AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನುವಾರುಗಳ ಅಕ್ರಮ ಸಾಗಣೆ ತಡೆಯಲು ಹೋದ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ; 12 ಪೊಲೀಸ್​ ಸಿಬ್ಬಂದಿಗೆ ಗಾಯ, ಆಸ್ಪತ್ರೆಗೆ ದಾಖಲು

ಪೊಲೀಸರನ್ನು ಕಾಣುತ್ತಿದ್ದಂತೆ ಜಾನುವಾರು ಕಳ್ಳಸಾಗಣೆದಾರರು ಮೊದಲು ಕಲ್ಲು ಹೊಡೆಯಲು ಶುರು ಮಾಡಿದರು. ಅದಾದ ಬಳಿಕ ಬಾಂಬೂ ಕೋಲುಗಳನ್ನು ತೆಗೆದುಕೊಂಡು ಹೊಡೆದರು ಎಂದು ಹೇಳಲಾಗಿದೆ.

ಜಾನುವಾರುಗಳ ಅಕ್ರಮ ಸಾಗಣೆ ತಡೆಯಲು ಹೋದ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ; 12 ಪೊಲೀಸ್​ ಸಿಬ್ಬಂದಿಗೆ ಗಾಯ, ಆಸ್ಪತ್ರೆಗೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 09, 2022 | 3:26 PM

Share

ಪಶುಗಳ ಅಕ್ರಮ ಸಾಗಣೆದಾರರು ಪೊಲೀಸರ ಮೇಲೆ ಹಲ್ಲೆ ನಡೆಸಿದ ಪರಿಣಾಮ 12 ಪೊಲೀಸ್​ ಸಿಬ್ಬಂದಿ ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ ಕೂಚ್​ ಬೇಹರ್​​​ನಲ್ಲಿ ಶನಿವಾರ ರಾತ್ರಿ ನಡೆದಿದೆ.  ಭಾರತ-ಬಾಂಗ್ಲಾದೇಶ ಗಡಿ ಸಮೀಪ ಇರುವ, ಮೇಖಾಲಿಗಂಜ್​ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಈ ಹಲ್ಲೆ ನಡೆದಿದ್ದಾಗಿ ವರದಿಯಾಗಿದೆ. ಇಲ್ಲಿ ಒಂದಷ್ಟು ಮಂದಿ ಜಾನುವಾರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಅದರಂತೆ ಸಾಗಣೆದಾರರನ್ನು ಸೆರೆಹಿಡಿಯಲು ಪೊಲೀಸರು ಹೊಂಚು ಹಾಕಿದ್ದರು. ಆದರೆ ಅವರು ಪೊಲೀಸರ ಮೇಲೆಯೇ ಗಂಭೀರ ಸ್ವರೂಪದ ಹಲ್ಲೆ ನಡೆಸಿದ್ದಾರೆ. ಈ ಕಳ್ಳಸಾಗಣೆದಾರರಲ್ಲಿ ಮಹಿಳೆಯರೂ  ಇದ್ದಾರೆ, ಈ ಮಹಿಳೆಯರೂ ನಮ್ಮ ಮೇಲೆ ದಾಳಿಗೆ ಬಂದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಪೊಲೀಸರನ್ನು ಕಾಣುತ್ತಿದ್ದಂತೆ ಜಾನುವಾರು ಕಳ್ಳಸಾಗಣೆದಾರರು ಮೊದಲು ಕಲ್ಲು ಹೊಡೆಯಲು ಶುರು ಮಾಡಿದರು. ಅದಾದ ಬಳಿಕ ಬಾಂಬೂ ಕೋಲುಗಳನ್ನು ತೆಗೆದುಕೊಂಡು ಹೊಡೆದರು ಎಂದು ಹೇಳಲಾಗಿದೆ. ಸದ್ಯ ಗಾಯಗೊಂಡ ಪೊಲೀಸರನ್ನು ಮೆಖಾಲಿಗಂಜ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗಿದ್ದಾಗ್ಯೂ ಪೊಲೀಸರು ಸುಮ್ಮನೆ ಬರಲಿಲ್ಲ. ನಾಲ್ವರು ಮಹಿಳೆಯರು ಸೇರಿ, ಆರು ಸ್ಮಗ್ಲರ್​ಗಳನ್ನು ಬಂಧಿಸಿದ್ದಾರೆ. ಆ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣವಿದ್ದು, ಅಲ್ಲಿ ಹೆಚ್ಚಿನ ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇವರು ಜಾನುವಾರುಗಳನ್ನು ಗಡಿಯಾಚೆಗೆ ಅಕ್ರಮವಾಗಿ ಸಾಗಿಸುತ್ತಿದ್ದರು. ಒಟ್ಟು 34 ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನು ನಿನ್ನೆ ಮಾಲ್ಡಾದಲ್ಲಿ ಗಡಿ ಭದ್ರತಾ ಪಡೆಯ ಸೈನಿಕರು  ಇಬ್ಬರು ಜಾನುವಾರು ಸ್ಮಗ್ಲರ್​ಗಳನ್ನು ಅರೆಸ್ಟ್ ಮಾಡಿದ್ದರು.

ಇದನ್ನೂ ಓದಿ: ಇಬ್ಬರು ವಿಕೆಟ್ ಕೀಪರ್​ಗೆ ಗಾಯ: ಬದಲಿ ಆಟಗಾರನಾಗಿ ಕಣಕ್ಕಿಳಿದು ದಾಖಲೆ ಬರೆದ ಯುವ ಆಟಗಾರ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು