AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕೂಟರ್​​ಗೆ ಕಾರು ಡಿಕ್ಕಿ, ಓರ್ವ ಸಾವು; ಕೇರಳದ ಭೀಕರ ರಸ್ತೆ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇನ್ನೊಂದು ವಾಹನವನ್ನು ಓವರ್​​ಟೇಕ್ ಮಾಡುವುದಕ್ಕಾಗಿ ರಭಸವಾಗಿ ನುಗ್ಗಿದ ಕಾರು ಸ್ಕೂಟರ್​​ಗೆ ಡಿಕ್ಕಿ ಹೊಡೆದಿರುವುದು ವಿಡಿಯೊದಲ್ಲಿ ಕಾಣಿಸುತ್ತಿದೆ. ಕಾರು ಗುದ್ದಿದ ಭರಕ್ಕೆ ಖಾದರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಕೂಟರ್​​ಗೆ ಕಾರು ಡಿಕ್ಕಿ, ಓರ್ವ ಸಾವು; ಕೇರಳದ ಭೀಕರ ರಸ್ತೆ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಅಪಘಾತದ ದೃಶ್ಯ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 22, 2022 | 6:13 PM

Share

ಕೇರಳದ (Kerala) ಮಲಪ್ಪುರಂ (Malappuram) ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರೊಂದು ಸ್ಕೂಟರ್​​ಗೆ ಡಿಕ್ಕಿ ಹೊಡೆದಿದ್ದು, ಸ್ಕೂಟರ್ ಚಾಲಕ ಸ್ಥಳದಲ್ಲೇ ಮೃತರಾಗಿದ್ದಾರೆ. ಮೃತರನ್ನು ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಅಬ್ದುಲ್ ಖಾದರ್ ಮತ್ತು ಆತನ ಪತ್ನಿ ರುಕಿಯಾ ಸ್ಕೂಟರ್​​ನಲ್ಲಿ ಹೋಗುತ್ತಿದ್ದಾಗ ವಿರುದ್ಧ ದಿಶೆಯಿಂದ ಬಂದ ಕಾರು ಗುದ್ದಿದೆ. ಹೀಗೆ ಡಿಕ್ಕಿ ಹೊಡೆದ ರಭಸದಲ್ಲಿ ಸ್ಕೂಟರ್​​ನಲ್ಲಿ ಹಿಂಬದಿ ಸವಾರರಾಗಿದ್ದ ರುಕಿಯಾ ಮೇಲಕ್ಕೆ ಚಿಮ್ಮಿ ಬಿದ್ದಿದ್ದಾರೆ. ಅಪಘಾತದ ವೇಳೆ ರುಕಿಯಾ ಸೀಟಿನಿಂದ ಜಾರಿ ಗಾಳಿಯಲ್ಲಿ ತೇಲಿದಂತಾಗಿ ದೊಪ್ಪನೆ ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರುಕಿಯಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಂದು ವಾಹನವನ್ನು ಓವರ್​​ಟೇಕ್ ಮಾಡುವುದಕ್ಕಾಗಿ ರಭಸವಾಗಿ ನುಗ್ಗಿದ ಕಾರು ಸ್ಕೂಟರ್​​ಗೆ ಡಿಕ್ಕಿ ಹೊಡೆದಿರುವುದು ವಿಡಿಯೊದಲ್ಲಿ ಕಾಣಿಸುತ್ತಿದೆ. ಕಾರು ಗುದ್ದಿದ ಭರಕ್ಕೆ ಖಾದರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಯುಎಇಯಲ್ಲಿ ಕೆಲಸ ಮಾಡುತ್ತಿದ್ದ ಅಬ್ದುಲ್ ಖಾದರ್ ಕೆಲವು ದಿನಗಳ ಹಿಂದೆಯಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದರು. ಇವರು ತಾವನ್ನೂರ್ ನಲ್ಲಿ ಸಂಬಂಧಿಕರ ಮನೆಗೆ ಹೋಗಿ ಮರಳಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಶನಿವಾರ ಸಂಜೆ ಕುಟ್ಟಿಪುರಂ-ತಿರೂರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

Published On - 5:39 pm, Mon, 22 August 22

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ