಲಿ ಹೀರಾಬಾ ಮೋದಿ ಅವರು ತಮ್ಮ ನಿವಾಸದಲ್ಲಿ ಮಕ್ಕಳಿಗೆ ರಾಷ್ಟ್ರಧ್ವಜಗಳನ್ನು ವಿತರಿಸಿದರು ಮತ್ತು ಅವರೊಂದಿಗೆ ತ್ರಿವರ್ಣ ಧ್ವಜವನ್ನು ಬೀಸಿದರು ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಅವರು ಪ್ರಧಾನಿಯವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಇದ್ದರು. ಗುಜರಾತ್‌ನ ವಿವಿಧ ಭಾಗಗಳಲ್ಲಿ ತಿರಂಗ ಯಾತ್ರೆ ಆಯೋಜಿಸಲಾಗಿದ್ದು, ಬಿಜೆಪಿ ಶಾಸಕರು ಮತ್ತು ಸಚಿವರು ತ್ರಿವರ್ಣ ಧ್ವಜವನ್ನು ಹೊತ್ತ ಜನರೊಂದಿಗೆ ರ್ಯಾಲಿಗಳಲ್ಲಿ ಭಾಗವಹಿಸಿದ್ದರು.

ಇದಕ್ಕೂ ಮುನ್ನ ಗುಜರಾತ್ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ಅವರು ಮೆಹ್ಸಾನಾ ಜಿಲ್ಲೆಯ ವಿಜಾಪುರದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕರು, ಶಾಸಕರು ಮತ್ತು ಮಾಜಿ ಶಾಸಕರ ಸಮ್ಮುಖದಲ್ಲಿ ಏಳು ಕಿ.ಮೀ. ರ್ಯಾಲಿ ನಡೆಸಿದರು.

Published On - 6:03 pm, Sat, 13 August 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ