AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್​ ಘರ್ ತಿರಂಗಾ ಯಾತ್ರೆ ವೇಳೆ ಮಾಜಿ ಡಿಸಿಎಂ ನಿತಿನ್​ ಪಟೇಲ್​ಗೆ ಗುದ್ದಿದ ಹಸು; ಕಾಲಿಗೆ ಗಾಯ

ಹರ್​ ಘರ್ ತಿರಂಗಾ ಯಾತ್ರೆ ವೇಳೆ ಮಾಜಿ ಉಪ ಮುಖ್ಯಮಂತ್ರಿ ನಿತಿನ್​ ಪಟೇಲ್​ ಅವರಿಗೆ  ಹಸು ಗುದ್ದಿ ಎತ್ತೆಸೆದ ಘಟನೆ ಗುಜರಾತನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ.

ಹರ್​ ಘರ್ ತಿರಂಗಾ ಯಾತ್ರೆ ವೇಳೆ ಮಾಜಿ ಡಿಸಿಎಂ ನಿತಿನ್​ ಪಟೇಲ್​ಗೆ ಗುದ್ದಿದ ಹಸು; ಕಾಲಿಗೆ ಗಾಯ
ಮಜಿ ಉಪ ಮುಖ್ಯಮಂತ್ರಿ ನಿತಿನ್​ ಪಟೇಲ್​
TV9 Web
| Edited By: |

Updated on:Aug 13, 2022 | 6:11 PM

Share

ಗುಜರಾಜತ: ಹರ್​ ಘರ್ ತಿರಂಗಾ ಯಾತ್ರೆ ವೇಳೆ ಮಾಜಿ ಉಪ ಮುಖ್ಯಮಂತ್ರಿ ನಿತಿನ್​ ಪಟೇಲ್​ ಅವರಿಗೆ  ಹಸು ಗುದ್ದಿ ಎತ್ತೆಸೆದ ಘಟನೆ ಗುಜರಾತನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ.  ಬೀಡಾಡಿ ಹಸು ಗುದ್ದಿದ ರಭಸಕ್ಕೆ ನಿತಿನ್​ ಪಟೇಲ್ ಕುಸಿದುಬಿದ್ದಿದ್ದು, ​ಕಾಲಿಗೆ ಗಾಯವಾಗಿದೆ. ಸಧ್ಯ  ನಿತಿನ್ ಪಟೇಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 ಮಕ್ಕಳಿಗೆ ಧ್ವಜ ವಿತರಿಸುವ ಮೂಲಕ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ ತಾಯಿ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬಾ ಮೋದಿ ಅವರು ಶನಿವಾರ ಗುಜರಾತ್‌ನ ಗಾಂಧಿನಗರ ನಗರದ ಹೊರವಲಯದಲ್ಲಿರುವ ತಮ್ಮ ನಿವಾಸದಲ್ಲಿ ಮಕ್ಕಳಿಗೆ ರಾಷ್ಟ್ರಧ್ವಜವನ್ನು ವಿತರಿಸಿದರು. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಶನಿವಾರ ರಾಜ್ಯ ರಾಜಧಾನಿಯ ಮಕ್ಕಳ ವಿಶ್ವವಿದ್ಯಾಲಯದಲ್ಲಿ 100 ಅಡಿ ಎತ್ತರದ ಧ್ವಜ ಕಂಬದ ಮೇಲೆ ಬೃಹತ್ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ನೆನಪಿಗಾಗಿ ಮೂರು ದಿನಗಳ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಅಭಿಯಾನದ ಅಡಿಯಲ್ಲಿ ಹೀರಾಬಾ ಮೋದಿ ಅವರು ತಮ್ಮ ನಿವಾಸದಲ್ಲಿ ಮಕ್ಕಳಿಗೆ ರಾಷ್ಟ್ರಧ್ವಜಗಳನ್ನು ವಿತರಿಸಿದರು ಮತ್ತು ಅವರೊಂದಿಗೆ ತ್ರಿವರ್ಣ ಧ್ವಜವನ್ನು ಬೀಸಿದರು ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಅವರು ಪ್ರಧಾನಿಯವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಇದ್ದರು. ಗುಜರಾತ್‌ನ ವಿವಿಧ ಭಾಗಗಳಲ್ಲಿ ತಿರಂಗ ಯಾತ್ರೆ ಆಯೋಜಿಸಲಾಗಿದ್ದು, ಬಿಜೆಪಿ ಶಾಸಕರು ಮತ್ತು ಸಚಿವರು ತ್ರಿವರ್ಣ ಧ್ವಜವನ್ನು ಹೊತ್ತ ಜನರೊಂದಿಗೆ ರ್ಯಾಲಿಗಳಲ್ಲಿ ಭಾಗವಹಿಸಿದ್ದರು.

ಇದಕ್ಕೂ ಮುನ್ನ ಗುಜರಾತ್ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ಅವರು ಮೆಹ್ಸಾನಾ ಜಿಲ್ಲೆಯ ವಿಜಾಪುರದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕರು, ಶಾಸಕರು ಮತ್ತು ಮಾಜಿ ಶಾಸಕರ ಸಮ್ಮುಖದಲ್ಲಿ ಏಳು ಕಿ.ಮೀ. ರ್ಯಾಲಿ ನಡೆಸಿದರು.

Published On - 6:03 pm, Sat, 13 August 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?