AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನುವಾರುಗಳ ಅಕ್ರಮ ಸಾಗಣೆ ತಡೆಯಲು ಹೋದ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ; 12 ಪೊಲೀಸ್​ ಸಿಬ್ಬಂದಿಗೆ ಗಾಯ, ಆಸ್ಪತ್ರೆಗೆ ದಾಖಲು

ಪೊಲೀಸರನ್ನು ಕಾಣುತ್ತಿದ್ದಂತೆ ಜಾನುವಾರು ಕಳ್ಳಸಾಗಣೆದಾರರು ಮೊದಲು ಕಲ್ಲು ಹೊಡೆಯಲು ಶುರು ಮಾಡಿದರು. ಅದಾದ ಬಳಿಕ ಬಾಂಬೂ ಕೋಲುಗಳನ್ನು ತೆಗೆದುಕೊಂಡು ಹೊಡೆದರು ಎಂದು ಹೇಳಲಾಗಿದೆ.

ಜಾನುವಾರುಗಳ ಅಕ್ರಮ ಸಾಗಣೆ ತಡೆಯಲು ಹೋದ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ; 12 ಪೊಲೀಸ್​ ಸಿಬ್ಬಂದಿಗೆ ಗಾಯ, ಆಸ್ಪತ್ರೆಗೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 09, 2022 | 3:26 PM

Share

ಪಶುಗಳ ಅಕ್ರಮ ಸಾಗಣೆದಾರರು ಪೊಲೀಸರ ಮೇಲೆ ಹಲ್ಲೆ ನಡೆಸಿದ ಪರಿಣಾಮ 12 ಪೊಲೀಸ್​ ಸಿಬ್ಬಂದಿ ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ ಕೂಚ್​ ಬೇಹರ್​​​ನಲ್ಲಿ ಶನಿವಾರ ರಾತ್ರಿ ನಡೆದಿದೆ.  ಭಾರತ-ಬಾಂಗ್ಲಾದೇಶ ಗಡಿ ಸಮೀಪ ಇರುವ, ಮೇಖಾಲಿಗಂಜ್​ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಈ ಹಲ್ಲೆ ನಡೆದಿದ್ದಾಗಿ ವರದಿಯಾಗಿದೆ. ಇಲ್ಲಿ ಒಂದಷ್ಟು ಮಂದಿ ಜಾನುವಾರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಅದರಂತೆ ಸಾಗಣೆದಾರರನ್ನು ಸೆರೆಹಿಡಿಯಲು ಪೊಲೀಸರು ಹೊಂಚು ಹಾಕಿದ್ದರು. ಆದರೆ ಅವರು ಪೊಲೀಸರ ಮೇಲೆಯೇ ಗಂಭೀರ ಸ್ವರೂಪದ ಹಲ್ಲೆ ನಡೆಸಿದ್ದಾರೆ. ಈ ಕಳ್ಳಸಾಗಣೆದಾರರಲ್ಲಿ ಮಹಿಳೆಯರೂ  ಇದ್ದಾರೆ, ಈ ಮಹಿಳೆಯರೂ ನಮ್ಮ ಮೇಲೆ ದಾಳಿಗೆ ಬಂದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಪೊಲೀಸರನ್ನು ಕಾಣುತ್ತಿದ್ದಂತೆ ಜಾನುವಾರು ಕಳ್ಳಸಾಗಣೆದಾರರು ಮೊದಲು ಕಲ್ಲು ಹೊಡೆಯಲು ಶುರು ಮಾಡಿದರು. ಅದಾದ ಬಳಿಕ ಬಾಂಬೂ ಕೋಲುಗಳನ್ನು ತೆಗೆದುಕೊಂಡು ಹೊಡೆದರು ಎಂದು ಹೇಳಲಾಗಿದೆ. ಸದ್ಯ ಗಾಯಗೊಂಡ ಪೊಲೀಸರನ್ನು ಮೆಖಾಲಿಗಂಜ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗಿದ್ದಾಗ್ಯೂ ಪೊಲೀಸರು ಸುಮ್ಮನೆ ಬರಲಿಲ್ಲ. ನಾಲ್ವರು ಮಹಿಳೆಯರು ಸೇರಿ, ಆರು ಸ್ಮಗ್ಲರ್​ಗಳನ್ನು ಬಂಧಿಸಿದ್ದಾರೆ. ಆ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣವಿದ್ದು, ಅಲ್ಲಿ ಹೆಚ್ಚಿನ ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇವರು ಜಾನುವಾರುಗಳನ್ನು ಗಡಿಯಾಚೆಗೆ ಅಕ್ರಮವಾಗಿ ಸಾಗಿಸುತ್ತಿದ್ದರು. ಒಟ್ಟು 34 ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನು ನಿನ್ನೆ ಮಾಲ್ಡಾದಲ್ಲಿ ಗಡಿ ಭದ್ರತಾ ಪಡೆಯ ಸೈನಿಕರು  ಇಬ್ಬರು ಜಾನುವಾರು ಸ್ಮಗ್ಲರ್​ಗಳನ್ನು ಅರೆಸ್ಟ್ ಮಾಡಿದ್ದರು.

ಇದನ್ನೂ ಓದಿ: ಇಬ್ಬರು ವಿಕೆಟ್ ಕೀಪರ್​ಗೆ ಗಾಯ: ಬದಲಿ ಆಟಗಾರನಾಗಿ ಕಣಕ್ಕಿಳಿದು ದಾಖಲೆ ಬರೆದ ಯುವ ಆಟಗಾರ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?