AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನಲ್ಲಿ ಮತ್ತೆ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಹಸು; ರೈಲಿನ ಮುಂಭಾಗ ಜಖಂ, ಪ್ರಯಾಣಿಕರು ಸೇಫ್

ರೈಲ್ವೆ ಹಳಿ ಮೇಲೆ ನಿಂತಿದ್ದ ಹಸುವಿಗೆ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ. ಗುಜರಾತ್​ನ ಅಟಲ್​ ಸ್ಟೇಷನ್​ಗೆ ತೆರಳುವಾಗ ಈ ಘಟನೆ ನಡೆದಿದೆ.

ಗುಜರಾತ್​​ನಲ್ಲಿ ಮತ್ತೆ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಹಸು; ರೈಲಿನ ಮುಂಭಾಗ ಜಖಂ, ಪ್ರಯಾಣಿಕರು ಸೇಫ್
ಗುಜರಾತ್​​ನಲ್ಲಿ ಮತ್ತೆ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಹಸು
TV9 Web
| Edited By: |

Updated on:Oct 29, 2022 | 1:31 PM

Share

ಮುಂಬೈ: ಇತ್ತೀಚೆಗಷ್ಟೇ ಎಮ್ಮೆಗಳು ಡಿಕ್ಕಿ ಹೊಡೆದಿದ್ದರಿಂದ ಒಂದು ವಂದೇ ಭಾರತ್ ಎಕ್ಸ್​ಪ್ರೆಸ್ (Vande Bharat Express) ರೈಲಿನ ಮುಂಭಾಗ ಜಖಂ ಆಗಿತ್ತು. ಇದೀಗ ಮತ್ತೊಮ್ಮೆ ಅದೇ ರೀತಿಯ ಘಟನೆಯೊಂದು ನಡೆದಿದೆ. ಹಸುವಿಗೆ ಮುಂಬೈನಿಂದ ಅಹಮದಾಬಾದ್​ಗೆ ತೆರಳುತ್ತಿದ್ದ ವಂದೇ ಭಾರತ್​ ರೈಲು ಡಿಕ್ಕಿ ಹೊಡೆದಿದ್ದರಿಂದ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ.

ಗುಜರಾತ್​ನ ಅಟಲ್​ ಸ್ಟೇಷನ್​ಗೆ ತೆರಳುವಾಗ ಈ ಘಟನೆ ನಡೆದಿದೆ. ರೈಲ್ವೆ ಹಳಿ ಮೇಲೆ ನಿಂತಿದ್ದ ಹಸುವಿಗೆ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ. ಈ ಘಟನೆ ನಡೆದ ನಂತರ ಕೆಲಕಾಲ ರೈಲನ್ನು ನಿಲ್ಲಿಸಲಾಯಿತು.

ಅತಿ ವೇಗದಲ್ಲಿ ಬರುತ್ತಿದ್ದ ವಂದೇ ಭಾರತ್ ರೈಲಿಗೆ ಹಸು ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಇಂದು ವಂದೇ ಭಾರತ್ ರೈಲು ಗುಜರಾತ್‌ನ ವಲ್ಸಾದ್‌ನಿಂದ ಹಾದು ಹೋಗುತ್ತಿದ್ದಾಗ ಹಸುವೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಆದರೆ, ಇದರಿಂದ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಈ ಘಟನೆಯ ಬಳಿಕ ರೈಲು ಕೆಲಕಾಲ ಅದೇ ಸ್ಥಳದಲ್ಲಿ ನಿಂತಿತ್ತು. ಸ್ವಲ್ಪ ಸಮಯದ ನಂತರ ರೈಲನ್ನು ಮುಂದಕ್ಕೆ ಕಳುಹಿಸಲಾಯಿತು.

ಇದನ್ನೂ ಓದಿ: Vande Bharat Express: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಎಮ್ಮೆಗಳ ಹಿಂಡಿಗೆ ಡಿಕ್ಕಿ, ಇಂಜಿನ್‌ನ ಮುಂಭಾಗಕ್ಕೆ ಹಾನಿ

ಗುಜರಾತ್‌ನಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲು 1 ತಿಂಗಳಲ್ಲಿ ಮೂರನೇ ಬಾರಿಗೆ ಪ್ರಾಣಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಇದಕ್ಕೂ ಮೊದಲು ಈ ಹೈಸ್ಪೀಡ್ ರೈಲು ಅಕ್ಟೋಬರ್ 6ರಂದು ಗಾಂಧಿನಗರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಆನಂದ್ ನಿಲ್ದಾಣದಲ್ಲಿ ಹಸುವಿಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗದ ಭಾಗವು ಹಾನಿಗೊಳಗಾಗಿತ್ತು. ಆನಂದ್‌ನಲ್ಲಿ ಹಸುವಿಗೆ ಡಿಕ್ಕಿ ಹೊಡೆಯುವ ಎರಡು ದಿನಗಳ ಹಿಂದೆ, ಈ ರೈಲು ಅಹಮದಾಬಾದ್ ಬಳಿಯ ವತ್ವಾದಲ್ಲಿ 4 ಎಮ್ಮೆಗಳಿಗೆ ಡಿಕ್ಕಿ ಹೊಡೆದಿತ್ತು. ಆಗಲೂ ರೈಲಿನ ಮುಂಭಾಗಕ್ಕೆ ಹಾನಿಯಾಗಿತ್ತು.

ಬಳಿಕ ಎಮ್ಮೆಗಳ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಗುಜರಾತ್‌ನಲ್ಲಿ ಹಸುಗಳು ಮತ್ತು ಎಮ್ಮೆಗಳನ್ನು ಸಾಕುತ್ತಿರುವವರಿಗೆ ವಂದೇ ಭಾರತ್ ಎಕ್ಸ್​ಪ್ರೆಸ್​​ನ ವೇಳಾಪಟ್ಟಿಯ ಬಗ್ಗೆ ತಿಳಿದಿಲ್ಲ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. ಇದೇ ಕಾರಣಕ್ಕೆ ಹಸು-ಎಮ್ಮೆಗಳ ಹಿಂಡು ಹಳಿಗಳ ಮೇಲೆ ಬಂದಿವೆ. ಈಗ ಅವರಲ್ಲಿ ಜಾಗೃತಿ ಮೂಡಿಸಲು ಅಭಿಯಾನ ಆರಂಭಿಸಲಾಗುವುದು ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Sat, 29 October 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್