AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನಲ್ಲಿ ಮತ್ತೆ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಹಸು; ರೈಲಿನ ಮುಂಭಾಗ ಜಖಂ, ಪ್ರಯಾಣಿಕರು ಸೇಫ್

ರೈಲ್ವೆ ಹಳಿ ಮೇಲೆ ನಿಂತಿದ್ದ ಹಸುವಿಗೆ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ. ಗುಜರಾತ್​ನ ಅಟಲ್​ ಸ್ಟೇಷನ್​ಗೆ ತೆರಳುವಾಗ ಈ ಘಟನೆ ನಡೆದಿದೆ.

ಗುಜರಾತ್​​ನಲ್ಲಿ ಮತ್ತೆ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಹಸು; ರೈಲಿನ ಮುಂಭಾಗ ಜಖಂ, ಪ್ರಯಾಣಿಕರು ಸೇಫ್
ಗುಜರಾತ್​​ನಲ್ಲಿ ಮತ್ತೆ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಹಸು
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 29, 2022 | 1:31 PM

ಮುಂಬೈ: ಇತ್ತೀಚೆಗಷ್ಟೇ ಎಮ್ಮೆಗಳು ಡಿಕ್ಕಿ ಹೊಡೆದಿದ್ದರಿಂದ ಒಂದು ವಂದೇ ಭಾರತ್ ಎಕ್ಸ್​ಪ್ರೆಸ್ (Vande Bharat Express) ರೈಲಿನ ಮುಂಭಾಗ ಜಖಂ ಆಗಿತ್ತು. ಇದೀಗ ಮತ್ತೊಮ್ಮೆ ಅದೇ ರೀತಿಯ ಘಟನೆಯೊಂದು ನಡೆದಿದೆ. ಹಸುವಿಗೆ ಮುಂಬೈನಿಂದ ಅಹಮದಾಬಾದ್​ಗೆ ತೆರಳುತ್ತಿದ್ದ ವಂದೇ ಭಾರತ್​ ರೈಲು ಡಿಕ್ಕಿ ಹೊಡೆದಿದ್ದರಿಂದ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ.

ಗುಜರಾತ್​ನ ಅಟಲ್​ ಸ್ಟೇಷನ್​ಗೆ ತೆರಳುವಾಗ ಈ ಘಟನೆ ನಡೆದಿದೆ. ರೈಲ್ವೆ ಹಳಿ ಮೇಲೆ ನಿಂತಿದ್ದ ಹಸುವಿಗೆ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ. ಈ ಘಟನೆ ನಡೆದ ನಂತರ ಕೆಲಕಾಲ ರೈಲನ್ನು ನಿಲ್ಲಿಸಲಾಯಿತು.

ಅತಿ ವೇಗದಲ್ಲಿ ಬರುತ್ತಿದ್ದ ವಂದೇ ಭಾರತ್ ರೈಲಿಗೆ ಹಸು ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಇಂದು ವಂದೇ ಭಾರತ್ ರೈಲು ಗುಜರಾತ್‌ನ ವಲ್ಸಾದ್‌ನಿಂದ ಹಾದು ಹೋಗುತ್ತಿದ್ದಾಗ ಹಸುವೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಆದರೆ, ಇದರಿಂದ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಈ ಘಟನೆಯ ಬಳಿಕ ರೈಲು ಕೆಲಕಾಲ ಅದೇ ಸ್ಥಳದಲ್ಲಿ ನಿಂತಿತ್ತು. ಸ್ವಲ್ಪ ಸಮಯದ ನಂತರ ರೈಲನ್ನು ಮುಂದಕ್ಕೆ ಕಳುಹಿಸಲಾಯಿತು.

ಇದನ್ನೂ ಓದಿ: Vande Bharat Express: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಎಮ್ಮೆಗಳ ಹಿಂಡಿಗೆ ಡಿಕ್ಕಿ, ಇಂಜಿನ್‌ನ ಮುಂಭಾಗಕ್ಕೆ ಹಾನಿ

ಗುಜರಾತ್‌ನಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲು 1 ತಿಂಗಳಲ್ಲಿ ಮೂರನೇ ಬಾರಿಗೆ ಪ್ರಾಣಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಇದಕ್ಕೂ ಮೊದಲು ಈ ಹೈಸ್ಪೀಡ್ ರೈಲು ಅಕ್ಟೋಬರ್ 6ರಂದು ಗಾಂಧಿನಗರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಆನಂದ್ ನಿಲ್ದಾಣದಲ್ಲಿ ಹಸುವಿಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗದ ಭಾಗವು ಹಾನಿಗೊಳಗಾಗಿತ್ತು. ಆನಂದ್‌ನಲ್ಲಿ ಹಸುವಿಗೆ ಡಿಕ್ಕಿ ಹೊಡೆಯುವ ಎರಡು ದಿನಗಳ ಹಿಂದೆ, ಈ ರೈಲು ಅಹಮದಾಬಾದ್ ಬಳಿಯ ವತ್ವಾದಲ್ಲಿ 4 ಎಮ್ಮೆಗಳಿಗೆ ಡಿಕ್ಕಿ ಹೊಡೆದಿತ್ತು. ಆಗಲೂ ರೈಲಿನ ಮುಂಭಾಗಕ್ಕೆ ಹಾನಿಯಾಗಿತ್ತು.

ಬಳಿಕ ಎಮ್ಮೆಗಳ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಗುಜರಾತ್‌ನಲ್ಲಿ ಹಸುಗಳು ಮತ್ತು ಎಮ್ಮೆಗಳನ್ನು ಸಾಕುತ್ತಿರುವವರಿಗೆ ವಂದೇ ಭಾರತ್ ಎಕ್ಸ್​ಪ್ರೆಸ್​​ನ ವೇಳಾಪಟ್ಟಿಯ ಬಗ್ಗೆ ತಿಳಿದಿಲ್ಲ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. ಇದೇ ಕಾರಣಕ್ಕೆ ಹಸು-ಎಮ್ಮೆಗಳ ಹಿಂಡು ಹಳಿಗಳ ಮೇಲೆ ಬಂದಿವೆ. ಈಗ ಅವರಲ್ಲಿ ಜಾಗೃತಿ ಮೂಡಿಸಲು ಅಭಿಯಾನ ಆರಂಭಿಸಲಾಗುವುದು ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Sat, 29 October 22

‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ