AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ: ನಡೆಯಲಿಲ್ಲ ಮೇಕೆದಾಟು ಯೋಜನೆಯ ಚರ್ಚೆ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 14ನೇ ಸಭೆ ಸೋಮವಾರ ನಡೆಯಿತು. ಸಭೆಯ ಅಜೆಂಡಾದಲ್ಲಿ ಮೇಕೆದಾಟು ಜಲಾಶಯದ ವಿಚಾರವಿತ್ತಾದರೂ ಚರ್ಚೆ ನಡೆಯಲಿಲ್ಲ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ: ನಡೆಯಲಿಲ್ಲ ಮೇಕೆದಾಟು ಯೋಜನೆಯ ಚರ್ಚೆ
ಕಾವೇರಿ ನೀರು (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Sep 27, 2021 | 8:03 PM

Share

ದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 14ನೇ ಸಭೆ ಸೋಮವಾರ ನಡೆಯಿತು. ಸಭೆಯ ಅಜೆಂಡಾದಲ್ಲಿ ಮೇಕೆದಾಟು ಜಲಾಶಯದ ವಿಚಾರವಿತ್ತಾದರೂ ಚರ್ಚೆ ನಡೆಯಲಿಲ್ಲ. ಈ ವಿಚಾರದ ಬಗ್ಗೆ ಮುಂದಿನ ಸಬೆಗಳಲ್ಲಿ ಚರ್ಚೆ ನಡೆಸುವುದಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ಹಲ್ದರ್ ಹೇಳಿದರು.

ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಡ್ಯಾಂ ವಿಚಾರವಾಗಿ ಇಂದು ಚರ್ಚೆ ನಡೆಸಿಲ್ಲ. ನಾಲ್ಕು ರಾಜ್ಯಗಳ ಅಭಿಪ್ರಾಯ ಮತ್ತು ಆದ್ಯತೆ ಆಧರಿಸಿ ಚರ್ಚೆ ಮಾಡಬೇಕು. ಇದಕ್ಕೆ ಮೂರು ರಾಜ್ಯಗಳು ವಿರೋಧಿಸುತ್ತಿವೆ. ಅವರ ವಿರೋಧದ ನಡುವೆ ಚರ್ಚೆ ಮಾಡಲು ಸಾಧ್ಯವಿಲ್ಲ. ರಾಜ್ಯಗಳು ಒಪ್ಪಿದರೆ ಮಾತ್ರ ಸಭೆಯಲ್ಲಿ ಈ ವಿಚಾರ ಚರ್ಚಿಸಲು ಸಾಧ್ಯ. ಯೋಜನೆ ಬಗ್ಗೆ ಹಲವು ಆಯಾಮಗಳಲ್ಲಿ ಚರ್ಚಿಸಬೇಕು ಎಂದು ತಿಳಿಸಿದರು.

ಅಂತರರಾಜ್ಯ ಜಲಾನಯನ ಪ್ರದೇಶಗಳ ವ್ಯಾಪ್ತಿಯಲ್ಲಿ ಯೋಜನೆ ರೂಪಿಸುತ್ತಿರುವ ಹಿನ್ನೆಲೆಯಲ್ಲಿ ವಿಸ್ತೃತ ಚರ್ಚೆ ಅನಿವಾರ್ಯ. ನಾವು ನೀರು ಹಂಚಿಕೆಯ ಬಗ್ಗೆ ಮಾತ್ರ ಚರ್ಚೆ ಮಾಡುತ್ತೇವೆ. ಬಾಕಿ ವಿಚಾರಗಳ ಬಗ್ಗೆ ಸುಪ್ರೀಂಕೋರ್ಟ್ ನಿರ್ಧರಿಸಲಿದೆ. ಇಂದಿನ ಸಭೆಯಲ್ಲಿ ನೀರು ಬಿಡುಗಡೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಕರ್ನಾಟಕದಿಂದ ನೀರು ಬಿಡುಗಡೆ ಕುರಿತು ತಮಿಳುನಾಡು, ಪುದುಚೇರಿ ಮನವಿ ಸಲ್ಲಿಸಿವೆ ಎಂದು ಹೇಳಿದರು.

ಜೂನ್ ಮತ್ತು ಸೆಪ್ಟೆಂಬರ್‌ವರೆಗಿನ ಬಾಕಿ ನೀರು ಬಿಡುಗಡೆಗೆ ಈ ರಾಜ್ಯಗಳಿಂದ ಮನವಿ ಬಂದಿದೆ. ಅಕ್ಟೋಬರ್ 7ಕ್ಕೆ ಸಭೆ ನಡೆಸಿ ನೀರು ಬಿಡುಗಡೆ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ದೆಹಲಿಯಲ್ಲಿ ಸಭೆ ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ಹಲ್ದರ್ ಮಾಹಿತಿ ನೀಡಿದರು.

(Cauvery Water Management Authority Meeting no Discussion on Mekedatu Project)

ಇದನ್ನೂ ಓದಿ: ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಸೂಚನೆ, ಮೇಕೆದಾಟು ಯೋಜನೆ ಕುರಿತು ಚರ್ಚೆ ನಡೆದಿಲ್ಲ

ಇದನ್ನೂ ಓದಿ: ಕಾವೇರಿಯ ಮತ್ತಷ್ಟು ನೀರು ಬಳಕೆಗೆ ತಮಿಳುನಾಡು ಯೋಜನೆ: ಸುಪ್ರೀಂಕೋರ್ಟ್​ಗೆ ಕರ್ನಾಟಕ ತಕರಾರು ಅರ್ಜಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ