AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನುವಾರುಗಳ ಅಕ್ರಮ ಸಾಗಣೆ ತಡೆಯಲು ಹೋದ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ; 12 ಪೊಲೀಸ್​ ಸಿಬ್ಬಂದಿಗೆ ಗಾಯ, ಆಸ್ಪತ್ರೆಗೆ ದಾಖಲು

ಪೊಲೀಸರನ್ನು ಕಾಣುತ್ತಿದ್ದಂತೆ ಜಾನುವಾರು ಕಳ್ಳಸಾಗಣೆದಾರರು ಮೊದಲು ಕಲ್ಲು ಹೊಡೆಯಲು ಶುರು ಮಾಡಿದರು. ಅದಾದ ಬಳಿಕ ಬಾಂಬೂ ಕೋಲುಗಳನ್ನು ತೆಗೆದುಕೊಂಡು ಹೊಡೆದರು ಎಂದು ಹೇಳಲಾಗಿದೆ.

ಜಾನುವಾರುಗಳ ಅಕ್ರಮ ಸಾಗಣೆ ತಡೆಯಲು ಹೋದ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ; 12 ಪೊಲೀಸ್​ ಸಿಬ್ಬಂದಿಗೆ ಗಾಯ, ಆಸ್ಪತ್ರೆಗೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 09, 2022 | 3:26 PM

Share

ಪಶುಗಳ ಅಕ್ರಮ ಸಾಗಣೆದಾರರು ಪೊಲೀಸರ ಮೇಲೆ ಹಲ್ಲೆ ನಡೆಸಿದ ಪರಿಣಾಮ 12 ಪೊಲೀಸ್​ ಸಿಬ್ಬಂದಿ ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ ಕೂಚ್​ ಬೇಹರ್​​​ನಲ್ಲಿ ಶನಿವಾರ ರಾತ್ರಿ ನಡೆದಿದೆ.  ಭಾರತ-ಬಾಂಗ್ಲಾದೇಶ ಗಡಿ ಸಮೀಪ ಇರುವ, ಮೇಖಾಲಿಗಂಜ್​ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಈ ಹಲ್ಲೆ ನಡೆದಿದ್ದಾಗಿ ವರದಿಯಾಗಿದೆ. ಇಲ್ಲಿ ಒಂದಷ್ಟು ಮಂದಿ ಜಾನುವಾರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಅದರಂತೆ ಸಾಗಣೆದಾರರನ್ನು ಸೆರೆಹಿಡಿಯಲು ಪೊಲೀಸರು ಹೊಂಚು ಹಾಕಿದ್ದರು. ಆದರೆ ಅವರು ಪೊಲೀಸರ ಮೇಲೆಯೇ ಗಂಭೀರ ಸ್ವರೂಪದ ಹಲ್ಲೆ ನಡೆಸಿದ್ದಾರೆ. ಈ ಕಳ್ಳಸಾಗಣೆದಾರರಲ್ಲಿ ಮಹಿಳೆಯರೂ  ಇದ್ದಾರೆ, ಈ ಮಹಿಳೆಯರೂ ನಮ್ಮ ಮೇಲೆ ದಾಳಿಗೆ ಬಂದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಪೊಲೀಸರನ್ನು ಕಾಣುತ್ತಿದ್ದಂತೆ ಜಾನುವಾರು ಕಳ್ಳಸಾಗಣೆದಾರರು ಮೊದಲು ಕಲ್ಲು ಹೊಡೆಯಲು ಶುರು ಮಾಡಿದರು. ಅದಾದ ಬಳಿಕ ಬಾಂಬೂ ಕೋಲುಗಳನ್ನು ತೆಗೆದುಕೊಂಡು ಹೊಡೆದರು ಎಂದು ಹೇಳಲಾಗಿದೆ. ಸದ್ಯ ಗಾಯಗೊಂಡ ಪೊಲೀಸರನ್ನು ಮೆಖಾಲಿಗಂಜ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗಿದ್ದಾಗ್ಯೂ ಪೊಲೀಸರು ಸುಮ್ಮನೆ ಬರಲಿಲ್ಲ. ನಾಲ್ವರು ಮಹಿಳೆಯರು ಸೇರಿ, ಆರು ಸ್ಮಗ್ಲರ್​ಗಳನ್ನು ಬಂಧಿಸಿದ್ದಾರೆ. ಆ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣವಿದ್ದು, ಅಲ್ಲಿ ಹೆಚ್ಚಿನ ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇವರು ಜಾನುವಾರುಗಳನ್ನು ಗಡಿಯಾಚೆಗೆ ಅಕ್ರಮವಾಗಿ ಸಾಗಿಸುತ್ತಿದ್ದರು. ಒಟ್ಟು 34 ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನು ನಿನ್ನೆ ಮಾಲ್ಡಾದಲ್ಲಿ ಗಡಿ ಭದ್ರತಾ ಪಡೆಯ ಸೈನಿಕರು  ಇಬ್ಬರು ಜಾನುವಾರು ಸ್ಮಗ್ಲರ್​ಗಳನ್ನು ಅರೆಸ್ಟ್ ಮಾಡಿದ್ದರು.

ಇದನ್ನೂ ಓದಿ: ಇಬ್ಬರು ವಿಕೆಟ್ ಕೀಪರ್​ಗೆ ಗಾಯ: ಬದಲಿ ಆಟಗಾರನಾಗಿ ಕಣಕ್ಕಿಳಿದು ದಾಖಲೆ ಬರೆದ ಯುವ ಆಟಗಾರ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್