AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸಿಕ ಅಸ್ವಸ್ಥ ಮಹಿಳೆ ಮೇಲಿನ ದೌರ್ಜನ್ಯ ತಡೆದ ಬೀದಿ ನಾಯಿ, ವಿಡಿಯೋ ವೈರಲ್

ಕೊಯಮತ್ತೂರಿನಲ್ಲಿ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಅಪ್ರಾಪ್ತ ಬಾಲಕನನ್ನು ಬೀದಿ ನಾಯಿ ಕಚ್ಚಿ ಓಡಿಸಿ ರಕ್ಷಿಸಿದೆ. ಮಹಿಳೆ ತನಗೆ ಸಿಕ್ಕ ಆಹಾರವನ್ನು ನಾಯಿಗಳೊಂದಿಗೆ ಹಂಚಿಕೊಳ್ಳುತ್ತಿದ್ದಳು. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿ ವೈರಲ್ ಆಗಿದೆ. ಪೊಲೀಸರು ಬಾಲಕನನ್ನು ಬಂಧಿಸಿದ್ದಾರೆ. ನಾಯಿಯ ನಿಷ್ಠೆ ಮತ್ತು ಸಾಹಸಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಮಾನಸಿಕ ಅಸ್ವಸ್ಥ ಮಹಿಳೆ ಮೇಲಿನ ದೌರ್ಜನ್ಯ ತಡೆದ ಬೀದಿ ನಾಯಿ, ವಿಡಿಯೋ ವೈರಲ್
ನಾಯಿಗಳು-ಸಾಂದರ್ಭಿಕ ಚಿತ್ರImage Credit source: Wikipedia
ನಯನಾ ರಾಜೀವ್
|

Updated on: Sep 04, 2026 | 2:27 PM

Share

ಕೊಯಮತ್ತೂರು, ಸೆಪ್ಟೆಂಬರ್ 04: ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಮುಂದಾಗಿದ್ದ ವ್ಯಕ್ತಿಯನ್ನು ಬೀದಿ ನಾಯಿಯೊಂದು ಕಚ್ಚಿ ಓಡಿಸಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ರಸ್ತೆಬದಿಯಲ್ಲಿದ್ದ ಅಸಹಾಯಕ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಅಪ್ರಾಪ್ತ ಬಾಲಕನ ಮೇಲೆ ಬೀದಿ ನಾಯಿ ದಾಳಿ ಮಾಡಿ ಮಹಿಳೆಯನ್ನು ರಕ್ಷಿಸಿದೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿ ಬಾಲಕನನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

ಕೊಯಮತ್ತೂರಿನ ತುಡಿಯಲೂರು ಸಮೀಪದ ಅಶೋಕಪುರಂ-ಎನ್‌ಜಿಜಿಒ (NGGO) ಕಾಲೋನಿ ರೈಲ್ವೆ ಮೇಲ್ಸೇತುವೆಯ ಸರ್ವಿಸ್ ರಸ್ತೆಬದಿಯಲ್ಲಿ ಮಹಿಳೆ ಕುಳಿತಿದ್ದರು.ಕುಡಿದ ಮತ್ತಿನಲ್ಲಿ ಬಂದ ಅಪ್ರಾಪ್ತ ಬಾಲಕ ಆಕೆಯ ಬಳಿ ತೆರಳಿದ್ದಾನೆ. ನಿರ್ಜನ ಪ್ರದೇಶವಾಗಿದ್ದರಿಂದ ಬಾಲಕ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿದ್ದಾನೆ. ಮಹಿಳೆ ರಕ್ಷಣೆಗಾಗಿ ಜೋರಾಗಿ ಕಿರುಚುತ್ತಿದ್ದಂತೆ, ರೊಚ್ಚಿಗೆದ್ದ ನಾಯಿ ಆತನ ಕಾಲುಗಳನ್ನು ಕಚ್ಚಿದ್ದರಿಂದ ಹೆದರಿದ ಬಾಲಕ ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾನೆ. ನಾಯಿಗಳು ಆತನನ್ನು ರಸ್ತೆಯುದ್ದಕ್ಕೂ ಬೆನ್ನಟ್ಟಿ ಓಡಿಸಿವೆ.

ಬೆಂಕಿ ಅನಾಹುತದ ತನಿಖೆ ವೇಳೆ ಪತ್ತೆ: ಅದೇ ಪ್ರದೇಶದ ಪೆಟ್ಟಿಗೆ ಅಂಗಡಿಯೊಂದಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದ ದೂರಿನ ತನಿಖೆ ನಡೆಸುತ್ತಿದ್ದ ತುಡಿಯಲೂರು ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದರು. ಆಗ ಅನಿರೀಕ್ಷಿತವಾಗಿ ಈ ಮಹಿಳೆಯ ಮೇಲಿನ ದೌರ್ಜನ್ಯ ಯತ್ನ ಹಾಗೂ ನಾಯಿಗಳ ರಕ್ಷಣಾ ಸಾಹಸ ಕ್ಯಾಮೆರಾದಲ್ಲಿ ಕಂಡುಬಂದಿದೆ.

ಬಾಲಾಪರಾಧಿ ಬಂಧನ: ತಕ್ಷಣವೇ ಪ್ರತ್ಯೇಕ ತನಿಖೆ ಆರಂಭಿಸಿದ ಪೊಲೀಸರು, ಗಣೇಶ್ ನಗರ ನಿವಾಸಿಯಾಗಿದ್ದ ಬಾಲಕನನ್ನು ಪತ್ತೆಹಚ್ಚಿ ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿದ್ದಾರೆ.

ಮತ್ತಷ್ಟು ಓದಿ: ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ, ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಸ್ನೇಹಕ್ಕೆ ಸಾಕ್ಷಿಯಾದ ಮೂಕ ಪ್ರಾಣಿಗಳು: ಸ್ಥಳೀಯರ ಪ್ರಕಾರ, ಸಂತ್ರಸ್ತ ಮಹಿಳೆ ಪ್ರತಿದಿನ ಅದೇ ಪ್ರದೇಶದಲ್ಲಿರುತ್ತಿದ್ದು, ಆ ಎರಡು ಬೀದಿ ನಾಯಿಗಳಿಗೆ ತನಗೆ ಸಿಗುವ ಆಹಾರದಲ್ಲಿ ಸ್ವಲ್ಪ ಪಾಲನ್ನು ಹಂಚಿಕೊಳ್ಳುತ್ತಿದ್ದಳು. ಆ ಮೂಕ ಪ್ರಾಣಿಗಳು ಆಕೆಯ ಮೇಲಿನ ಪ್ರೀತಿ ಮತ್ತು ಕೃತಜ್ಞತೆಗೆ ಪ್ರತಿಯಾಗಿ ಆಕೆಯ ಆಪತ್ಬಾಂಧವರಾಗಿ ಜೀವ ಉಳಿಸಿವೆ.

ವಿಡಿಯೋ

ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘನೆ: ಘಟನೆಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮನುಷ್ಯರಲ್ಲಿ ಕಳೆದುಹೋಗುತ್ತಿರುವ ಕರುಣೆ-ಮಾನವೀಯತೆಯನ್ನು ಬೀದಿ ನಾಯಿಗಳು ಪ್ರದರ್ಶಿಸಿವೆ ಎಂದು ನೆಟ್ಟಿಗರು ಶ್ವಾನಗಳ ನಿಷ್ಠೆಯನ್ನು ಮುಕ್ತಕಂಠದಿಂದ ಶ್ಲಾಘಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜಾಜಿನಗರ ಇಸ್ಕಾನ್ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ
ರಾಜಾಜಿನಗರ ಇಸ್ಕಾನ್ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ