ಕಾವೇರಿ ವಿವಾದ: ಕರ್ನಾಟಕದ ವಿರುದ್ಧ ತಮಿಳುನಾಡಿನಲ್ಲಿ ಪ್ರತಿಭಟನೆ, 40ಸಾವಿರಕ್ಕೂ ಅಧಿಕ ಅಂಗಡಿ ಮುಂಗಟ್ಟುಗಳು ಬಂದ್

ಕಾವೇರಿ ನೀರಿನ ಸಮರ್ಪಕ ಪೂರೈಕೆ ಇಲ್ಲದ ಕಾರಣ ಬೆಳೆಗಳಿಗೆ ಹಾನಿಯಾಗಿದೆ ಎಂದು ಆರೋಪಿಸಿ ಕರ್ನಾಟಕದ ವಿರುದ್ಧ ತಮಿಳುನಾಡು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮಿಳುನಾಡಿನ ರೈತ ಗುಂಪುಗಳು ಬುಧವಾರ ಎಂಟು ಜಿಲ್ಲೆಗಳಲ್ಲಿ ಬಂದ್‌ಗೆ ಕರೆ ನೀಡಿವೆ. ತಮ್ಮ ಪ್ರತಿಭಟನೆಯ ಮೂಲಕ ತಮಿಳುನಾಡಿಗೆ ಸಾಕಷ್ಟು ಪ್ರಮಾಣದ ಕಾವೇರಿ ನೀರು ಬಿಡುವಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ರೈತರು ಒತ್ತಾಯಿಸಿದ್ದಾರೆ.

ಕಾವೇರಿ ವಿವಾದ: ಕರ್ನಾಟಕದ ವಿರುದ್ಧ ತಮಿಳುನಾಡಿನಲ್ಲಿ ಪ್ರತಿಭಟನೆ, 40ಸಾವಿರಕ್ಕೂ ಅಧಿಕ ಅಂಗಡಿ ಮುಂಗಟ್ಟುಗಳು ಬಂದ್
ತಮಿಳುನಾಡು ಬಂದ್
Image Credit source: India Today

Updated on: Oct 11, 2023 | 12:03 PM

ಕಾವೇರಿ ನೀರಿನ ಸಮರ್ಪಕ ಪೂರೈಕೆ ಇಲ್ಲದ ಕಾರಣ ಬೆಳೆಗಳಿಗೆ ಹಾನಿಯಾಗಿದೆ ಎಂದು ಆರೋಪಿಸಿ ಕರ್ನಾಟಕದ ವಿರುದ್ಧ ತಮಿಳುನಾಡು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮಿಳುನಾಡಿನ ರೈತ ಗುಂಪುಗಳು ಬುಧವಾರ ಎಂಟು ಜಿಲ್ಲೆಗಳಲ್ಲಿ ಬಂದ್‌ಗೆ ಕರೆ ನೀಡಿವೆ. ತಮ್ಮ ಪ್ರತಿಭಟನೆಯ ಮೂಲಕ ತಮಿಳುನಾಡಿಗೆ ಸಾಕಷ್ಟು ಪ್ರಮಾಣದ ಕಾವೇರಿ ನೀರು ಬಿಡುವಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ರೈತರು ಒತ್ತಾಯಿಸಿದ್ದಾರೆ.

ತಂಜಾವೂರು, ತಿರುಚ್ಚಿ, ತಿರುವರೂರ್, ನಾಗಪಟ್ಟಿಣಂ, ಪುದುಕೊಟ್ಟೈ, ಮೈಲಾಡುತುರೈ, ಕಡಲೂರು ಮತ್ತು ಅರಿಯಲೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಹಲವಾರು ಅಂಗಡಿಗಳು ಬುಧವಾರ ಮುಚ್ಚಲ್ಪಟ್ಟಿವೆ. ಡೆಲ್ಟಾ ಜಿಲ್ಲೆಗಳ ರೈತರು ನೀರಾವರಿಗಾಗಿ ಕಾವೇರಿ ನೀರು ಬಿಡುಗಡೆಯನ್ನೇ ನೆಚ್ಚಿಕೊಂಡಿದ್ದಾರೆ.

ಪರಿಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಕಾವೇರಿ ಡೆಲ್ಟಾ ಪ್ರದೇಶದಲ್ಲಿ ಕನಿಷ್ಠ 40,000 ಎಕರೆ ಪ್ರದೇಶದಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದಾಗಿ ನಾಶವಾಗಿವೆ.

ಮತ್ತಷ್ಟು ಓದಿ: ಕಾವೇರಿ ನದಿ ನೀರು ವಿವಾದ: ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಹೇಳಿದ್ದಿಷ್ಟು

ಕಾವೇರಿ ಡೆಲ್ಟಾ ಭಾಗದ ರೈತರ ಬೆಳೆಗಳು ನೀರಿನ ಕೊರತೆಯಿಂದ ವ್ಯತಿರಿಕ್ತ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನೆರವು ಘೋಷಿಸಿದ್ದಾರೆ . ಕರ್ನಾಟಕ ಸರ್ಕಾರವು ಸಮರ್ಪಕವಾಗಿ ನೀರು ಬಿಡುವಂತೆ ಕೇಂದ್ರದ ಮಧ್ಯಸ್ಥಿಕೆಗೆ ಒತ್ತಾಯಿಸಿ, ನೆರೆಯ ತಮಿಳುನಾಡಿನ ಹಲವಾರು ಕಾರ್ಮಿಕ ಸಂಘಟನೆಗಳು ಬುಧವಾರ ಡೆಲ್ಟಾ ಜಿಲ್ಲೆಗಳಲ್ಲಿ ಬಂದ್‌ಗೆ ಕರೆ ನೀಡಿವೆ.

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಯ ಸಂಕೇತವಾಗಿ ನಾಗಪಟ್ಟಣಂನಲ್ಲಿ 12,000 ಅಂಗಡಿಗಳನ್ನು ಮುಚ್ಚಲಾಗಿದೆ. ಈ ಜಿಲ್ಲೆಗಳಲ್ಲಿ ಜನರ ದೈನಂದಿನ ಅಗತ್ಯಗಳನ್ನು ಪೂರೈಸಲು ಮಾತ್ರ ತೆರೆಯಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us